ಅಸ್ಪೃಶ್ಯರು

ನಾಯಿಗಳಿದ್ದಾವೆ! ಎಚ್ಚರಿಕೆ! ಎಂದು
ಯಾಕೆ ಬೆದರಿಸುತ್ತೀರಿ, ಫಲಕದ ಹಿಂದೆ ನಿಂದು?
ನಾವು ಬರೇ ಈ ಬೀದಿಯಲ್ಲಷ್ಟೆ ಹೋಗುತ್ತೇವೆ
ಮೌನ ಅಸಹ್ಯವಾದಾಗ ಮಾತಾಡುತ್ತೇವೆ
ಅಳದಿರುವುದಕ್ಕಾಗಿ ಒಮ್ಮೊಮ್ಮೆ ನಗುತ್ತೇವೆ

ನಾಯಿಗಳನ್ನು ಛೂ ಬಿಟ್ಟು ಬೆದರಿಸುತ್ತೀರಿ ನೀವು
ನಾಯಿಗಳಿದ್ದಾವೆ ಸ್ವಾಮಿ ಗೊತ್ತು ನಮಗೆ
ನಿಮ್ಮ ನಾಯಿಗಳಿದ್ದಾವೆ ಕಾರುಗಳಿದ್ದಾವೆ
ಪೋಷ್ ಹೊಟೇಲುಗಳಿವೆ ಕ್ಯಾಬರೆಸ್ವರ್ಗದ ದೇವರು ನೀವು
ಈಚೆಗೆ ಬೀದಿಗಳಲ್ಲಿ ನಾವೂ ಇದ್ದೇವೆ ಅಸ್ಪೃಶ್ಯ ವರ್ಗದ ಜನರು

ಅಪರಿಚಿತರಂತೆ ನೋಡುವುದೇಕೆ, ಸ್ವಾಮಿ?
ನಮಗೆ ಬಹು ಹಳೆಕಾಲದ ಪರಿಚಯವುಂಟು ಮರೆತಿರ?
ಹಿಂದೆ ಬ್ಯಾಬಿಲೋನಿನಲ್ಲಿ ನಿಮ್ಮ ಗಾಣ
ಎಳೆದವರು ನಾವು
ಮಾರುಕಟ್ಟೆಗಳಲ್ಲಿ ನಮ್ಮನ್ನು ಹರಾಜಿಗೆ
ಮಾರಿದವರು ನೀವು
ನಿಮ್ಮ ಊಳಿಗದ ಗೂನು ಈ ಬೆನ್ನ ಮೇಲುಂಟು
ನಮ್ಮ ಮಕ್ಕಳಿಗೂ ಇದರ ಹೆದರಿಕೆಯುಂಟು

ಸಂಧಾನಗಕ್ಕಾಗಿ ನೀವು ಬಂದದ್ದೇನೋ ಖರೆ
ಆದರೆ ಹೇಗೆ ಮಾತಾಡಿದರೂ
ನಮ್ಮ ಭಾಷೆ ನಿಮಗೆ ಅರ್ಥವಾಗುವುದಿಲ್ಲ
ಹಾಗೆಂದು ನಿಮ್ಮ ಅಂಬೋಣ
ಎನು ಮಾಡೋಣ, ಹೇಳಿ
ನೀವು ಪ್ರಯತ್ನಿಸದೇನೆ, ನಿಮಗಿಷ್ಟವಿಲ್ಲದೇನೆ
ಅರ್ಥವಾದೀತು ಎಂದಾದರೂ ಒಮ್ಮೆ

ಇಷ್ಟಕ್ಕೆಲ್ಲಾ ಯಾಕೆ ಹೀಗೆ ಹಿಸ್ಟೀರಿಯಾ ಬಡಿದವರಂತೆ ಕೂಗುತ್ತೀರಿ?
ಸಾಹಿತ್ಯ ಸಂಸ್ಕಾರ ಸಂಪತ್ತು ಅಧಿಕಾರ ಎಲ್ಲವೂ ನಿಮ್ಮದೇ ಸ್ವತ್ತು
ಎಂದ ಮೇಲೆ ಯಾಕೆ ಹೀಗೆ ಕೂಗಾಡುತ್ತೀರಿ?
ಕ್ರಾಂತಿಗಳು ಬಂದಿವೆ ನಿಜ
ಬಂದು ಹೊರಟುಹೋಗಿವೆ
ಅವು ಹೊರಟುಹೋದ್ದರಿಂದಲೇ ನಿಮ್ಮ ಪೀಳಿಗೆ ಬೆಳೆದಿದೆ
ಬೆಳೆಯುತ್ತಲೇ ಇದೆ
ಎಂದ ಮೇಲೆ ಸುಮ್ಮನೆ ಯಾಕೆ ಹೀಗೆ ಒದ್ದಾಡುತ್ತೀರಿ?

ಯಾಕೆಂದರೆ, ಚರಿತ್ರೆ ಆವರ್ತಿಸುವುದಿಲ್ಲ
ವರ್ತಮಾನ ಹೀಗೇ ನಿಂತಿರುವುದಿಲ್ಲ
ಏನೋ ಸಂಭವಿಸಲಿದೆ-ಎಂದೆ?
ಇದು ನಮಗೆ ಗೊತ್ತು
ನಮಗೆ ಗೊತ್ತೆಂದು ತಿಳಿದದ್ದರಿಂದಲೆ
ನಮ್ಮ ಕಂಡಾಗ ನಿಮ್ಮ ಮುಖಕ್ಕೊಂದು ಅಪೂರ್ವ
ಪ್ರೇತಕಳೆ ಬರುತ್ತದೆ: ಇದು ಸಹಜ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹವಳ ದ್ವೀಪ
Next post ಅಧೋಗತಿಗೆ ಕನ್ನಡ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…