Home / ಕವನ / ಕವಿತೆ / ಉದ್ಯೋಗ ಪರ್ವ

ಉದ್ಯೋಗ ಪರ್ವ

ಬೇಹಿನವರಿಂದ ಸುದ್ದಿ ಸಂಗ್ರಹಿಸಿ ರಾಯಭಾರಿಗಳ ಕರೆಸಿ
ಕಿಟಕಿಬಾಗಿಲುಗಳ ಭದ್ರಪಡಿಸಿ ಮಂತ್ರಾಗಾರದಲ್ಲಿ
ಒಂದು ದುಂಡು ಮೇಜಿನ ಸುತ್ತ ಆಪ್ತೇಷ್ಟನಂಟರೂ
ಮಂತ್ರಿಗಳೂ ವಿಶೇಷ ಆಮಂತ್ರಿತರೂ ಪರಿಣತರೂ ಮಂಡಿಸಿ
ಗೂಢಾಲೋಚನೆ ನಡಿಸಿ
ಫೈಲುಗಳ ಮೇಲೆ ಫೈಲುಗಳೋಡಿ
ಟಿಪ್ಪಣಿಗಳ ಕೆಳಗೆ ಟಿಪ್ಪಣಿಗಳು ಕೂಡಿ
ಮಾತಿಗೆ ಮಾತು ಸೇರಿ ಮಾತಿನ ಧ್ವನಿಯೇರಿ
ಧ್ವನಿಯ ಪ್ರತಿಧ್ವನಿಯ ಕಾವಿನಲ್ಲಿ ಚರ್ಚೆ
ಉದ್ದುದ್ದ ಬೆಳೆದು ಬೇವಸಗೊಂಡು
ಪೂರ್ವಯೋಜಿತ ನಿರ್ಣಯದ ಕಡೆಗೆ
ದಾರಿಗಾಣದೆ ಕಾದು ಆಕಳಿಸಿ ಸಿಗಾರು ಹಚ್ಚಿ
ಸೀಲಿಂಗಿನತ್ತ ಹೊಗೆ ಫೂ ಎಂದು ಊದಿ
ಮೆತ್ತೆಗೆ ಶಿರ ಮಂಡಿಸಿದರೆ ಧ್ಯಾನಾವಸ್ಥೆ

ಮತ್ತೆ ಸನತ್ಸುಜಾತ ವಿದುರಾದಿಗಳಿಂದ ಲೌಕಿಕ ಪಾರಲೌಕಿಕ
ಆರ್ಥಿಕ ಪಾರಮಾರ್ಥಿಕ ನೀತಿ ಹೇಳಿಸಿಕೊಂಡು
ಮತ್ತೆ ಶಕುನಿ ಕಲಿಸಿದ ಅನೀತಿ ಜ್ಞಾಪಿಸಿಕೊಂಡು
ಕಳೆದ ಪರ್ವಗಳ ನಂಜುರಕ್ತ ಮೆಲ್ಲನೇ ಒತ್ತಡಿಸಿ
ಕಾಳೆಗವನೇ ಸಮೆದು ಬರುವೆವು ಎಂದು ಒಮ್ಮತ ಬಂದು
ಧರ್ಮ ಸಂಸ್ಥಾಪನೆಯಂಥ ಆರ್ಷ ಉದ್ದೇಶಕ್ಕೆ
ಜನ್ಮವೆತ್ತಿಬಂದ ಪುರುಷಾರ್ಥಕ್ಕೆ
ಕರ್ಮಕಾಂಡದ ವಿಧ್ಯುಕ್ತ ಕಾರ್ಯನಿರ್ವಾಹಕ್ಕೆ
ಎಂಬಿತ್ಯಾದಿಯಾಗಿ ಶ್ರುತಿಧರ್ಮ ಸಂಹಿತೆಗಳಿಂದ
ಬೇಕುಬೇಕಾದ ತತ್ವಗಳನ್ನಾರಿಸಿ ಠರಾವುಗಳಿಗೆ ಜೋಡಿಸಿ
ಕಾಳೆಗವನೇ ಸಮೆದು ಬರುವೆವು ಎಂದು ಘೋಷಿಸಿ

ಘೋಷಣೆಯ ಕಾರ್ಯರೂಪಕ್ಕೆ ತೊಡಗಿದರೆ
ತೊಡಗಿದರೆ ತೊಟ್ಟ ಮಾರಕಾಸ್ತ್ರ ಪ್ರಯೋಗದಿಂದ ಈ ಗರ್ಭಕ್ಕೆ
ಗರ್ಭಸ್ಥ ಜೀವಕ್ಕೆ ಯಾತರ ರಕ್ಷೆ?
ಅಸಹಾಯಕಿ ಅಬಲೆ ಉತ್ತರೆಯೂ ನಿರುತ್ತರೆಯಾಗಿ ನಿಂತರೆ
ಅಲೆದೀತು ಒಂದು ವೇಳೆ ಈ ಪ್ರಶ್ನೆ ಹೀಗೆ ಕೊನೆಗೂ
ತನ್ನ ಉತ್ತರ ತಾನೆ ಕಂಡುಕೊಂಡೀತು ಒಂದು ವೇಳೆ
ಹೇಗಿದ್ದರೂ ಅದು ಈ ಪರ್ವದ ಹೊರತು ಇದರ ಸಮಸ್ಯೆಗಳ ಹೊರತು
ಈಗ ಸಮಗ್ರ ಮಗ್ನತೆಯನ್ನೂ ಕೂಡ
ಜರೂರು ವಿಚಾರಗಳ ವರ್ತಮಾನದಲ್ಲಿ ಕೇಂದ್ರೀಕರಿಸಿ
ಹಂಚಿಗೆಳ ಯೋಚಿಸುವ ಸಂಧಿಸುವ ಚಿಂತಿಸುವ ಪರ್ವ
ದೊಂಬಿ ಪಿತೂರಿ ಒಳಸಂಚಿನ ಸೈತಾನ ಕರ್ಮಗಳಿಂದ ಹಿಡಿದು
ಕುರುಕ್ಷೇತ್ರದ ಹೊಯ್ಕಯ್ ವರೆಗೂ
ಇದೆಲ್ಲದರ ಸಾಧ್ಯಾಸಾಧ್ಯತೆಗಳ ಕುರಿತು
ಇದರ ರಾಜತಾಂತ್ರಿಕ ಸೂತ್ರಗಳ ಕುರಿತು
ಕ್ಷೇತ್ರದ ಸಿದ್ಧತೆಯ ಕುರಿತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...