ಕೇರಳದ ಹುಡುಗಿಯರು

ಕೇರಳದ ಹುಡುಗಿಯರು ಸದಾ ಶೋಡಶಿಯರು
ಎಂದರೆ ಅತಿಶಯೋಕ್ತಿ ಹೌದು ಅಲ್ಲ
ಕಾರಣ ಇದ್ದೀತು ಹೀಗೆ-

ಕೇರಳದ ಮಣ್ಣು
ಉತ್ತರೂ ಬಿತ್ತರೂ ಬೆಳೆದರೂ ಕೊಯ್ದರೂ ಸದಾ
ಛಲೋ ಹೊಸ ಹೆಣ್ಣು-ಎಂದರೆ ಈ
ಸಮುದ್ರದ ಉದ್ದ ಗಾಳಿಗೆ ಮಳೆಗೆ ಬಿಸಿಲಿಗೆ
ಜೀವಂತ ಒಡ್ಡಿದ ಬೆತ್ತಲೆ ದೇಹ-

ಇಲ್ಲಿ ಈ ಬಯಲಿನ ಸೊಬಗಿನ
ತೆಂಗಿನ ನಾರಿನ ನೀರಿನ ಕೊಂಪೆಯ ಕೇರಿಯ
ಕಳ್ಳಿನ ಕಾಮದ ಜಗಳದ ಕೇಕೆಯ ಫೇರಿಯ
ಎದ್ದ ನಗರಗಳ ಬಿದ್ದ ಬೀದಿಗಳ ಜನಗಳ ಸಂಘರ್ಷದ ಸೆಕೆಗೆ

ಈ ಭೂಮಿಯಲ್ಲಿ ಅವತರಿಸಿದ ಶಾಪಗ್ರಸ್ತೆಯರು
ಈ ಭೂಮಿಯ ಸೆಳವಿಗೆ ತುಯ್ಯುತ್ತಾರೆ ಈ ಕಡಲಿನ ತೆರೆಗಳ
ಏರಿಳಿತದ ಕರೆಗೆ ಓಗೊಡುತ್ತಾರೆ

ಪ್ರಮೋದೆ ಪ್ರಮೀಳೆಯ ಸುಕುಮಾರ ಕತೆಯ ಪರಿಷೆಯಲ್ಲಿ
ದುರಂತ ಕಾಣದಿರಬಹುದು ಕಣ್ಣುಗಳ ಹಿಂದೆ
ನಿರಾಸೆ ಮಾಯ್ದಿರಬಹುದು ಕಾಡಿಗೆಯ ಹಿಂದೆ
ನಿಟ್ಟುಸಿರು ಕೇಳದಿರಬಹುದು ಚೆಲ್ಲಾಟದ ಹಿಂದೆ

ಕತೆಗೂ ವಾಸ್ತವತೆಗೂ ಅಂತರವಾಗಿ ನಿಂತ ಇವರಲ್ಲಿ
“ಆ!” ಎಂದು ಆಶ್ಚರ್ಯ ಚಿಮ್ಮಿದಾಗಲೂ ಕಣ್ಣುಗಳಲ್ಲಿ
ಅಥವಾ ವೇದನೆ ಹರಿದಾಗಲೂ ಕೆನ್ನೆಗಳಲ್ಲಿ
ಅಥವಾ ರೋಮಾಂಚ ಮೂಡಿದಾಗಲೂ ಮೈಯಲ್ಲಿ
ಬದುಕು ಒಂದಲ್ಲ ಒಂದು ವಿಧ ಮೂರ್ತಗೊಂಡಾಗಲೂ ಇವರಲ್ಲಿ

ತುರುಬಿನ ಈ ಎಣ್ಣೆಯ ಕಣ್ಣಿನ ಈ ಸೆಳಕಿನ
ಕಂಕುಳ ಈ ಬೆವರಿನ ಸುವಾಸದ ಆಕರ್ಷದ ಹಿಂದೆ
ಬದುಕಿನ ಉದಯಾಸ್ತಮದ ವ್ಯಂಗ್ಯದಲ್ಲೂ
ಇದರ ನಿಷ್ಠುರ ಕ್ರೌರ್ಯದಲ್ಲೂ

ಎಲ್ಲರನ್ನೂ ಎಚ್ಚರಿಸಿ ಹಂಗಿಸಿ ನಗುವ ಭಂಗಿ
ಹೆಜ್ಜೆಯಲ್ಲಿ ಗೆಜ್ಜೆಯಲ್ಲಿ ಇವರ ಉದಾಸೀನದ ಒಜ್ಜೆಯಲ್ಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಗಟ ಬಿಡಿಸಿರೇ
Next post ಅನಾಥ ಮಗು

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…