Home / ಕವನ / ಕವಿತೆ / ತಿರುವನಂತಪುರ ೭೧

ತಿರುವನಂತಪುರ ೭೧

ಇಳಿದೆ ಇಳಿದು ಜನಸ್ತೋಮದಲ್ಲಿ ಸೇರಿ
ಸೇರಿ ನುಗ್ಗಿದೆ ನುಗ್ಗಿ ಸ್ಟೇಶನಿನ ಹೊರಬಂದೆ
ಬಂದು ಈ ಅಗಾಧ ಜನಸ್ತೋಮದಲ್ಲಿ ನುಗ್ಗಿದೆ
ನುಗ್ಗಿ ಲಗ್ಗೇಜು ಹೆಗಲಿಗೇರಿಸಿಕೊಂಡು ಬಗ್ಗಿ ಸಾಗಿದೆ ಪ್ರವಾಹದಲ್ಲಿ
ಸಾಗಿ ನಗರಕ್ಕೆ ಬಂದು ಎದ್ದೆ ಎದ್ದು
ಇಳಿದುಕೊಳ್ಳುವುದಕ್ಕೆ ರೂಮು ಆನ್ವೇಷಿಸಿದೆ
ಶ್ರದ್ಧೆಯಿಂದ ಆತಂಕದಿಂದ ಬಳಲಿಕೆಯಿಂದ ಶ್ರದ್ಧೆಯಿಂದ
ನಡೆದೆ ಅನ್ವೇಷಿಸುತ್ತಾ ನಡೆಯುತ್ತಾ ನಡೆದೆ

ನಡೆದು ಆಶ್ರಯಕ್ಕಾಗಿ ತಿರುಗಿ
ಜನಸ್ತೋಮ ರಣಹೋಮ ಘೋಷ ತಿರುಗಿ
ಡಬಲ್ ಡೆಕ್ಕರ್ ಘೋಷ ಟರ್ಮಿನಸ್ ಘೋಷ
ಹಿಪ್ಪಿಯಿಪ್ಪಿ ಹರೇಕೃಷ್ಣ ಸೈರನ್ ಘೋಷ
ಸತ್ಯಾಗ್ರಹ ಸಮರ ಘೋಷ ತಿರುವನಂತಪುರ
ಶ್ರೀ ಪದ್ಮನಾಭ ಮಂತ್ರಘೋಷ
ಮತ್ತೆ ನನ್ನೀ ವೇಷ ಅಸಹಾಯಕ ರೋಷ
ದಾಮರಿನಂತೆ ಕುದಿದು ರೋಷ
ಚಪ್ಪಡಿಗಳೆಡೆಯಿಂದ ಬೊಕ್ಕೆ ಏಳುತ್ತಾ ಚಪ್ಪಡಿಗಳೆಡೆಯಿಂದ
ಇಂಗಿ ಹೋಗುತ್ತಾ ಹೋದೆ ತಿರುಗಿ

ವರ್ಷಗಳ ಹಿಂದೆ ಇದೇ ಬೀದಿಗಳಲ್ಲಿ ನಡೆದಿದ್ದೆ ಹೀಗೆ
ಇದೇ ಬೀದಿಗಳಲ್ಲಿ ಪಾರ್ಕುಗಳಲ್ಲಿ ಬೀದಿಗಳಲ್ಲಿ ಹೋಟೆಲುಗಳಲ್ಲಿ
ಬೀದಿಗಳಲ್ಲಿ ಅಂಗಡಿಗಳಲ್ಲಿ ಬೀದಿಗಳಲ್ಲಿ ಬೀದಿಗಳಲ್ಲಿ
ನಡೆದಿದ್ದೆ ನಡೆದಿದ್ದರೂ ವ್ಯವಹರಿಸಿದ್ದರೂ
ಪರಿಚಯ ಅನಿಸಿದ್ದರೂ ಈ
ಮೂಲ ಕಣಗಳು ಆಗಂತುಕವಾಗಿ ಬಿದ್ದಿದ್ದಾವೆ ಈಗ ಕಣ
ಕಣಗಳೂ ಎಂದಾಗ ಈ ತಿರುವ
ನಂತಪುರ ನಂತಪುರ ನಂತಪುರನಗರ ನಂತಪುರ ನಗರ
ದೀರ್ಘ ಉದ್ದಗಲ ವಾಲುತ್ತಾ
ನನ್ನೆಡೆಗೆ ಹರಿಯುತ್ತಿದೆ ಎಂದಾಗ
ಕಾಲು ಕುಸಿಯುತ್ತಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...