Home / ಕವನ / ಕವಿತೆ / ಮುದುಕ

ಮುದುಕ

ಹೆಗಲೇರಿ ಕುಳಿತುಬಿಟ್ಟಿದ್ದಾನೆ ಮರ್ಕಟಿ ಮುದುಕ
ಇಳಿಯುವುದಿಲ್ಲ ಕೊಡವಿದರೆ ಬೀಳುವುದಿಲ್ಲ
ಕಾಲದ ಆಯಾಮಕ್ಕೆ ಸುತ್ತಿಹಾಕಿದ
ಸ್ಥಿರವಾದ ಬಾಧಕ ಸ್ವಯಂಕೃತ
ಕೃತತ್ರೇತಗಳ ಗೂನು
ನಾನು ನಡೆಯಬೇಕಾದಲ್ಲಿ ನಡೆಯ ಗೊಡದೇ
ನಾನು ಓಡಬೇಕಾದಲ್ಲಿ ಓಡಗೊಡದೇ
ನನಗೆ ವಿಶ್ರಾಂತಿ ಬೇಕಾದಲ್ಲಿ ಬಿಡದೇ
ಹೆಗಲ ಮೇಲೇರಿ ಕುಳಿತ ಅಜೀಗರ್ತ
ಲೆಪ್ರಸಿಯಂತೆ ಮೈಗೆ
ಕ್ಯಾನ್ಸರಿನಂತೆ ಸ್ಮೃತಿಗೆ
ಅಂಟಿಕೊಂಡಿದ್ದಾನೆ ಈತ!

ಮುತ್ತಾತ
ಇವನ ಮೂಗಿನ ತುದಿಗೆ ಬೆವರಿನ ಬಿಂದು ಇಳಿದು
ದಾಡಿಯಲ್ಲಿ ಹರಿದು ಚಹಾದ ಕಪ್ಪಿಗೆ ಬಿದ್ದು
ಮೈ ಬೆವರು ಕರೆದು ನಕ್ಕಿದ್ದ ಬಾಯಿಗಟಾರ
ಈತ ದೊಡ್ಡ ಎರೆಹುಳವಾಗಿ ಉದ್ದಕ್ಕೆ ಹೊದ್ದು
ನಡು ಬಗ್ಗಿಸಿ ಲಾಳದಂತೆದ್ದು ಅಲ್ಲೇ ಬಿದ್ದು
ನಶಾದ ವೃದ್ಧನ ಬೇಡಾದ ರತಿಯ ನಿಷ್ಫಲ
ಕಚಗುಳಿಯ ಹೇಸಿಗೆ ಮೈಮೇಲೆ ಹರಿಸಿ
ಈತ ಲಕ್ವಾ ಹೊಡಿಸಿ ಮೌನಿ!

ಶೂನ್ಯಕ್ಕೆ ನೋಡಿ
ಕೊನೆಗೊಂದು ದಿನ ನನ್ನ ಹೆಗಲ ಮೇಲೆ ಚಟ್ಟಾದಲ್ಲಿ ಸವಾರಿ ಬಿಟ್ಟ
ಕಪ್ಪು ಹೊಗೆಬಂಡಿಯಂತೆ ಕಟ್ಟೆಗೆ ಇವನ ಚುಟ್ಟಾ ಸೇದಿ
ಎಲ್ಲಾ ಮುಗಿಯಿತೆಂದು ಮುಳುಗು ಹಾಕಿದರೆ
ಎದ್ದಾಗ ಹೆಗಲ ಮೇಲೆ ಇವನ ಇಮ್ಮಡಿ ಒಜ್ಜೆ
ಮಂತ್ರದ ಮಾಟದ ಸೋಗು ಹಾಕಿ ವಿಚಿತ್ರ ಮುಖವಾಡದೊಳಗೆ
ಒಸಡು ಬಿರಿಯುವ ಹಾಗೆ ಧ್ವನಿಸುತ್ತದೆ ಇದು
ಇದಕ್ಕೆ ಪ್ರತಿಧ್ವನಿ ಕೊಟ್ಟೆನೇ?
ಇದರ ವರ್ತುಲದಲ್ಲಿ ಸುತ್ತಿದೆನೇ?
ಸುತ್ತಾ ಸುತ್ತಾ ನಾನೂ ಮುದುಕಾ
ಬರಿ ಕಂಬಕ್ಕೆ ನನ್ನ ಕಟ್ಟಿ ನಾನೇ ಕಟ್ಟಿದೆನೇ?
ಕತ್ತಿ ಹಿರಿದು ಹಲ್ಗಿರಿದು
ಬರುತ್ತಿದ್ದಾನೆ-ನಾನೇ ಬಂದೆನೇ?
ಬಲಿ ಕೊಡುವುದಕ್ಕೆ ನನ್ನ ನಾನೇ?

ಏಪ್ರಿಲಿನ ಝಳಕ್ಕೆ ಒಂಟಿ ಹಾಸಿಗೆಯಲ್ಲಿ ಬಿದ್ದು
ಕಣ್ಣರಳಿಸಿ ನೋಡಿದೆ; ಸಿಗಾರು ಹಚ್ಚೆ ಸೇದಿದೆ;
ಆ ಮುದುಕ ಸತ್ತದ್ದು ನಿಜ
ಆದರೆ ಇವರಾರು ಸುತ್ತ ಮುತ್ತ
ದುಃಸ್ವಪ್ನದ ತುಂಡುಗಳು
ಬಿಸಿಲಿಗೆ ಬಿದ್ದ ಎರೆ ಹುಳುಗಳು
ಬೆಂಕಿಗೆ ಬಿದ್ದ ನರೆಳುಗಳು
ಇದು ಯಾರ ಸಂತಾನ?
ನನ್ನದೇ? ಅವನದೇ?
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...