Home / ಕವನ / ಕವಿತೆ / ತಿರುವನಂತಪುರ ೭೧

ತಿರುವನಂತಪುರ ೭೧

ಇಳಿದೆ ಇಳಿದು ಜನಸ್ತೋಮದಲ್ಲಿ ಸೇರಿ
ಸೇರಿ ನುಗ್ಗಿದೆ ನುಗ್ಗಿ ಸ್ಟೇಶನಿನ ಹೊರಬಂದೆ
ಬಂದು ಈ ಅಗಾಧ ಜನಸ್ತೋಮದಲ್ಲಿ ನುಗ್ಗಿದೆ
ನುಗ್ಗಿ ಲಗ್ಗೇಜು ಹೆಗಲಿಗೇರಿಸಿಕೊಂಡು ಬಗ್ಗಿ ಸಾಗಿದೆ ಪ್ರವಾಹದಲ್ಲಿ
ಸಾಗಿ ನಗರಕ್ಕೆ ಬಂದು ಎದ್ದೆ ಎದ್ದು
ಇಳಿದುಕೊಳ್ಳುವುದಕ್ಕೆ ರೂಮು ಆನ್ವೇಷಿಸಿದೆ
ಶ್ರದ್ಧೆಯಿಂದ ಆತಂಕದಿಂದ ಬಳಲಿಕೆಯಿಂದ ಶ್ರದ್ಧೆಯಿಂದ
ನಡೆದೆ ಅನ್ವೇಷಿಸುತ್ತಾ ನಡೆಯುತ್ತಾ ನಡೆದೆ

ನಡೆದು ಆಶ್ರಯಕ್ಕಾಗಿ ತಿರುಗಿ
ಜನಸ್ತೋಮ ರಣಹೋಮ ಘೋಷ ತಿರುಗಿ
ಡಬಲ್ ಡೆಕ್ಕರ್ ಘೋಷ ಟರ್ಮಿನಸ್ ಘೋಷ
ಹಿಪ್ಪಿಯಿಪ್ಪಿ ಹರೇಕೃಷ್ಣ ಸೈರನ್ ಘೋಷ
ಸತ್ಯಾಗ್ರಹ ಸಮರ ಘೋಷ ತಿರುವನಂತಪುರ
ಶ್ರೀ ಪದ್ಮನಾಭ ಮಂತ್ರಘೋಷ
ಮತ್ತೆ ನನ್ನೀ ವೇಷ ಅಸಹಾಯಕ ರೋಷ
ದಾಮರಿನಂತೆ ಕುದಿದು ರೋಷ
ಚಪ್ಪಡಿಗಳೆಡೆಯಿಂದ ಬೊಕ್ಕೆ ಏಳುತ್ತಾ ಚಪ್ಪಡಿಗಳೆಡೆಯಿಂದ
ಇಂಗಿ ಹೋಗುತ್ತಾ ಹೋದೆ ತಿರುಗಿ

ವರ್ಷಗಳ ಹಿಂದೆ ಇದೇ ಬೀದಿಗಳಲ್ಲಿ ನಡೆದಿದ್ದೆ ಹೀಗೆ
ಇದೇ ಬೀದಿಗಳಲ್ಲಿ ಪಾರ್ಕುಗಳಲ್ಲಿ ಬೀದಿಗಳಲ್ಲಿ ಹೋಟೆಲುಗಳಲ್ಲಿ
ಬೀದಿಗಳಲ್ಲಿ ಅಂಗಡಿಗಳಲ್ಲಿ ಬೀದಿಗಳಲ್ಲಿ ಬೀದಿಗಳಲ್ಲಿ
ನಡೆದಿದ್ದೆ ನಡೆದಿದ್ದರೂ ವ್ಯವಹರಿಸಿದ್ದರೂ
ಪರಿಚಯ ಅನಿಸಿದ್ದರೂ ಈ
ಮೂಲ ಕಣಗಳು ಆಗಂತುಕವಾಗಿ ಬಿದ್ದಿದ್ದಾವೆ ಈಗ ಕಣ
ಕಣಗಳೂ ಎಂದಾಗ ಈ ತಿರುವ
ನಂತಪುರ ನಂತಪುರ ನಂತಪುರನಗರ ನಂತಪುರ ನಗರ
ದೀರ್ಘ ಉದ್ದಗಲ ವಾಲುತ್ತಾ
ನನ್ನೆಡೆಗೆ ಹರಿಯುತ್ತಿದೆ ಎಂದಾಗ
ಕಾಲು ಕುಸಿಯುತ್ತಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...