ನಮ್ಮ ಕಾಳಗದ ಕೊನೆ!

ಬೆಳಗಾಯ್ತು ಬದುಕಿದೆ ಸೂರ್ಯಕಾಂತಿಯ ಕಂಡೆ
ಆಲಸ್ಯ ಹರಿದೋಯ್ತು!
ಕಂಬನಿ ಆರಿಽತು, ಮೈನಡುಕ ಓಡಿಽತು!
ತನುಸ್ವಾಸ್ಥ್ಯವುಳಿಯಿತು ||ಬೆಳ||

ಜನ ಜನವ ತರಿತರಿದು ಕಿರುಕರುಳ ತಿವಿತಿವಿದು
ಕೆಂಗಣ್ಣು ಕಿಡಿಕಾರಿ,
ಹಿಂದೂ ಇಸ್ಲಾಂಗಳು ದ್ವಂದ್ವಕಾಳಗ ಹೂಡಿ
ಸೌಹಾರ್ದತೆಗೆ ಬೇಡಿ-
ಅದುಯೇಸು ಕಾಲದಿಂ ತನುಸವೆದು ದಣಿದಣಿದು
ಪಡೆದಽರೊ ಈ ರಾಜ್ಯ;
ಪರಜನವ ಪರರಾಜ್ಯಕ್ಕೋಡಿಸಿ ಪಡೆದೊಂದು
ಸ್ವಾರಾಜ್ಯಕೀ ವ್ಯಾಜ್ಯ! ||ಬೆಳ||

ಹುಲ್ನೆಲ ಚಿಗುರೆಲ್ಲ ಗಿಡಕಾಡು ಕೊನರೆಲ್ಲ
ಹಸುರಾಂತ ಪೈರೆಲ್ಲ,
ನೊಂದು ಬೇಗುದಿಗೊಂಡು ಇಬ್ಬನಿಯೊಡೆ ತಾವು
ಅತ್ತಽವು ಹನಿಸೂಸಿ;
ಭಾರತಿ ಕಣ್ಣೀರೆ-ಸಹಸ್ರಾರು ಹೆಂಗಽಳ
ಅಶ್ರುಮಯಾ ಧಾರೆ,
ಮಾರ್ಜಾಲ ನೀತಿಯೆ!  ಮತಧರ್ಮ ಬ್ರಾಂತಿಯೆ!
ಲೋಭವು ಜಗವಾಳೆ!! ||ಬೆಳ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೭
Next post ಸಣ್ಣ ಸಂಗತಿ

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…