Home / ಕವನ / ಕವಿತೆ / ಜಾರಿಹೋದ ಉಂಗುರಕೆ

ಜಾರಿಹೋದ ಉಂಗುರಕೆ

ನಮ್ಮ ಪ್ರೇಮದ ದಾರಿ ಕೊರಕಲನು ಸಮವಾಗಿ,
ದೂರವನು ಹತ್ತಿರಿರಿಸಿ-
ಸಂದ ಭಾಗ್ಯದ ಚೆನ್ನುಗನಸನ್ನು ನೆನೆಸನ್ನು
ತೋರಿದುಂಗುರವ ಕಳೆದೆ!

ಸಂಜೆ ತಾರೆಯ ನೋಡಿ ಅದರ ಕಾಂತಿಯ ಹಳಿದ
ಸರಸಿ ಉಂಗುರವವಳು;
ಮೊಲ್ಲೆ ಮಲ್ಲಿಗೆ ವರ್ಣದೀಪ್ತಿಯನು ತಾಕಂಡು
ಮುಡಿಯಲೆಂದಳು ನನಗೆ!

ರಮಣನಂದೆನಗಿತ್ತ ಅಂದಿನಾ ದಿನದಿಂದ
ನನ್ನೊಡನಾಡಿ ಅವಳು,
ಪತಿಭವನ ವಾರ್ತೆಯನು ಪತಿಯೊಲುಮೆ ತೆರವನ್ನು
ಅಂದವಳವಳೆ ನನಗೆ!

ಕ್ಷಣಕ್ಷಣಕು ದಿನದಿನಕು ಉಂಗುರದ ಸ್ಪರ್ಶವೇ
ನನ್ನ ಪ್ರೇಮದ ಹರುಷ
ಹೃದಯ ಸಾಮಿಪ್ಯವನು ಪ್ರಣಯ ಸಾರೂಪ್ಯವನು
ತೋರಿತದು-ಅಹಾ ಎಲ್ಲಿ?

ಕೆರೆಯಲ್ಲಿ ಕೈತೊಳೆಯೆ ಅದು ನಕ್ಕು ಹೊಳೆಹೊಳೆದು
ನನ್ನ ಮುತ್ತನ್ನು ಕೊಂಡು-
ನಿನ್ನ ರಮಣನ ಪ್ರೇಮ ಸಾಕ್ಷ್ಯ ರೂಪಿಯೆ ನಾನು-
ಎಂದು ಗೇಲಿಯನು ಮಾಡಿ.

ಕೈಯ ನೀರೊಳಗಿಡಲು-ಅದರ ಹೊಳಪನು ನೋಡಿ
ಬರಲು ಬೆರಗಿಂ ಮೀಂಗಳು,
ಮುಗ್ದೆ ಶಕುಂತಲೆಯ ಉಂಗುರವ ಕದ್ದಂತೆ
ಸಿಗಲಾರೆ-ತಾನು ಎಂದು

ಓಡಿಸುತ ಮೀಂಗಳನು-ಪ್ರೇಮಪುರಿ ದಾರಿಯನು
ತೋರುವೆನು-ಅಂದಿತೆನಗೆ.
ಬೆರಳ ನಡುವಲಿ ಸಿಲುಕಿ ಓಡಲಾರೆನು, ಮೋಡಿ
ವಿದ್ಯೆಯಾ ಗಾಡಿ-ಎಂದು.

ಪ್ರೇಮವಾರ್ತೆಯ ದೂತಿ, ನಲ್ಮೆ ಕಾಯುವ ದಾಸಿ
ಮಾಯವಾದಳೇ ಇಂದು?
ಜಗದ ಪ್ರೇಮಿಗಳ ಹೃತ್ಕಮಲಗಳ ಹೆಣೆಯುತಿಹ
ಮಾಯ ಮುದ್ರಾ ಸ್ವರೂಪಿ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...