Home / ಕವನ / ಕವಿತೆ / ಜಾರಿಹೋದ ಉಂಗುರಕೆ

ಜಾರಿಹೋದ ಉಂಗುರಕೆ

ನಮ್ಮ ಪ್ರೇಮದ ದಾರಿ ಕೊರಕಲನು ಸಮವಾಗಿ,
ದೂರವನು ಹತ್ತಿರಿರಿಸಿ-
ಸಂದ ಭಾಗ್ಯದ ಚೆನ್ನುಗನಸನ್ನು ನೆನೆಸನ್ನು
ತೋರಿದುಂಗುರವ ಕಳೆದೆ!

ಸಂಜೆ ತಾರೆಯ ನೋಡಿ ಅದರ ಕಾಂತಿಯ ಹಳಿದ
ಸರಸಿ ಉಂಗುರವವಳು;
ಮೊಲ್ಲೆ ಮಲ್ಲಿಗೆ ವರ್ಣದೀಪ್ತಿಯನು ತಾಕಂಡು
ಮುಡಿಯಲೆಂದಳು ನನಗೆ!

ರಮಣನಂದೆನಗಿತ್ತ ಅಂದಿನಾ ದಿನದಿಂದ
ನನ್ನೊಡನಾಡಿ ಅವಳು,
ಪತಿಭವನ ವಾರ್ತೆಯನು ಪತಿಯೊಲುಮೆ ತೆರವನ್ನು
ಅಂದವಳವಳೆ ನನಗೆ!

ಕ್ಷಣಕ್ಷಣಕು ದಿನದಿನಕು ಉಂಗುರದ ಸ್ಪರ್ಶವೇ
ನನ್ನ ಪ್ರೇಮದ ಹರುಷ
ಹೃದಯ ಸಾಮಿಪ್ಯವನು ಪ್ರಣಯ ಸಾರೂಪ್ಯವನು
ತೋರಿತದು-ಅಹಾ ಎಲ್ಲಿ?

ಕೆರೆಯಲ್ಲಿ ಕೈತೊಳೆಯೆ ಅದು ನಕ್ಕು ಹೊಳೆಹೊಳೆದು
ನನ್ನ ಮುತ್ತನ್ನು ಕೊಂಡು-
ನಿನ್ನ ರಮಣನ ಪ್ರೇಮ ಸಾಕ್ಷ್ಯ ರೂಪಿಯೆ ನಾನು-
ಎಂದು ಗೇಲಿಯನು ಮಾಡಿ.

ಕೈಯ ನೀರೊಳಗಿಡಲು-ಅದರ ಹೊಳಪನು ನೋಡಿ
ಬರಲು ಬೆರಗಿಂ ಮೀಂಗಳು,
ಮುಗ್ದೆ ಶಕುಂತಲೆಯ ಉಂಗುರವ ಕದ್ದಂತೆ
ಸಿಗಲಾರೆ-ತಾನು ಎಂದು

ಓಡಿಸುತ ಮೀಂಗಳನು-ಪ್ರೇಮಪುರಿ ದಾರಿಯನು
ತೋರುವೆನು-ಅಂದಿತೆನಗೆ.
ಬೆರಳ ನಡುವಲಿ ಸಿಲುಕಿ ಓಡಲಾರೆನು, ಮೋಡಿ
ವಿದ್ಯೆಯಾ ಗಾಡಿ-ಎಂದು.

ಪ್ರೇಮವಾರ್ತೆಯ ದೂತಿ, ನಲ್ಮೆ ಕಾಯುವ ದಾಸಿ
ಮಾಯವಾದಳೇ ಇಂದು?
ಜಗದ ಪ್ರೇಮಿಗಳ ಹೃತ್ಕಮಲಗಳ ಹೆಣೆಯುತಿಹ
ಮಾಯ ಮುದ್ರಾ ಸ್ವರೂಪಿ!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...