Home / ಕವನ / ಕವಿತೆ / ಕೇರಳದ ಹುಡುಗಿಯರು

ಕೇರಳದ ಹುಡುಗಿಯರು

ಕೇರಳದ ಹುಡುಗಿಯರು ಸದಾ ಶೋಡಶಿಯರು
ಎಂದರೆ ಅತಿಶಯೋಕ್ತಿ ಹೌದು ಅಲ್ಲ
ಕಾರಣ ಇದ್ದೀತು ಹೀಗೆ-

ಕೇರಳದ ಮಣ್ಣು
ಉತ್ತರೂ ಬಿತ್ತರೂ ಬೆಳೆದರೂ ಕೊಯ್ದರೂ ಸದಾ
ಛಲೋ ಹೊಸ ಹೆಣ್ಣು-ಎಂದರೆ ಈ
ಸಮುದ್ರದ ಉದ್ದ ಗಾಳಿಗೆ ಮಳೆಗೆ ಬಿಸಿಲಿಗೆ
ಜೀವಂತ ಒಡ್ಡಿದ ಬೆತ್ತಲೆ ದೇಹ-

ಇಲ್ಲಿ ಈ ಬಯಲಿನ ಸೊಬಗಿನ
ತೆಂಗಿನ ನಾರಿನ ನೀರಿನ ಕೊಂಪೆಯ ಕೇರಿಯ
ಕಳ್ಳಿನ ಕಾಮದ ಜಗಳದ ಕೇಕೆಯ ಫೇರಿಯ
ಎದ್ದ ನಗರಗಳ ಬಿದ್ದ ಬೀದಿಗಳ ಜನಗಳ ಸಂಘರ್ಷದ ಸೆಕೆಗೆ

ಈ ಭೂಮಿಯಲ್ಲಿ ಅವತರಿಸಿದ ಶಾಪಗ್ರಸ್ತೆಯರು
ಈ ಭೂಮಿಯ ಸೆಳವಿಗೆ ತುಯ್ಯುತ್ತಾರೆ ಈ ಕಡಲಿನ ತೆರೆಗಳ
ಏರಿಳಿತದ ಕರೆಗೆ ಓಗೊಡುತ್ತಾರೆ

ಪ್ರಮೋದೆ ಪ್ರಮೀಳೆಯ ಸುಕುಮಾರ ಕತೆಯ ಪರಿಷೆಯಲ್ಲಿ
ದುರಂತ ಕಾಣದಿರಬಹುದು ಕಣ್ಣುಗಳ ಹಿಂದೆ
ನಿರಾಸೆ ಮಾಯ್ದಿರಬಹುದು ಕಾಡಿಗೆಯ ಹಿಂದೆ
ನಿಟ್ಟುಸಿರು ಕೇಳದಿರಬಹುದು ಚೆಲ್ಲಾಟದ ಹಿಂದೆ

ಕತೆಗೂ ವಾಸ್ತವತೆಗೂ ಅಂತರವಾಗಿ ನಿಂತ ಇವರಲ್ಲಿ
“ಆ!” ಎಂದು ಆಶ್ಚರ್ಯ ಚಿಮ್ಮಿದಾಗಲೂ ಕಣ್ಣುಗಳಲ್ಲಿ
ಅಥವಾ ವೇದನೆ ಹರಿದಾಗಲೂ ಕೆನ್ನೆಗಳಲ್ಲಿ
ಅಥವಾ ರೋಮಾಂಚ ಮೂಡಿದಾಗಲೂ ಮೈಯಲ್ಲಿ
ಬದುಕು ಒಂದಲ್ಲ ಒಂದು ವಿಧ ಮೂರ್ತಗೊಂಡಾಗಲೂ ಇವರಲ್ಲಿ

ತುರುಬಿನ ಈ ಎಣ್ಣೆಯ ಕಣ್ಣಿನ ಈ ಸೆಳಕಿನ
ಕಂಕುಳ ಈ ಬೆವರಿನ ಸುವಾಸದ ಆಕರ್ಷದ ಹಿಂದೆ
ಬದುಕಿನ ಉದಯಾಸ್ತಮದ ವ್ಯಂಗ್ಯದಲ್ಲೂ
ಇದರ ನಿಷ್ಠುರ ಕ್ರೌರ್ಯದಲ್ಲೂ

ಎಲ್ಲರನ್ನೂ ಎಚ್ಚರಿಸಿ ಹಂಗಿಸಿ ನಗುವ ಭಂಗಿ
ಹೆಜ್ಜೆಯಲ್ಲಿ ಗೆಜ್ಜೆಯಲ್ಲಿ ಇವರ ಉದಾಸೀನದ ಒಜ್ಜೆಯಲ್ಲಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...