Home / ಕವನ / ಕವಿತೆ / ಜಾರಿಹೋದ ಉಂಗುರಕೆ

ಜಾರಿಹೋದ ಉಂಗುರಕೆ

ನಮ್ಮ ಪ್ರೇಮದ ದಾರಿ ಕೊರಕಲನು ಸಮವಾಗಿ,
ದೂರವನು ಹತ್ತಿರಿರಿಸಿ-
ಸಂದ ಭಾಗ್ಯದ ಚೆನ್ನುಗನಸನ್ನು ನೆನೆಸನ್ನು
ತೋರಿದುಂಗುರವ ಕಳೆದೆ!

ಸಂಜೆ ತಾರೆಯ ನೋಡಿ ಅದರ ಕಾಂತಿಯ ಹಳಿದ
ಸರಸಿ ಉಂಗುರವವಳು;
ಮೊಲ್ಲೆ ಮಲ್ಲಿಗೆ ವರ್ಣದೀಪ್ತಿಯನು ತಾಕಂಡು
ಮುಡಿಯಲೆಂದಳು ನನಗೆ!

ರಮಣನಂದೆನಗಿತ್ತ ಅಂದಿನಾ ದಿನದಿಂದ
ನನ್ನೊಡನಾಡಿ ಅವಳು,
ಪತಿಭವನ ವಾರ್ತೆಯನು ಪತಿಯೊಲುಮೆ ತೆರವನ್ನು
ಅಂದವಳವಳೆ ನನಗೆ!

ಕ್ಷಣಕ್ಷಣಕು ದಿನದಿನಕು ಉಂಗುರದ ಸ್ಪರ್ಶವೇ
ನನ್ನ ಪ್ರೇಮದ ಹರುಷ
ಹೃದಯ ಸಾಮಿಪ್ಯವನು ಪ್ರಣಯ ಸಾರೂಪ್ಯವನು
ತೋರಿತದು-ಅಹಾ ಎಲ್ಲಿ?

ಕೆರೆಯಲ್ಲಿ ಕೈತೊಳೆಯೆ ಅದು ನಕ್ಕು ಹೊಳೆಹೊಳೆದು
ನನ್ನ ಮುತ್ತನ್ನು ಕೊಂಡು-
ನಿನ್ನ ರಮಣನ ಪ್ರೇಮ ಸಾಕ್ಷ್ಯ ರೂಪಿಯೆ ನಾನು-
ಎಂದು ಗೇಲಿಯನು ಮಾಡಿ.

ಕೈಯ ನೀರೊಳಗಿಡಲು-ಅದರ ಹೊಳಪನು ನೋಡಿ
ಬರಲು ಬೆರಗಿಂ ಮೀಂಗಳು,
ಮುಗ್ದೆ ಶಕುಂತಲೆಯ ಉಂಗುರವ ಕದ್ದಂತೆ
ಸಿಗಲಾರೆ-ತಾನು ಎಂದು

ಓಡಿಸುತ ಮೀಂಗಳನು-ಪ್ರೇಮಪುರಿ ದಾರಿಯನು
ತೋರುವೆನು-ಅಂದಿತೆನಗೆ.
ಬೆರಳ ನಡುವಲಿ ಸಿಲುಕಿ ಓಡಲಾರೆನು, ಮೋಡಿ
ವಿದ್ಯೆಯಾ ಗಾಡಿ-ಎಂದು.

ಪ್ರೇಮವಾರ್ತೆಯ ದೂತಿ, ನಲ್ಮೆ ಕಾಯುವ ದಾಸಿ
ಮಾಯವಾದಳೇ ಇಂದು?
ಜಗದ ಪ್ರೇಮಿಗಳ ಹೃತ್ಕಮಲಗಳ ಹೆಣೆಯುತಿಹ
ಮಾಯ ಮುದ್ರಾ ಸ್ವರೂಪಿ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...