ಅಸ್ಪೃಶ್ಯರು

ನಾಯಿಗಳಿದ್ದಾವೆ! ಎಚ್ಚರಿಕೆ! ಎಂದು
ಯಾಕೆ ಬೆದರಿಸುತ್ತೀರಿ, ಫಲಕದ ಹಿಂದೆ ನಿಂದು?
ನಾವು ಬರೇ ಈ ಬೀದಿಯಲ್ಲಷ್ಟೆ ಹೋಗುತ್ತೇವೆ
ಮೌನ ಅಸಹ್ಯವಾದಾಗ ಮಾತಾಡುತ್ತೇವೆ
ಅಳದಿರುವುದಕ್ಕಾಗಿ ಒಮ್ಮೊಮ್ಮೆ ನಗುತ್ತೇವೆ

ನಾಯಿಗಳನ್ನು ಛೂ ಬಿಟ್ಟು ಬೆದರಿಸುತ್ತೀರಿ ನೀವು
ನಾಯಿಗಳಿದ್ದಾವೆ ಸ್ವಾಮಿ ಗೊತ್ತು ನಮಗೆ
ನಿಮ್ಮ ನಾಯಿಗಳಿದ್ದಾವೆ ಕಾರುಗಳಿದ್ದಾವೆ
ಪೋಷ್ ಹೊಟೇಲುಗಳಿವೆ ಕ್ಯಾಬರೆಸ್ವರ್ಗದ ದೇವರು ನೀವು
ಈಚೆಗೆ ಬೀದಿಗಳಲ್ಲಿ ನಾವೂ ಇದ್ದೇವೆ ಅಸ್ಪೃಶ್ಯ ವರ್ಗದ ಜನರು

ಅಪರಿಚಿತರಂತೆ ನೋಡುವುದೇಕೆ, ಸ್ವಾಮಿ?
ನಮಗೆ ಬಹು ಹಳೆಕಾಲದ ಪರಿಚಯವುಂಟು ಮರೆತಿರ?
ಹಿಂದೆ ಬ್ಯಾಬಿಲೋನಿನಲ್ಲಿ ನಿಮ್ಮ ಗಾಣ
ಎಳೆದವರು ನಾವು
ಮಾರುಕಟ್ಟೆಗಳಲ್ಲಿ ನಮ್ಮನ್ನು ಹರಾಜಿಗೆ
ಮಾರಿದವರು ನೀವು
ನಿಮ್ಮ ಊಳಿಗದ ಗೂನು ಈ ಬೆನ್ನ ಮೇಲುಂಟು
ನಮ್ಮ ಮಕ್ಕಳಿಗೂ ಇದರ ಹೆದರಿಕೆಯುಂಟು

ಸಂಧಾನಗಕ್ಕಾಗಿ ನೀವು ಬಂದದ್ದೇನೋ ಖರೆ
ಆದರೆ ಹೇಗೆ ಮಾತಾಡಿದರೂ
ನಮ್ಮ ಭಾಷೆ ನಿಮಗೆ ಅರ್ಥವಾಗುವುದಿಲ್ಲ
ಹಾಗೆಂದು ನಿಮ್ಮ ಅಂಬೋಣ
ಎನು ಮಾಡೋಣ, ಹೇಳಿ
ನೀವು ಪ್ರಯತ್ನಿಸದೇನೆ, ನಿಮಗಿಷ್ಟವಿಲ್ಲದೇನೆ
ಅರ್ಥವಾದೀತು ಎಂದಾದರೂ ಒಮ್ಮೆ

ಇಷ್ಟಕ್ಕೆಲ್ಲಾ ಯಾಕೆ ಹೀಗೆ ಹಿಸ್ಟೀರಿಯಾ ಬಡಿದವರಂತೆ ಕೂಗುತ್ತೀರಿ?
ಸಾಹಿತ್ಯ ಸಂಸ್ಕಾರ ಸಂಪತ್ತು ಅಧಿಕಾರ ಎಲ್ಲವೂ ನಿಮ್ಮದೇ ಸ್ವತ್ತು
ಎಂದ ಮೇಲೆ ಯಾಕೆ ಹೀಗೆ ಕೂಗಾಡುತ್ತೀರಿ?
ಕ್ರಾಂತಿಗಳು ಬಂದಿವೆ ನಿಜ
ಬಂದು ಹೊರಟುಹೋಗಿವೆ
ಅವು ಹೊರಟುಹೋದ್ದರಿಂದಲೇ ನಿಮ್ಮ ಪೀಳಿಗೆ ಬೆಳೆದಿದೆ
ಬೆಳೆಯುತ್ತಲೇ ಇದೆ
ಎಂದ ಮೇಲೆ ಸುಮ್ಮನೆ ಯಾಕೆ ಹೀಗೆ ಒದ್ದಾಡುತ್ತೀರಿ?

ಯಾಕೆಂದರೆ, ಚರಿತ್ರೆ ಆವರ್ತಿಸುವುದಿಲ್ಲ
ವರ್ತಮಾನ ಹೀಗೇ ನಿಂತಿರುವುದಿಲ್ಲ
ಏನೋ ಸಂಭವಿಸಲಿದೆ-ಎಂದೆ?
ಇದು ನಮಗೆ ಗೊತ್ತು
ನಮಗೆ ಗೊತ್ತೆಂದು ತಿಳಿದದ್ದರಿಂದಲೆ
ನಮ್ಮ ಕಂಡಾಗ ನಿಮ್ಮ ಮುಖಕ್ಕೊಂದು ಅಪೂರ್ವ
ಪ್ರೇತಕಳೆ ಬರುತ್ತದೆ: ಇದು ಸಹಜ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹವಳ ದ್ವೀಪ
Next post ಅಧೋಗತಿಗೆ ಕನ್ನಡ

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…