Home / ಕವನ / ಕವಿತೆ / ತಿರುವನಂತಪುರ ೭೧

ತಿರುವನಂತಪುರ ೭೧

ಇಳಿದೆ ಇಳಿದು ಜನಸ್ತೋಮದಲ್ಲಿ ಸೇರಿ
ಸೇರಿ ನುಗ್ಗಿದೆ ನುಗ್ಗಿ ಸ್ಟೇಶನಿನ ಹೊರಬಂದೆ
ಬಂದು ಈ ಅಗಾಧ ಜನಸ್ತೋಮದಲ್ಲಿ ನುಗ್ಗಿದೆ
ನುಗ್ಗಿ ಲಗ್ಗೇಜು ಹೆಗಲಿಗೇರಿಸಿಕೊಂಡು ಬಗ್ಗಿ ಸಾಗಿದೆ ಪ್ರವಾಹದಲ್ಲಿ
ಸಾಗಿ ನಗರಕ್ಕೆ ಬಂದು ಎದ್ದೆ ಎದ್ದು
ಇಳಿದುಕೊಳ್ಳುವುದಕ್ಕೆ ರೂಮು ಆನ್ವೇಷಿಸಿದೆ
ಶ್ರದ್ಧೆಯಿಂದ ಆತಂಕದಿಂದ ಬಳಲಿಕೆಯಿಂದ ಶ್ರದ್ಧೆಯಿಂದ
ನಡೆದೆ ಅನ್ವೇಷಿಸುತ್ತಾ ನಡೆಯುತ್ತಾ ನಡೆದೆ

ನಡೆದು ಆಶ್ರಯಕ್ಕಾಗಿ ತಿರುಗಿ
ಜನಸ್ತೋಮ ರಣಹೋಮ ಘೋಷ ತಿರುಗಿ
ಡಬಲ್ ಡೆಕ್ಕರ್ ಘೋಷ ಟರ್ಮಿನಸ್ ಘೋಷ
ಹಿಪ್ಪಿಯಿಪ್ಪಿ ಹರೇಕೃಷ್ಣ ಸೈರನ್ ಘೋಷ
ಸತ್ಯಾಗ್ರಹ ಸಮರ ಘೋಷ ತಿರುವನಂತಪುರ
ಶ್ರೀ ಪದ್ಮನಾಭ ಮಂತ್ರಘೋಷ
ಮತ್ತೆ ನನ್ನೀ ವೇಷ ಅಸಹಾಯಕ ರೋಷ
ದಾಮರಿನಂತೆ ಕುದಿದು ರೋಷ
ಚಪ್ಪಡಿಗಳೆಡೆಯಿಂದ ಬೊಕ್ಕೆ ಏಳುತ್ತಾ ಚಪ್ಪಡಿಗಳೆಡೆಯಿಂದ
ಇಂಗಿ ಹೋಗುತ್ತಾ ಹೋದೆ ತಿರುಗಿ

ವರ್ಷಗಳ ಹಿಂದೆ ಇದೇ ಬೀದಿಗಳಲ್ಲಿ ನಡೆದಿದ್ದೆ ಹೀಗೆ
ಇದೇ ಬೀದಿಗಳಲ್ಲಿ ಪಾರ್ಕುಗಳಲ್ಲಿ ಬೀದಿಗಳಲ್ಲಿ ಹೋಟೆಲುಗಳಲ್ಲಿ
ಬೀದಿಗಳಲ್ಲಿ ಅಂಗಡಿಗಳಲ್ಲಿ ಬೀದಿಗಳಲ್ಲಿ ಬೀದಿಗಳಲ್ಲಿ
ನಡೆದಿದ್ದೆ ನಡೆದಿದ್ದರೂ ವ್ಯವಹರಿಸಿದ್ದರೂ
ಪರಿಚಯ ಅನಿಸಿದ್ದರೂ ಈ
ಮೂಲ ಕಣಗಳು ಆಗಂತುಕವಾಗಿ ಬಿದ್ದಿದ್ದಾವೆ ಈಗ ಕಣ
ಕಣಗಳೂ ಎಂದಾಗ ಈ ತಿರುವ
ನಂತಪುರ ನಂತಪುರ ನಂತಪುರನಗರ ನಂತಪುರ ನಗರ
ದೀರ್ಘ ಉದ್ದಗಲ ವಾಲುತ್ತಾ
ನನ್ನೆಡೆಗೆ ಹರಿಯುತ್ತಿದೆ ಎಂದಾಗ
ಕಾಲು ಕುಸಿಯುತ್ತಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...