Home / ಕವನ / ಕವಿತೆ / ಹೊಸ ದೇವರ ಬರವಿಗಾಗಿ

ಹೊಸ ದೇವರ ಬರವಿಗಾಗಿ

ಓ ಓಸಿರಿಸ್! ನೈಲ್ ನದಿಯೇಕೆ ಉಕ್ಕಲಿಲ್ಲ?
ನಿನ್ನ ಕೊಳೆಯುತ್ತಿರುವ ಮೈಯಿಂದ ಸಸ್ಯಗಳೇಕೆ ಹುಟ್ಟಲಿಲ್ಲ?
ನಿನ್ನೆಲುಬುಗಳ ಹುಡುಕಿ ತಂದು ರಾಸಿ ಹಾಕಿ ಕರೆದರೂ ಕಾದರೂ
ಸತ್ತ ನೀ ಮರಳಿ ಬರಲಿಲ್ಲ!

ಆಶ್ವಯುಜ ಶುದ್ಧ ಮಾರ್ನಮಿ ಬರಲೆಂದು
ಬಾಲಕರು ಬಂದು ಹರಸಿದರೂ
ಮಾಡಿಟ್ಟ ನೈವೇದ್ಯ ಹಳಸಿದರೂ
ಕೂಗಿದರೂ ಓಗೊಲಿಲ್ಲ
ಪಾತಾಳದಿಂದ ಬಲೀಂದ್ರ ಬರಲಿಲ್ಲ ಮತ್ತಿಲ್ಲಿಗೆ

ಸತ್ತರೆ ಅಜೀರ್ಣದಿಂದ ಇಂದ್ರಾಗ್ನಿ ವರುಣರು ಮತ್ತೆ ಹುಟ್ಟಲಿಲ್ಲ
ಈ ಬ್ರಹ್ಮವಿಷ್ಣುರುದ್ರರೂ ವಯೋವೃದ್ಧರಾಗಿ ಮನುಷ್ಯ
ಜನಾಂಗ ಸ್ವರ್ಗ‍ದ ಸಂಪರ್ಕ ಕಳೆದಾಗ
ಸ್ವಂತ ಭೂಖಂಡವೂ ಕತ್ತಲೆಯ ಅಭೇದ್ಯ ಖಂಡ
ಅರ್ಥ ಚ್ಯುತಿಗೊಂಡ ಭಾಷೆ ಬರೇ ಗೊಂದಲಗೇರಿ ಸದ್ದುಗದ್ದಲದ
ಸುತ್ತು ಮುಖಗಳ ಮೇಲೆ ಕಿತ್ತರೂ ಬಾರದಂಥ ಅಂಟುಮೌನ
ಅಂತರ್ಮುಖದೊಳಗೆ ಕೂಡ ಅಪರಿಚಿತತ್ವ ಮುಖಾಮುಖಿಯ
ಈ ಹೆಪ್ಪುಗತ್ತಲೆಯಲ್ಲಿ ಹುಡುಕಿದರೆ

ಕ್ಯೂಬ ಬೊಲೀವಿಯಾ ಶೇಗವೇರಾ ಸಹ ದಾಟಿ
ಮತ್ತೆ ಹಿಪ್ಪಿ ಅತಿಮಾನಸಗಳನ್ನೂ ಅತಿಕ್ರಮಿಸಿ
ಅಂತ್ಯಗಳನ್ನೂ ಸೀಮೆಗಳನ್ನೂ ತಿರಸ್ಕರಿಸಿ
ಬೆಳೆದರೆ ಜೀವವಿಕಾಸವಲ್ಲ ಸಾಕ್ಷಾತ್ ಸ್ವಯಂಭೂ
ಸ್ವಂತ ಸನ್ನಿವೇಶಗಳ ತುರ್ತು ಆಶಯಗಳೇ ಮೈತಳೆದು
ನಮ್ಮ ನಾಭಿಕುಹರಗಳಿಂದ ತೊಡೆಗಳಿಂದ ನರಗಳಿಂದ
ಮೈ ಮನಸ್ಸಿನ ಭಾಗವಾಗಿ ನಮ್ಮೆಲ್ಲರ ಸಮಗ್ರ
ಸಂಕೇತವಾಗಿ ಏಳುತ್ತಾರೆ ಎದ್ದು ಸ್ವರ್ಣಗೋಪುರ ಸ್ಥಾಪನೆಗಳ
ಕೆಡವಿ-ಕೆಡವಿದರೆ ಉಸಿರಾಟ-ಉಸಿರಾಡಿದರೆ
ನಮ್ಮ ಬಿಡುಗಡೆ ಬಿಡುಗಡೆಯಲ್ಲಿ ಹೊಸ ಹುಟ್ಟು ಬೆಳವಣಿಗೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...