Home / ಕವನ / ಕವಿತೆ / ಉದ್ಯೋಗ ಪರ್ವ

ಉದ್ಯೋಗ ಪರ್ವ

ಬೇಹಿನವರಿಂದ ಸುದ್ದಿ ಸಂಗ್ರಹಿಸಿ ರಾಯಭಾರಿಗಳ ಕರೆಸಿ
ಕಿಟಕಿಬಾಗಿಲುಗಳ ಭದ್ರಪಡಿಸಿ ಮಂತ್ರಾಗಾರದಲ್ಲಿ
ಒಂದು ದುಂಡು ಮೇಜಿನ ಸುತ್ತ ಆಪ್ತೇಷ್ಟನಂಟರೂ
ಮಂತ್ರಿಗಳೂ ವಿಶೇಷ ಆಮಂತ್ರಿತರೂ ಪರಿಣತರೂ ಮಂಡಿಸಿ
ಗೂಢಾಲೋಚನೆ ನಡಿಸಿ
ಫೈಲುಗಳ ಮೇಲೆ ಫೈಲುಗಳೋಡಿ
ಟಿಪ್ಪಣಿಗಳ ಕೆಳಗೆ ಟಿಪ್ಪಣಿಗಳು ಕೂಡಿ
ಮಾತಿಗೆ ಮಾತು ಸೇರಿ ಮಾತಿನ ಧ್ವನಿಯೇರಿ
ಧ್ವನಿಯ ಪ್ರತಿಧ್ವನಿಯ ಕಾವಿನಲ್ಲಿ ಚರ್ಚೆ
ಉದ್ದುದ್ದ ಬೆಳೆದು ಬೇವಸಗೊಂಡು
ಪೂರ್ವಯೋಜಿತ ನಿರ್ಣಯದ ಕಡೆಗೆ
ದಾರಿಗಾಣದೆ ಕಾದು ಆಕಳಿಸಿ ಸಿಗಾರು ಹಚ್ಚಿ
ಸೀಲಿಂಗಿನತ್ತ ಹೊಗೆ ಫೂ ಎಂದು ಊದಿ
ಮೆತ್ತೆಗೆ ಶಿರ ಮಂಡಿಸಿದರೆ ಧ್ಯಾನಾವಸ್ಥೆ

ಮತ್ತೆ ಸನತ್ಸುಜಾತ ವಿದುರಾದಿಗಳಿಂದ ಲೌಕಿಕ ಪಾರಲೌಕಿಕ
ಆರ್ಥಿಕ ಪಾರಮಾರ್ಥಿಕ ನೀತಿ ಹೇಳಿಸಿಕೊಂಡು
ಮತ್ತೆ ಶಕುನಿ ಕಲಿಸಿದ ಅನೀತಿ ಜ್ಞಾಪಿಸಿಕೊಂಡು
ಕಳೆದ ಪರ್ವಗಳ ನಂಜುರಕ್ತ ಮೆಲ್ಲನೇ ಒತ್ತಡಿಸಿ
ಕಾಳೆಗವನೇ ಸಮೆದು ಬರುವೆವು ಎಂದು ಒಮ್ಮತ ಬಂದು
ಧರ್ಮ ಸಂಸ್ಥಾಪನೆಯಂಥ ಆರ್ಷ ಉದ್ದೇಶಕ್ಕೆ
ಜನ್ಮವೆತ್ತಿಬಂದ ಪುರುಷಾರ್ಥಕ್ಕೆ
ಕರ್ಮಕಾಂಡದ ವಿಧ್ಯುಕ್ತ ಕಾರ್ಯನಿರ್ವಾಹಕ್ಕೆ
ಎಂಬಿತ್ಯಾದಿಯಾಗಿ ಶ್ರುತಿಧರ್ಮ ಸಂಹಿತೆಗಳಿಂದ
ಬೇಕುಬೇಕಾದ ತತ್ವಗಳನ್ನಾರಿಸಿ ಠರಾವುಗಳಿಗೆ ಜೋಡಿಸಿ
ಕಾಳೆಗವನೇ ಸಮೆದು ಬರುವೆವು ಎಂದು ಘೋಷಿಸಿ

ಘೋಷಣೆಯ ಕಾರ್ಯರೂಪಕ್ಕೆ ತೊಡಗಿದರೆ
ತೊಡಗಿದರೆ ತೊಟ್ಟ ಮಾರಕಾಸ್ತ್ರ ಪ್ರಯೋಗದಿಂದ ಈ ಗರ್ಭಕ್ಕೆ
ಗರ್ಭಸ್ಥ ಜೀವಕ್ಕೆ ಯಾತರ ರಕ್ಷೆ?
ಅಸಹಾಯಕಿ ಅಬಲೆ ಉತ್ತರೆಯೂ ನಿರುತ್ತರೆಯಾಗಿ ನಿಂತರೆ
ಅಲೆದೀತು ಒಂದು ವೇಳೆ ಈ ಪ್ರಶ್ನೆ ಹೀಗೆ ಕೊನೆಗೂ
ತನ್ನ ಉತ್ತರ ತಾನೆ ಕಂಡುಕೊಂಡೀತು ಒಂದು ವೇಳೆ
ಹೇಗಿದ್ದರೂ ಅದು ಈ ಪರ್ವದ ಹೊರತು ಇದರ ಸಮಸ್ಯೆಗಳ ಹೊರತು
ಈಗ ಸಮಗ್ರ ಮಗ್ನತೆಯನ್ನೂ ಕೂಡ
ಜರೂರು ವಿಚಾರಗಳ ವರ್ತಮಾನದಲ್ಲಿ ಕೇಂದ್ರೀಕರಿಸಿ
ಹಂಚಿಗೆಳ ಯೋಚಿಸುವ ಸಂಧಿಸುವ ಚಿಂತಿಸುವ ಪರ್ವ
ದೊಂಬಿ ಪಿತೂರಿ ಒಳಸಂಚಿನ ಸೈತಾನ ಕರ್ಮಗಳಿಂದ ಹಿಡಿದು
ಕುರುಕ್ಷೇತ್ರದ ಹೊಯ್ಕಯ್ ವರೆಗೂ
ಇದೆಲ್ಲದರ ಸಾಧ್ಯಾಸಾಧ್ಯತೆಗಳ ಕುರಿತು
ಇದರ ರಾಜತಾಂತ್ರಿಕ ಸೂತ್ರಗಳ ಕುರಿತು
ಕ್ಷೇತ್ರದ ಸಿದ್ಧತೆಯ ಕುರಿತು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ