Home / ಕವನ / ಕವಿತೆ / ಹೊಸ ದೇವರ ಬರವಿಗಾಗಿ

ಹೊಸ ದೇವರ ಬರವಿಗಾಗಿ

ಓ ಓಸಿರಿಸ್! ನೈಲ್ ನದಿಯೇಕೆ ಉಕ್ಕಲಿಲ್ಲ?
ನಿನ್ನ ಕೊಳೆಯುತ್ತಿರುವ ಮೈಯಿಂದ ಸಸ್ಯಗಳೇಕೆ ಹುಟ್ಟಲಿಲ್ಲ?
ನಿನ್ನೆಲುಬುಗಳ ಹುಡುಕಿ ತಂದು ರಾಸಿ ಹಾಕಿ ಕರೆದರೂ ಕಾದರೂ
ಸತ್ತ ನೀ ಮರಳಿ ಬರಲಿಲ್ಲ!

ಆಶ್ವಯುಜ ಶುದ್ಧ ಮಾರ್ನಮಿ ಬರಲೆಂದು
ಬಾಲಕರು ಬಂದು ಹರಸಿದರೂ
ಮಾಡಿಟ್ಟ ನೈವೇದ್ಯ ಹಳಸಿದರೂ
ಕೂಗಿದರೂ ಓಗೊಲಿಲ್ಲ
ಪಾತಾಳದಿಂದ ಬಲೀಂದ್ರ ಬರಲಿಲ್ಲ ಮತ್ತಿಲ್ಲಿಗೆ

ಸತ್ತರೆ ಅಜೀರ್ಣದಿಂದ ಇಂದ್ರಾಗ್ನಿ ವರುಣರು ಮತ್ತೆ ಹುಟ್ಟಲಿಲ್ಲ
ಈ ಬ್ರಹ್ಮವಿಷ್ಣುರುದ್ರರೂ ವಯೋವೃದ್ಧರಾಗಿ ಮನುಷ್ಯ
ಜನಾಂಗ ಸ್ವರ್ಗ‍ದ ಸಂಪರ್ಕ ಕಳೆದಾಗ
ಸ್ವಂತ ಭೂಖಂಡವೂ ಕತ್ತಲೆಯ ಅಭೇದ್ಯ ಖಂಡ
ಅರ್ಥ ಚ್ಯುತಿಗೊಂಡ ಭಾಷೆ ಬರೇ ಗೊಂದಲಗೇರಿ ಸದ್ದುಗದ್ದಲದ
ಸುತ್ತು ಮುಖಗಳ ಮೇಲೆ ಕಿತ್ತರೂ ಬಾರದಂಥ ಅಂಟುಮೌನ
ಅಂತರ್ಮುಖದೊಳಗೆ ಕೂಡ ಅಪರಿಚಿತತ್ವ ಮುಖಾಮುಖಿಯ
ಈ ಹೆಪ್ಪುಗತ್ತಲೆಯಲ್ಲಿ ಹುಡುಕಿದರೆ

ಕ್ಯೂಬ ಬೊಲೀವಿಯಾ ಶೇಗವೇರಾ ಸಹ ದಾಟಿ
ಮತ್ತೆ ಹಿಪ್ಪಿ ಅತಿಮಾನಸಗಳನ್ನೂ ಅತಿಕ್ರಮಿಸಿ
ಅಂತ್ಯಗಳನ್ನೂ ಸೀಮೆಗಳನ್ನೂ ತಿರಸ್ಕರಿಸಿ
ಬೆಳೆದರೆ ಜೀವವಿಕಾಸವಲ್ಲ ಸಾಕ್ಷಾತ್ ಸ್ವಯಂಭೂ
ಸ್ವಂತ ಸನ್ನಿವೇಶಗಳ ತುರ್ತು ಆಶಯಗಳೇ ಮೈತಳೆದು
ನಮ್ಮ ನಾಭಿಕುಹರಗಳಿಂದ ತೊಡೆಗಳಿಂದ ನರಗಳಿಂದ
ಮೈ ಮನಸ್ಸಿನ ಭಾಗವಾಗಿ ನಮ್ಮೆಲ್ಲರ ಸಮಗ್ರ
ಸಂಕೇತವಾಗಿ ಏಳುತ್ತಾರೆ ಎದ್ದು ಸ್ವರ್ಣಗೋಪುರ ಸ್ಥಾಪನೆಗಳ
ಕೆಡವಿ-ಕೆಡವಿದರೆ ಉಸಿರಾಟ-ಉಸಿರಾಡಿದರೆ
ನಮ್ಮ ಬಿಡುಗಡೆ ಬಿಡುಗಡೆಯಲ್ಲಿ ಹೊಸ ಹುಟ್ಟು ಬೆಳವಣಿಗೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...