ಉದ್ಯೋಗ ಪರ್ವ

ಬೇಹಿನವರಿಂದ ಸುದ್ದಿ ಸಂಗ್ರಹಿಸಿ ರಾಯಭಾರಿಗಳ ಕರೆಸಿ
ಕಿಟಕಿಬಾಗಿಲುಗಳ ಭದ್ರಪಡಿಸಿ ಮಂತ್ರಾಗಾರದಲ್ಲಿ
ಒಂದು ದುಂಡು ಮೇಜಿನ ಸುತ್ತ ಆಪ್ತೇಷ್ಟನಂಟರೂ
ಮಂತ್ರಿಗಳೂ ವಿಶೇಷ ಆಮಂತ್ರಿತರೂ ಪರಿಣತರೂ ಮಂಡಿಸಿ
ಗೂಢಾಲೋಚನೆ ನಡಿಸಿ
ಫೈಲುಗಳ ಮೇಲೆ ಫೈಲುಗಳೋಡಿ
ಟಿಪ್ಪಣಿಗಳ ಕೆಳಗೆ ಟಿಪ್ಪಣಿಗಳು ಕೂಡಿ
ಮಾತಿಗೆ ಮಾತು ಸೇರಿ ಮಾತಿನ ಧ್ವನಿಯೇರಿ
ಧ್ವನಿಯ ಪ್ರತಿಧ್ವನಿಯ ಕಾವಿನಲ್ಲಿ ಚರ್ಚೆ
ಉದ್ದುದ್ದ ಬೆಳೆದು ಬೇವಸಗೊಂಡು
ಪೂರ್ವಯೋಜಿತ ನಿರ್ಣಯದ ಕಡೆಗೆ
ದಾರಿಗಾಣದೆ ಕಾದು ಆಕಳಿಸಿ ಸಿಗಾರು ಹಚ್ಚಿ
ಸೀಲಿಂಗಿನತ್ತ ಹೊಗೆ ಫೂ ಎಂದು ಊದಿ
ಮೆತ್ತೆಗೆ ಶಿರ ಮಂಡಿಸಿದರೆ ಧ್ಯಾನಾವಸ್ಥೆ

ಮತ್ತೆ ಸನತ್ಸುಜಾತ ವಿದುರಾದಿಗಳಿಂದ ಲೌಕಿಕ ಪಾರಲೌಕಿಕ
ಆರ್ಥಿಕ ಪಾರಮಾರ್ಥಿಕ ನೀತಿ ಹೇಳಿಸಿಕೊಂಡು
ಮತ್ತೆ ಶಕುನಿ ಕಲಿಸಿದ ಅನೀತಿ ಜ್ಞಾಪಿಸಿಕೊಂಡು
ಕಳೆದ ಪರ್ವಗಳ ನಂಜುರಕ್ತ ಮೆಲ್ಲನೇ ಒತ್ತಡಿಸಿ
ಕಾಳೆಗವನೇ ಸಮೆದು ಬರುವೆವು ಎಂದು ಒಮ್ಮತ ಬಂದು
ಧರ್ಮ ಸಂಸ್ಥಾಪನೆಯಂಥ ಆರ್ಷ ಉದ್ದೇಶಕ್ಕೆ
ಜನ್ಮವೆತ್ತಿಬಂದ ಪುರುಷಾರ್ಥಕ್ಕೆ
ಕರ್ಮಕಾಂಡದ ವಿಧ್ಯುಕ್ತ ಕಾರ್ಯನಿರ್ವಾಹಕ್ಕೆ
ಎಂಬಿತ್ಯಾದಿಯಾಗಿ ಶ್ರುತಿಧರ್ಮ ಸಂಹಿತೆಗಳಿಂದ
ಬೇಕುಬೇಕಾದ ತತ್ವಗಳನ್ನಾರಿಸಿ ಠರಾವುಗಳಿಗೆ ಜೋಡಿಸಿ
ಕಾಳೆಗವನೇ ಸಮೆದು ಬರುವೆವು ಎಂದು ಘೋಷಿಸಿ

ಘೋಷಣೆಯ ಕಾರ್ಯರೂಪಕ್ಕೆ ತೊಡಗಿದರೆ
ತೊಡಗಿದರೆ ತೊಟ್ಟ ಮಾರಕಾಸ್ತ್ರ ಪ್ರಯೋಗದಿಂದ ಈ ಗರ್ಭಕ್ಕೆ
ಗರ್ಭಸ್ಥ ಜೀವಕ್ಕೆ ಯಾತರ ರಕ್ಷೆ?
ಅಸಹಾಯಕಿ ಅಬಲೆ ಉತ್ತರೆಯೂ ನಿರುತ್ತರೆಯಾಗಿ ನಿಂತರೆ
ಅಲೆದೀತು ಒಂದು ವೇಳೆ ಈ ಪ್ರಶ್ನೆ ಹೀಗೆ ಕೊನೆಗೂ
ತನ್ನ ಉತ್ತರ ತಾನೆ ಕಂಡುಕೊಂಡೀತು ಒಂದು ವೇಳೆ
ಹೇಗಿದ್ದರೂ ಅದು ಈ ಪರ್ವದ ಹೊರತು ಇದರ ಸಮಸ್ಯೆಗಳ ಹೊರತು
ಈಗ ಸಮಗ್ರ ಮಗ್ನತೆಯನ್ನೂ ಕೂಡ
ಜರೂರು ವಿಚಾರಗಳ ವರ್ತಮಾನದಲ್ಲಿ ಕೇಂದ್ರೀಕರಿಸಿ
ಹಂಚಿಗೆಳ ಯೋಚಿಸುವ ಸಂಧಿಸುವ ಚಿಂತಿಸುವ ಪರ್ವ
ದೊಂಬಿ ಪಿತೂರಿ ಒಳಸಂಚಿನ ಸೈತಾನ ಕರ್ಮಗಳಿಂದ ಹಿಡಿದು
ಕುರುಕ್ಷೇತ್ರದ ಹೊಯ್ಕಯ್ ವರೆಗೂ
ಇದೆಲ್ಲದರ ಸಾಧ್ಯಾಸಾಧ್ಯತೆಗಳ ಕುರಿತು
ಇದರ ರಾಜತಾಂತ್ರಿಕ ಸೂತ್ರಗಳ ಕುರಿತು
ಕ್ಷೇತ್ರದ ಸಿದ್ಧತೆಯ ಕುರಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಡಿಲು ಬರಿದೇ
Next post ಆಕಾಶವಾಣಿ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…