ನಮ್ಮ ಕಾಳಗದ ಕೊನೆ!

ಬೆಳಗಾಯ್ತು ಬದುಕಿದೆ ಸೂರ್ಯಕಾಂತಿಯ ಕಂಡೆ
ಆಲಸ್ಯ ಹರಿದೋಯ್ತು!
ಕಂಬನಿ ಆರಿಽತು, ಮೈನಡುಕ ಓಡಿಽತು!
ತನುಸ್ವಾಸ್ಥ್ಯವುಳಿಯಿತು ||ಬೆಳ||

ಜನ ಜನವ ತರಿತರಿದು ಕಿರುಕರುಳ ತಿವಿತಿವಿದು
ಕೆಂಗಣ್ಣು ಕಿಡಿಕಾರಿ,
ಹಿಂದೂ ಇಸ್ಲಾಂಗಳು ದ್ವಂದ್ವಕಾಳಗ ಹೂಡಿ
ಸೌಹಾರ್ದತೆಗೆ ಬೇಡಿ-
ಅದುಯೇಸು ಕಾಲದಿಂ ತನುಸವೆದು ದಣಿದಣಿದು
ಪಡೆದಽರೊ ಈ ರಾಜ್ಯ;
ಪರಜನವ ಪರರಾಜ್ಯಕ್ಕೋಡಿಸಿ ಪಡೆದೊಂದು
ಸ್ವಾರಾಜ್ಯಕೀ ವ್ಯಾಜ್ಯ! ||ಬೆಳ||

ಹುಲ್ನೆಲ ಚಿಗುರೆಲ್ಲ ಗಿಡಕಾಡು ಕೊನರೆಲ್ಲ
ಹಸುರಾಂತ ಪೈರೆಲ್ಲ,
ನೊಂದು ಬೇಗುದಿಗೊಂಡು ಇಬ್ಬನಿಯೊಡೆ ತಾವು
ಅತ್ತಽವು ಹನಿಸೂಸಿ;
ಭಾರತಿ ಕಣ್ಣೀರೆ-ಸಹಸ್ರಾರು ಹೆಂಗಽಳ
ಅಶ್ರುಮಯಾ ಧಾರೆ,
ಮಾರ್ಜಾಲ ನೀತಿಯೆ!  ಮತಧರ್ಮ ಬ್ರಾಂತಿಯೆ!
ಲೋಭವು ಜಗವಾಳೆ!! ||ಬೆಳ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೭
Next post ಸಣ್ಣ ಸಂಗತಿ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…