Home / ಕವನ / ಕವಿತೆ / ಕಿಟಕಿ

ಕಿಟಕಿ

ಉದ್ದಕ್ಕೆ ಏಳು
ಅಡ್ಡಕ್ಕೆ ಐದು ಸರಳುಗಳ ಕಿಟಕಿಯ ಕೆಳಗೆ
ರೋಡು ಬಜಾರು ಮನೆ ಮಠ ಬಯಲು ಬಯಲು
ಆಚೆ ಸಮುದ್ರ ಏರಿಳಿತ ಕೊರೆತ ಮೊರೆತ ಈಚೆ
ಸಂತೆಗೆ ಹೋಗುವ ಹೊರೆಗಳ ಭಾರದ ಕೆಳ ಓರೆಕೋರೆ
ರೇಖೆಗಳಲ್ಲಿ ಅಸ್ತಿತ್ವಗೊಂಡು ಮೂಡಿ ಮಾಯುವ ಮುಖಗಳು

ಹರಿಯುತ್ತಿರುವ ವಸ್ತುಗಳು ಸರಿಯುತ್ತಿರುವ ಬೆಳಕುಗಳು
ವಿಸ್ತಾರಗೊಳ್ಳುವ ಸರಹದ್ದುಗಳು ಅಮೀಬ ಆಕೃತಿಗಳು ವಿಕೃತಿಗಳು
ಅಸ್ಪಷ್ಟ ಸ್ಥಿತಿಗಳ ಅಮೂರ್ತ ಒತ್ತಡಗಳು ಹೀಗೆ
ತೇಲಿ ಬರುತ್ತಿವೆ ಕಿಟಕಿಯೊಳಗೆ ಇಣಕುತ್ತಿವೆ
ಏನೊ ಅನ್ವೇಷಿಸುತ್ತವೆ ಎಡೆಬಿಡದೆ
ಅದರ ನಿರ್ದಯ ಜಡತೆ ನಿಷ್ಕ್ರಿಯಕ್ಕೆ ಅದರ
ಹೆಪ್ಪು ಥಂಡಿಗೆ ಅಲಿಪ್ತ ಮೌನಕ್ಕೆ ಕತ್ತಲೆಯ ಭಯಕ್ಕೆ
ತಟ್ಟುತ್ತಾ ಇರುತ್ತವೆ ಆಗ,

ಆ ಹೊರಗು ಒಳಕ್ಕೆ ಜರಿಯುತ್ತಿರುವಂತೆ
ಆ ಒಳಗು ಕದಡಿ ಸರಿದು ಹೊರಕ್ಕೆ ಲಯಿಸುತ್ತಿರುವಂತೆ
ಏಕಾಂತತೆ ಮತ್ತು ಸಂತೆ ಅತ್ತಿತ್ತ ಹೊಕ್ಕು ಬೆರೆತಂತೆ ಕ್ಷೆಣಗಳು
ಇಂಥ ಸ್ಥಿತ್ಯಂತರದ ಪ್ರವಾಹದಲ್ಲಿ
ಉದ್ದಕ್ಕೆ ಏಳು ಅಡ್ಡಕ್ಕೆ ಐದು
ಸರಳುಗಳ ಕಿಟಕಿ
ಆಕಾರ ಕಳಚಿ ಹಗುರಾಗುತ್ತದೆ
ಮರಳಿ ಅದೇ ಅವಸ್ಥೆಗೆ ಬರುವವರೆಗೆ
ಖಾಲಿಯಾಗುತ್ತದೆ ಆದಾಗ
ಇಲ್ಲಿ ಏನೋ ಆಯಿತು ಅನುಭವದ ಹೊರಗೆ
ಎನಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...