ತಿರುವನಂತಪುರ ೭೧

ಇಳಿದೆ ಇಳಿದು ಜನಸ್ತೋಮದಲ್ಲಿ ಸೇರಿ
ಸೇರಿ ನುಗ್ಗಿದೆ ನುಗ್ಗಿ ಸ್ಟೇಶನಿನ ಹೊರಬಂದೆ
ಬಂದು ಈ ಅಗಾಧ ಜನಸ್ತೋಮದಲ್ಲಿ ನುಗ್ಗಿದೆ
ನುಗ್ಗಿ ಲಗ್ಗೇಜು ಹೆಗಲಿಗೇರಿಸಿಕೊಂಡು ಬಗ್ಗಿ ಸಾಗಿದೆ ಪ್ರವಾಹದಲ್ಲಿ
ಸಾಗಿ ನಗರಕ್ಕೆ ಬಂದು ಎದ್ದೆ ಎದ್ದು
ಇಳಿದುಕೊಳ್ಳುವುದಕ್ಕೆ ರೂಮು ಆನ್ವೇಷಿಸಿದೆ
ಶ್ರದ್ಧೆಯಿಂದ ಆತಂಕದಿಂದ ಬಳಲಿಕೆಯಿಂದ ಶ್ರದ್ಧೆಯಿಂದ
ನಡೆದೆ ಅನ್ವೇಷಿಸುತ್ತಾ ನಡೆಯುತ್ತಾ ನಡೆದೆ

ನಡೆದು ಆಶ್ರಯಕ್ಕಾಗಿ ತಿರುಗಿ
ಜನಸ್ತೋಮ ರಣಹೋಮ ಘೋಷ ತಿರುಗಿ
ಡಬಲ್ ಡೆಕ್ಕರ್ ಘೋಷ ಟರ್ಮಿನಸ್ ಘೋಷ
ಹಿಪ್ಪಿಯಿಪ್ಪಿ ಹರೇಕೃಷ್ಣ ಸೈರನ್ ಘೋಷ
ಸತ್ಯಾಗ್ರಹ ಸಮರ ಘೋಷ ತಿರುವನಂತಪುರ
ಶ್ರೀ ಪದ್ಮನಾಭ ಮಂತ್ರಘೋಷ
ಮತ್ತೆ ನನ್ನೀ ವೇಷ ಅಸಹಾಯಕ ರೋಷ
ದಾಮರಿನಂತೆ ಕುದಿದು ರೋಷ
ಚಪ್ಪಡಿಗಳೆಡೆಯಿಂದ ಬೊಕ್ಕೆ ಏಳುತ್ತಾ ಚಪ್ಪಡಿಗಳೆಡೆಯಿಂದ
ಇಂಗಿ ಹೋಗುತ್ತಾ ಹೋದೆ ತಿರುಗಿ

ವರ್ಷಗಳ ಹಿಂದೆ ಇದೇ ಬೀದಿಗಳಲ್ಲಿ ನಡೆದಿದ್ದೆ ಹೀಗೆ
ಇದೇ ಬೀದಿಗಳಲ್ಲಿ ಪಾರ್ಕುಗಳಲ್ಲಿ ಬೀದಿಗಳಲ್ಲಿ ಹೋಟೆಲುಗಳಲ್ಲಿ
ಬೀದಿಗಳಲ್ಲಿ ಅಂಗಡಿಗಳಲ್ಲಿ ಬೀದಿಗಳಲ್ಲಿ ಬೀದಿಗಳಲ್ಲಿ
ನಡೆದಿದ್ದೆ ನಡೆದಿದ್ದರೂ ವ್ಯವಹರಿಸಿದ್ದರೂ
ಪರಿಚಯ ಅನಿಸಿದ್ದರೂ ಈ
ಮೂಲ ಕಣಗಳು ಆಗಂತುಕವಾಗಿ ಬಿದ್ದಿದ್ದಾವೆ ಈಗ ಕಣ
ಕಣಗಳೂ ಎಂದಾಗ ಈ ತಿರುವ
ನಂತಪುರ ನಂತಪುರ ನಂತಪುರನಗರ ನಂತಪುರ ನಗರ
ದೀರ್ಘ ಉದ್ದಗಲ ವಾಲುತ್ತಾ
ನನ್ನೆಡೆಗೆ ಹರಿಯುತ್ತಿದೆ ಎಂದಾಗ
ಕಾಲು ಕುಸಿಯುತ್ತಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಗಿದ ಅಧ್ಯಾಯ
Next post ಓ ಗೆಳತಿಯೇ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…