Home / ಕವನ / ಕವಿತೆ / ಅವಸಾನ

ಅವಸಾನ

ಕೆಲವೊಮ್ಮೆ ಫಕ್ಕನೆ ಕಣ್ಣು ಕತ್ತಲೆಗಟ್ಟಿ ಇದೀಗ ಎಲ್ಲವೂ
ಮುಗಿದೆ ಹೋಯಿತು ವಸ್ತು ಸ್ಥಲ ಕಾಲಗಳ ದಾಟಿ ಎಲ್ಲಿಗೋ
ಹೊರಟೆ ಹೋಯಿತು ಎನಿಸುತ್ತದೆ
ಸತ್ತವರ ನೆನಪು ಬರುತ್ತದೆ ನೀರಿನಲ್ಲಿ ಬಿದ್ದವರ
ಹಾಸಿಗೆಯಲ್ಲಿ ಸತ್ತವರ ಸ್ವಂತ ರಕ್ತ ಬಂಧಗಳ
ಹೇಗಿದ್ದೀತು ಅದು? ದಾಹವೆ ಸೆಖೆಯೆ ಚಳಿಯೆ
ಭಯವೆ ಮರೆವೆಯೆ ನಿದ್ರೆಯೆ?
ಪ್ರಳಯದ ಕಲ್ಪನೆ ಮಾಡುತ್ತೇನೆ
ಗೋರಿಗಳು ಬಿರಿದರೆ ಕಂಕಾಳಗಳು ಕುಣಿದರೆ
ಕತ್ತಲೆ ಹಗಲ ನುಂಗಿದರೆ
ಹೇಗಿದ್ದೀತು ಅದು? ಜೋನನ ಭೀಕರ ಪ್ರವಾದಗಳ ಚಿತ್ರಗಳು
ಕಣ್ಣಿಗೆ ಕಟ್ಟುತ್ತವೆ ಬೆಂಕಿಯ ಕುದುರೆಗಳು ಕೆನೆಯುತ್ತವೆ
ಹೆದರಿಸುವ ಶಬ್ದಗಳಿವೆ
ಈಚೆ ಪರಂಪರೆಯ ವಿಶ್ವಾಸಗಳಿವೆ
ಸಮುದ್ರ ಏಳುವ ಎಲ್ಲವೂ ಮುಳುಗುವ
ಕ್ರೂರ ಪರ್ಯಾವಸಾನದ ದೀರ್ಘ ಮೌನದಲ್ಲಿ
ಅದು ಇದ್ದೀತೆ ಹೀಗೆ ಆಕಾಶ ದೊಪ್ಪನೆ ಬಿದ್ದು ವಸ್ತುಸ್ಥಿತಿ
ಸ್ಥಿತ್ಯಂತರದ ಅರೆಕ್ಷಣದಲ್ಲಿ ಕ್ಷಯಿಸಿ ಇನ್ನೊಂದೇ ಸ್ಥಿತಿಯೂ ಇರದೆ
ಆಕಾಶ ಬಿರಿದಂತೆ ಆಕಾಶ
ಇದ್ದೀತೆ ಅಂಥ ಆಕಾಶವೂ ಇಲ್ಲದೇ ಯಾವುದೂ
ಇಲ್ಲದ ಅಂಥ ಋಣಸ್ಥಿತಿಯ ವಿರೋಧಾಬಾಸ
ಈ ಸೃಷ್ಟಿಯ ಆರಂಭದಲ್ಲೂ ಇದ್ದರೆ ಇದೆಲ್ಲದರ
ಅವಸಾನದಲ್ಲೂ ಇದ್ದರೆ ಈ ಮಧ್ಯೆ
ನಿಶ್ಚಿತ ಪ್ರತೀಕ್ಷೆಯಲ್ಲಿ ಕಟ್ಟಿಗೆಯೊಟ್ಟಿ ತಯಾರಾದ ವ್ಯಕ್ತಿಗಳ
ಆ ಜನಾಂಗದ ಹುಟ್ಟಿನ ಸಾವಿನ ನಡುವೆ ಕರ್ಮದ
ಮರೆವಿನಲ್ಲಿ ಬುದಕಿದ ಹುಸಿ ಬದುಕಿನ ಹಾಗೂ
ಸ್ವರ್ಗ ಮೋಕ್ಷಗಳ ಸ್ವಯಂಕೃತ ಭ್ರಮೆಯ ಬ್ರಹ್ಮ ಪರಬ್ರಹ್ಮದ
ಸ್ವಸಮಾಧಾನ ಸ್ವಸ್ಥತೆಯ ಕಲ್ಪನೆಯನ್ನೂ ಛಿದ್ರಿಸಿ
ಅಲೆಹೊಡೆವ ಪ್ರಜ್ಞೆ
ವ್ಯಕ್ತಿಯ ನಾಡಿಯಲ್ಲೂ ಜನಾಂಗದ ಪ್ರವಾಹದಲ್ಲೂ
ಹರಿಯುತ್ತಲೇ ಇರುವಾಗ ಇದರ ಕ್ರೌರ್ಯದ ಕೆಳಗೆ
ಅವಸಾನಿಸುವ ಆರಂಭಗಳು ಹುಟ್ಟುವ ಮೊದಲೇ
ಸಾಯುವ ಸೃಷ್ಟಿಗಳು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...