Home / ಕವನ / ಕವಿತೆ / ತಿರುವನಂತಪುರ ೭೧

ತಿರುವನಂತಪುರ ೭೧

ಇಳಿದೆ ಇಳಿದು ಜನಸ್ತೋಮದಲ್ಲಿ ಸೇರಿ
ಸೇರಿ ನುಗ್ಗಿದೆ ನುಗ್ಗಿ ಸ್ಟೇಶನಿನ ಹೊರಬಂದೆ
ಬಂದು ಈ ಅಗಾಧ ಜನಸ್ತೋಮದಲ್ಲಿ ನುಗ್ಗಿದೆ
ನುಗ್ಗಿ ಲಗ್ಗೇಜು ಹೆಗಲಿಗೇರಿಸಿಕೊಂಡು ಬಗ್ಗಿ ಸಾಗಿದೆ ಪ್ರವಾಹದಲ್ಲಿ
ಸಾಗಿ ನಗರಕ್ಕೆ ಬಂದು ಎದ್ದೆ ಎದ್ದು
ಇಳಿದುಕೊಳ್ಳುವುದಕ್ಕೆ ರೂಮು ಆನ್ವೇಷಿಸಿದೆ
ಶ್ರದ್ಧೆಯಿಂದ ಆತಂಕದಿಂದ ಬಳಲಿಕೆಯಿಂದ ಶ್ರದ್ಧೆಯಿಂದ
ನಡೆದೆ ಅನ್ವೇಷಿಸುತ್ತಾ ನಡೆಯುತ್ತಾ ನಡೆದೆ

ನಡೆದು ಆಶ್ರಯಕ್ಕಾಗಿ ತಿರುಗಿ
ಜನಸ್ತೋಮ ರಣಹೋಮ ಘೋಷ ತಿರುಗಿ
ಡಬಲ್ ಡೆಕ್ಕರ್ ಘೋಷ ಟರ್ಮಿನಸ್ ಘೋಷ
ಹಿಪ್ಪಿಯಿಪ್ಪಿ ಹರೇಕೃಷ್ಣ ಸೈರನ್ ಘೋಷ
ಸತ್ಯಾಗ್ರಹ ಸಮರ ಘೋಷ ತಿರುವನಂತಪುರ
ಶ್ರೀ ಪದ್ಮನಾಭ ಮಂತ್ರಘೋಷ
ಮತ್ತೆ ನನ್ನೀ ವೇಷ ಅಸಹಾಯಕ ರೋಷ
ದಾಮರಿನಂತೆ ಕುದಿದು ರೋಷ
ಚಪ್ಪಡಿಗಳೆಡೆಯಿಂದ ಬೊಕ್ಕೆ ಏಳುತ್ತಾ ಚಪ್ಪಡಿಗಳೆಡೆಯಿಂದ
ಇಂಗಿ ಹೋಗುತ್ತಾ ಹೋದೆ ತಿರುಗಿ

ವರ್ಷಗಳ ಹಿಂದೆ ಇದೇ ಬೀದಿಗಳಲ್ಲಿ ನಡೆದಿದ್ದೆ ಹೀಗೆ
ಇದೇ ಬೀದಿಗಳಲ್ಲಿ ಪಾರ್ಕುಗಳಲ್ಲಿ ಬೀದಿಗಳಲ್ಲಿ ಹೋಟೆಲುಗಳಲ್ಲಿ
ಬೀದಿಗಳಲ್ಲಿ ಅಂಗಡಿಗಳಲ್ಲಿ ಬೀದಿಗಳಲ್ಲಿ ಬೀದಿಗಳಲ್ಲಿ
ನಡೆದಿದ್ದೆ ನಡೆದಿದ್ದರೂ ವ್ಯವಹರಿಸಿದ್ದರೂ
ಪರಿಚಯ ಅನಿಸಿದ್ದರೂ ಈ
ಮೂಲ ಕಣಗಳು ಆಗಂತುಕವಾಗಿ ಬಿದ್ದಿದ್ದಾವೆ ಈಗ ಕಣ
ಕಣಗಳೂ ಎಂದಾಗ ಈ ತಿರುವ
ನಂತಪುರ ನಂತಪುರ ನಂತಪುರನಗರ ನಂತಪುರ ನಗರ
ದೀರ್ಘ ಉದ್ದಗಲ ವಾಲುತ್ತಾ
ನನ್ನೆಡೆಗೆ ಹರಿಯುತ್ತಿದೆ ಎಂದಾಗ
ಕಾಲು ಕುಸಿಯುತ್ತಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...