ದ್ವಾರಕೆ ಮುಳುಗಿದಾಗ

ಮತ್ತೆ ಅಳಿದುಳಿದ ಮಂದಿ ಹೊರಟಾಗ
ಕತ್ತಲೆಗೆ
ದೂಳು ಹೊಗೆ ಮತ್ತು ಶಬ್ದ ನಿಂತಾಗ
ಕತ್ತಲೆಗೆ
ಬದುಕಿ ಉಳಿದ ಭೂಮಿಯತ್ತ ನೋಡಿದಾಗ
ಕತ್ತಲೆಗೆ

ಕಂಡದ್ದು ಕಾಣಿಸಲಿಲ್ಲ ಕೇಳಿದ್ದು ಕೇಳಿಸಲಿಲ್ಲ
ಸಮುದ್ರ ಕೊರೆದು ಹೊಡೆವ ಧ್ವನಿ ಮಾತ್ರ
ಕೇಳಿಸಿತು-ಮನುಷ್ಯ ಧ್ವನಿಯಲ್ಲ
ನೊರೆಯಾಡುವ ನೆರೆ ನೀರು ನೀರೇ
ಕಾಣಿಸಿತು-ಮಣ್ಣಲ್ಲ

ಹೀಗೆ ಅಂದಿರುಳು ಪ್ರಯಾಣದಲ್ಲಿ ಕಳೆದು ಮಸುಕಾದಾಗ
ಹೊಸ ಭೂಮಿಗೆ ಬಂದೆವು ಹೊಸ ಪರಿಸರದಲ್ಲಿ ಯಾವುದೂ
ಅರ್ಥವಾಗದೆ ನಮಗೆ ನಾವೇ ಗುರುತಿಲ್ಲದೆ ಅಲೆದೆವು
ಒಂದು ದುರಂತ ಮೌನದ ಭಾರದ ಕೆಳಗೆ ಕುಸಿದೆವು

ಭವಿಷ್ಯದಲ್ಲಿ ವಂಚಿತರಾಗಿ ಕಳೆದ ಕಲ್ಪದ ಅರೆಮರೆವಿನಲ್ಲಿ
ಚಳಿಗೆ ಗಾಳಿಗೆ ಸ್ವಲ್ಪ ಸ್ವಲ್ಪವೇ ಸವೆದೆವು
ಅನಾಥ ಶಿಲ್ಪಗಳಾಗಿ ಉಳಿದೆವು
ಅವಶೇಷಗಳಂತೆ ಕಾದೆವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಭಿಸಾರಿಕೆ
Next post ಭವ್ಯ ಅಕ್ಕರೇ

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

cheap jordans|wholesale air max|wholesale jordans|wholesale jewelry|wholesale jerseys