Home / ಕವನ / ಕವಿತೆ / ಮುದುಕ

ಮುದುಕ

ಹೆಗಲೇರಿ ಕುಳಿತುಬಿಟ್ಟಿದ್ದಾನೆ ಮರ್ಕಟಿ ಮುದುಕ
ಇಳಿಯುವುದಿಲ್ಲ ಕೊಡವಿದರೆ ಬೀಳುವುದಿಲ್ಲ
ಕಾಲದ ಆಯಾಮಕ್ಕೆ ಸುತ್ತಿಹಾಕಿದ
ಸ್ಥಿರವಾದ ಬಾಧಕ ಸ್ವಯಂಕೃತ
ಕೃತತ್ರೇತಗಳ ಗೂನು
ನಾನು ನಡೆಯಬೇಕಾದಲ್ಲಿ ನಡೆಯ ಗೊಡದೇ
ನಾನು ಓಡಬೇಕಾದಲ್ಲಿ ಓಡಗೊಡದೇ
ನನಗೆ ವಿಶ್ರಾಂತಿ ಬೇಕಾದಲ್ಲಿ ಬಿಡದೇ
ಹೆಗಲ ಮೇಲೇರಿ ಕುಳಿತ ಅಜೀಗರ್ತ
ಲೆಪ್ರಸಿಯಂತೆ ಮೈಗೆ
ಕ್ಯಾನ್ಸರಿನಂತೆ ಸ್ಮೃತಿಗೆ
ಅಂಟಿಕೊಂಡಿದ್ದಾನೆ ಈತ!

ಮುತ್ತಾತ
ಇವನ ಮೂಗಿನ ತುದಿಗೆ ಬೆವರಿನ ಬಿಂದು ಇಳಿದು
ದಾಡಿಯಲ್ಲಿ ಹರಿದು ಚಹಾದ ಕಪ್ಪಿಗೆ ಬಿದ್ದು
ಮೈ ಬೆವರು ಕರೆದು ನಕ್ಕಿದ್ದ ಬಾಯಿಗಟಾರ
ಈತ ದೊಡ್ಡ ಎರೆಹುಳವಾಗಿ ಉದ್ದಕ್ಕೆ ಹೊದ್ದು
ನಡು ಬಗ್ಗಿಸಿ ಲಾಳದಂತೆದ್ದು ಅಲ್ಲೇ ಬಿದ್ದು
ನಶಾದ ವೃದ್ಧನ ಬೇಡಾದ ರತಿಯ ನಿಷ್ಫಲ
ಕಚಗುಳಿಯ ಹೇಸಿಗೆ ಮೈಮೇಲೆ ಹರಿಸಿ
ಈತ ಲಕ್ವಾ ಹೊಡಿಸಿ ಮೌನಿ!

ಶೂನ್ಯಕ್ಕೆ ನೋಡಿ
ಕೊನೆಗೊಂದು ದಿನ ನನ್ನ ಹೆಗಲ ಮೇಲೆ ಚಟ್ಟಾದಲ್ಲಿ ಸವಾರಿ ಬಿಟ್ಟ
ಕಪ್ಪು ಹೊಗೆಬಂಡಿಯಂತೆ ಕಟ್ಟೆಗೆ ಇವನ ಚುಟ್ಟಾ ಸೇದಿ
ಎಲ್ಲಾ ಮುಗಿಯಿತೆಂದು ಮುಳುಗು ಹಾಕಿದರೆ
ಎದ್ದಾಗ ಹೆಗಲ ಮೇಲೆ ಇವನ ಇಮ್ಮಡಿ ಒಜ್ಜೆ
ಮಂತ್ರದ ಮಾಟದ ಸೋಗು ಹಾಕಿ ವಿಚಿತ್ರ ಮುಖವಾಡದೊಳಗೆ
ಒಸಡು ಬಿರಿಯುವ ಹಾಗೆ ಧ್ವನಿಸುತ್ತದೆ ಇದು
ಇದಕ್ಕೆ ಪ್ರತಿಧ್ವನಿ ಕೊಟ್ಟೆನೇ?
ಇದರ ವರ್ತುಲದಲ್ಲಿ ಸುತ್ತಿದೆನೇ?
ಸುತ್ತಾ ಸುತ್ತಾ ನಾನೂ ಮುದುಕಾ
ಬರಿ ಕಂಬಕ್ಕೆ ನನ್ನ ಕಟ್ಟಿ ನಾನೇ ಕಟ್ಟಿದೆನೇ?
ಕತ್ತಿ ಹಿರಿದು ಹಲ್ಗಿರಿದು
ಬರುತ್ತಿದ್ದಾನೆ-ನಾನೇ ಬಂದೆನೇ?
ಬಲಿ ಕೊಡುವುದಕ್ಕೆ ನನ್ನ ನಾನೇ?

ಏಪ್ರಿಲಿನ ಝಳಕ್ಕೆ ಒಂಟಿ ಹಾಸಿಗೆಯಲ್ಲಿ ಬಿದ್ದು
ಕಣ್ಣರಳಿಸಿ ನೋಡಿದೆ; ಸಿಗಾರು ಹಚ್ಚೆ ಸೇದಿದೆ;
ಆ ಮುದುಕ ಸತ್ತದ್ದು ನಿಜ
ಆದರೆ ಇವರಾರು ಸುತ್ತ ಮುತ್ತ
ದುಃಸ್ವಪ್ನದ ತುಂಡುಗಳು
ಬಿಸಿಲಿಗೆ ಬಿದ್ದ ಎರೆ ಹುಳುಗಳು
ಬೆಂಕಿಗೆ ಬಿದ್ದ ನರೆಳುಗಳು
ಇದು ಯಾರ ಸಂತಾನ?
ನನ್ನದೇ? ಅವನದೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...