Home / ಕವನ / ಕವಿತೆ / ಮುದುಕ

ಮುದುಕ

ಹೆಗಲೇರಿ ಕುಳಿತುಬಿಟ್ಟಿದ್ದಾನೆ ಮರ್ಕಟಿ ಮುದುಕ
ಇಳಿಯುವುದಿಲ್ಲ ಕೊಡವಿದರೆ ಬೀಳುವುದಿಲ್ಲ
ಕಾಲದ ಆಯಾಮಕ್ಕೆ ಸುತ್ತಿಹಾಕಿದ
ಸ್ಥಿರವಾದ ಬಾಧಕ ಸ್ವಯಂಕೃತ
ಕೃತತ್ರೇತಗಳ ಗೂನು
ನಾನು ನಡೆಯಬೇಕಾದಲ್ಲಿ ನಡೆಯ ಗೊಡದೇ
ನಾನು ಓಡಬೇಕಾದಲ್ಲಿ ಓಡಗೊಡದೇ
ನನಗೆ ವಿಶ್ರಾಂತಿ ಬೇಕಾದಲ್ಲಿ ಬಿಡದೇ
ಹೆಗಲ ಮೇಲೇರಿ ಕುಳಿತ ಅಜೀಗರ್ತ
ಲೆಪ್ರಸಿಯಂತೆ ಮೈಗೆ
ಕ್ಯಾನ್ಸರಿನಂತೆ ಸ್ಮೃತಿಗೆ
ಅಂಟಿಕೊಂಡಿದ್ದಾನೆ ಈತ!

ಮುತ್ತಾತ
ಇವನ ಮೂಗಿನ ತುದಿಗೆ ಬೆವರಿನ ಬಿಂದು ಇಳಿದು
ದಾಡಿಯಲ್ಲಿ ಹರಿದು ಚಹಾದ ಕಪ್ಪಿಗೆ ಬಿದ್ದು
ಮೈ ಬೆವರು ಕರೆದು ನಕ್ಕಿದ್ದ ಬಾಯಿಗಟಾರ
ಈತ ದೊಡ್ಡ ಎರೆಹುಳವಾಗಿ ಉದ್ದಕ್ಕೆ ಹೊದ್ದು
ನಡು ಬಗ್ಗಿಸಿ ಲಾಳದಂತೆದ್ದು ಅಲ್ಲೇ ಬಿದ್ದು
ನಶಾದ ವೃದ್ಧನ ಬೇಡಾದ ರತಿಯ ನಿಷ್ಫಲ
ಕಚಗುಳಿಯ ಹೇಸಿಗೆ ಮೈಮೇಲೆ ಹರಿಸಿ
ಈತ ಲಕ್ವಾ ಹೊಡಿಸಿ ಮೌನಿ!

ಶೂನ್ಯಕ್ಕೆ ನೋಡಿ
ಕೊನೆಗೊಂದು ದಿನ ನನ್ನ ಹೆಗಲ ಮೇಲೆ ಚಟ್ಟಾದಲ್ಲಿ ಸವಾರಿ ಬಿಟ್ಟ
ಕಪ್ಪು ಹೊಗೆಬಂಡಿಯಂತೆ ಕಟ್ಟೆಗೆ ಇವನ ಚುಟ್ಟಾ ಸೇದಿ
ಎಲ್ಲಾ ಮುಗಿಯಿತೆಂದು ಮುಳುಗು ಹಾಕಿದರೆ
ಎದ್ದಾಗ ಹೆಗಲ ಮೇಲೆ ಇವನ ಇಮ್ಮಡಿ ಒಜ್ಜೆ
ಮಂತ್ರದ ಮಾಟದ ಸೋಗು ಹಾಕಿ ವಿಚಿತ್ರ ಮುಖವಾಡದೊಳಗೆ
ಒಸಡು ಬಿರಿಯುವ ಹಾಗೆ ಧ್ವನಿಸುತ್ತದೆ ಇದು
ಇದಕ್ಕೆ ಪ್ರತಿಧ್ವನಿ ಕೊಟ್ಟೆನೇ?
ಇದರ ವರ್ತುಲದಲ್ಲಿ ಸುತ್ತಿದೆನೇ?
ಸುತ್ತಾ ಸುತ್ತಾ ನಾನೂ ಮುದುಕಾ
ಬರಿ ಕಂಬಕ್ಕೆ ನನ್ನ ಕಟ್ಟಿ ನಾನೇ ಕಟ್ಟಿದೆನೇ?
ಕತ್ತಿ ಹಿರಿದು ಹಲ್ಗಿರಿದು
ಬರುತ್ತಿದ್ದಾನೆ-ನಾನೇ ಬಂದೆನೇ?
ಬಲಿ ಕೊಡುವುದಕ್ಕೆ ನನ್ನ ನಾನೇ?

ಏಪ್ರಿಲಿನ ಝಳಕ್ಕೆ ಒಂಟಿ ಹಾಸಿಗೆಯಲ್ಲಿ ಬಿದ್ದು
ಕಣ್ಣರಳಿಸಿ ನೋಡಿದೆ; ಸಿಗಾರು ಹಚ್ಚೆ ಸೇದಿದೆ;
ಆ ಮುದುಕ ಸತ್ತದ್ದು ನಿಜ
ಆದರೆ ಇವರಾರು ಸುತ್ತ ಮುತ್ತ
ದುಃಸ್ವಪ್ನದ ತುಂಡುಗಳು
ಬಿಸಿಲಿಗೆ ಬಿದ್ದ ಎರೆ ಹುಳುಗಳು
ಬೆಂಕಿಗೆ ಬಿದ್ದ ನರೆಳುಗಳು
ಇದು ಯಾರ ಸಂತಾನ?
ನನ್ನದೇ? ಅವನದೇ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...