Home / ಕವನ / ಕವಿತೆ / ಕಿಟಕಿ

ಕಿಟಕಿ

ಉದ್ದಕ್ಕೆ ಏಳು
ಅಡ್ಡಕ್ಕೆ ಐದು ಸರಳುಗಳ ಕಿಟಕಿಯ ಕೆಳಗೆ
ರೋಡು ಬಜಾರು ಮನೆ ಮಠ ಬಯಲು ಬಯಲು
ಆಚೆ ಸಮುದ್ರ ಏರಿಳಿತ ಕೊರೆತ ಮೊರೆತ ಈಚೆ
ಸಂತೆಗೆ ಹೋಗುವ ಹೊರೆಗಳ ಭಾರದ ಕೆಳ ಓರೆಕೋರೆ
ರೇಖೆಗಳಲ್ಲಿ ಅಸ್ತಿತ್ವಗೊಂಡು ಮೂಡಿ ಮಾಯುವ ಮುಖಗಳು

ಹರಿಯುತ್ತಿರುವ ವಸ್ತುಗಳು ಸರಿಯುತ್ತಿರುವ ಬೆಳಕುಗಳು
ವಿಸ್ತಾರಗೊಳ್ಳುವ ಸರಹದ್ದುಗಳು ಅಮೀಬ ಆಕೃತಿಗಳು ವಿಕೃತಿಗಳು
ಅಸ್ಪಷ್ಟ ಸ್ಥಿತಿಗಳ ಅಮೂರ್ತ ಒತ್ತಡಗಳು ಹೀಗೆ
ತೇಲಿ ಬರುತ್ತಿವೆ ಕಿಟಕಿಯೊಳಗೆ ಇಣಕುತ್ತಿವೆ
ಏನೊ ಅನ್ವೇಷಿಸುತ್ತವೆ ಎಡೆಬಿಡದೆ
ಅದರ ನಿರ್ದಯ ಜಡತೆ ನಿಷ್ಕ್ರಿಯಕ್ಕೆ ಅದರ
ಹೆಪ್ಪು ಥಂಡಿಗೆ ಅಲಿಪ್ತ ಮೌನಕ್ಕೆ ಕತ್ತಲೆಯ ಭಯಕ್ಕೆ
ತಟ್ಟುತ್ತಾ ಇರುತ್ತವೆ ಆಗ,

ಆ ಹೊರಗು ಒಳಕ್ಕೆ ಜರಿಯುತ್ತಿರುವಂತೆ
ಆ ಒಳಗು ಕದಡಿ ಸರಿದು ಹೊರಕ್ಕೆ ಲಯಿಸುತ್ತಿರುವಂತೆ
ಏಕಾಂತತೆ ಮತ್ತು ಸಂತೆ ಅತ್ತಿತ್ತ ಹೊಕ್ಕು ಬೆರೆತಂತೆ ಕ್ಷೆಣಗಳು
ಇಂಥ ಸ್ಥಿತ್ಯಂತರದ ಪ್ರವಾಹದಲ್ಲಿ
ಉದ್ದಕ್ಕೆ ಏಳು ಅಡ್ಡಕ್ಕೆ ಐದು
ಸರಳುಗಳ ಕಿಟಕಿ
ಆಕಾರ ಕಳಚಿ ಹಗುರಾಗುತ್ತದೆ
ಮರಳಿ ಅದೇ ಅವಸ್ಥೆಗೆ ಬರುವವರೆಗೆ
ಖಾಲಿಯಾಗುತ್ತದೆ ಆದಾಗ
ಇಲ್ಲಿ ಏನೋ ಆಯಿತು ಅನುಭವದ ಹೊರಗೆ
ಎನಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...