ಜಾರಿಹೋದ ಉಂಗುರಕೆ

ನಮ್ಮ ಪ್ರೇಮದ ದಾರಿ ಕೊರಕಲನು ಸಮವಾಗಿ,
ದೂರವನು ಹತ್ತಿರಿರಿಸಿ-
ಸಂದ ಭಾಗ್ಯದ ಚೆನ್ನುಗನಸನ್ನು ನೆನೆಸನ್ನು
ತೋರಿದುಂಗುರವ ಕಳೆದೆ!

ಸಂಜೆ ತಾರೆಯ ನೋಡಿ ಅದರ ಕಾಂತಿಯ ಹಳಿದ
ಸರಸಿ ಉಂಗುರವವಳು;
ಮೊಲ್ಲೆ ಮಲ್ಲಿಗೆ ವರ್ಣದೀಪ್ತಿಯನು ತಾಕಂಡು
ಮುಡಿಯಲೆಂದಳು ನನಗೆ!

ರಮಣನಂದೆನಗಿತ್ತ ಅಂದಿನಾ ದಿನದಿಂದ
ನನ್ನೊಡನಾಡಿ ಅವಳು,
ಪತಿಭವನ ವಾರ್ತೆಯನು ಪತಿಯೊಲುಮೆ ತೆರವನ್ನು
ಅಂದವಳವಳೆ ನನಗೆ!

ಕ್ಷಣಕ್ಷಣಕು ದಿನದಿನಕು ಉಂಗುರದ ಸ್ಪರ್ಶವೇ
ನನ್ನ ಪ್ರೇಮದ ಹರುಷ
ಹೃದಯ ಸಾಮಿಪ್ಯವನು ಪ್ರಣಯ ಸಾರೂಪ್ಯವನು
ತೋರಿತದು-ಅಹಾ ಎಲ್ಲಿ?

ಕೆರೆಯಲ್ಲಿ ಕೈತೊಳೆಯೆ ಅದು ನಕ್ಕು ಹೊಳೆಹೊಳೆದು
ನನ್ನ ಮುತ್ತನ್ನು ಕೊಂಡು-
ನಿನ್ನ ರಮಣನ ಪ್ರೇಮ ಸಾಕ್ಷ್ಯ ರೂಪಿಯೆ ನಾನು-
ಎಂದು ಗೇಲಿಯನು ಮಾಡಿ.

ಕೈಯ ನೀರೊಳಗಿಡಲು-ಅದರ ಹೊಳಪನು ನೋಡಿ
ಬರಲು ಬೆರಗಿಂ ಮೀಂಗಳು,
ಮುಗ್ದೆ ಶಕುಂತಲೆಯ ಉಂಗುರವ ಕದ್ದಂತೆ
ಸಿಗಲಾರೆ-ತಾನು ಎಂದು

ಓಡಿಸುತ ಮೀಂಗಳನು-ಪ್ರೇಮಪುರಿ ದಾರಿಯನು
ತೋರುವೆನು-ಅಂದಿತೆನಗೆ.
ಬೆರಳ ನಡುವಲಿ ಸಿಲುಕಿ ಓಡಲಾರೆನು, ಮೋಡಿ
ವಿದ್ಯೆಯಾ ಗಾಡಿ-ಎಂದು.

ಪ್ರೇಮವಾರ್ತೆಯ ದೂತಿ, ನಲ್ಮೆ ಕಾಯುವ ದಾಸಿ
ಮಾಯವಾದಳೇ ಇಂದು?
ಜಗದ ಪ್ರೇಮಿಗಳ ಹೃತ್ಕಮಲಗಳ ಹೆಣೆಯುತಿಹ
ಮಾಯ ಮುದ್ರಾ ಸ್ವರೂಪಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೮
Next post ಎಷ್ಟು ಕಣ್ಣು ಹೊಡೆದರೂ

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…