Home / ಕವನ / ಕವಿತೆ / ಹೊಸ ದೇವರ ಬರವಿಗಾಗಿ

ಹೊಸ ದೇವರ ಬರವಿಗಾಗಿ

ಓ ಓಸಿರಿಸ್! ನೈಲ್ ನದಿಯೇಕೆ ಉಕ್ಕಲಿಲ್ಲ?
ನಿನ್ನ ಕೊಳೆಯುತ್ತಿರುವ ಮೈಯಿಂದ ಸಸ್ಯಗಳೇಕೆ ಹುಟ್ಟಲಿಲ್ಲ?
ನಿನ್ನೆಲುಬುಗಳ ಹುಡುಕಿ ತಂದು ರಾಸಿ ಹಾಕಿ ಕರೆದರೂ ಕಾದರೂ
ಸತ್ತ ನೀ ಮರಳಿ ಬರಲಿಲ್ಲ!

ಆಶ್ವಯುಜ ಶುದ್ಧ ಮಾರ್ನಮಿ ಬರಲೆಂದು
ಬಾಲಕರು ಬಂದು ಹರಸಿದರೂ
ಮಾಡಿಟ್ಟ ನೈವೇದ್ಯ ಹಳಸಿದರೂ
ಕೂಗಿದರೂ ಓಗೊಲಿಲ್ಲ
ಪಾತಾಳದಿಂದ ಬಲೀಂದ್ರ ಬರಲಿಲ್ಲ ಮತ್ತಿಲ್ಲಿಗೆ

ಸತ್ತರೆ ಅಜೀರ್ಣದಿಂದ ಇಂದ್ರಾಗ್ನಿ ವರುಣರು ಮತ್ತೆ ಹುಟ್ಟಲಿಲ್ಲ
ಈ ಬ್ರಹ್ಮವಿಷ್ಣುರುದ್ರರೂ ವಯೋವೃದ್ಧರಾಗಿ ಮನುಷ್ಯ
ಜನಾಂಗ ಸ್ವರ್ಗ‍ದ ಸಂಪರ್ಕ ಕಳೆದಾಗ
ಸ್ವಂತ ಭೂಖಂಡವೂ ಕತ್ತಲೆಯ ಅಭೇದ್ಯ ಖಂಡ
ಅರ್ಥ ಚ್ಯುತಿಗೊಂಡ ಭಾಷೆ ಬರೇ ಗೊಂದಲಗೇರಿ ಸದ್ದುಗದ್ದಲದ
ಸುತ್ತು ಮುಖಗಳ ಮೇಲೆ ಕಿತ್ತರೂ ಬಾರದಂಥ ಅಂಟುಮೌನ
ಅಂತರ್ಮುಖದೊಳಗೆ ಕೂಡ ಅಪರಿಚಿತತ್ವ ಮುಖಾಮುಖಿಯ
ಈ ಹೆಪ್ಪುಗತ್ತಲೆಯಲ್ಲಿ ಹುಡುಕಿದರೆ

ಕ್ಯೂಬ ಬೊಲೀವಿಯಾ ಶೇಗವೇರಾ ಸಹ ದಾಟಿ
ಮತ್ತೆ ಹಿಪ್ಪಿ ಅತಿಮಾನಸಗಳನ್ನೂ ಅತಿಕ್ರಮಿಸಿ
ಅಂತ್ಯಗಳನ್ನೂ ಸೀಮೆಗಳನ್ನೂ ತಿರಸ್ಕರಿಸಿ
ಬೆಳೆದರೆ ಜೀವವಿಕಾಸವಲ್ಲ ಸಾಕ್ಷಾತ್ ಸ್ವಯಂಭೂ
ಸ್ವಂತ ಸನ್ನಿವೇಶಗಳ ತುರ್ತು ಆಶಯಗಳೇ ಮೈತಳೆದು
ನಮ್ಮ ನಾಭಿಕುಹರಗಳಿಂದ ತೊಡೆಗಳಿಂದ ನರಗಳಿಂದ
ಮೈ ಮನಸ್ಸಿನ ಭಾಗವಾಗಿ ನಮ್ಮೆಲ್ಲರ ಸಮಗ್ರ
ಸಂಕೇತವಾಗಿ ಏಳುತ್ತಾರೆ ಎದ್ದು ಸ್ವರ್ಣಗೋಪುರ ಸ್ಥಾಪನೆಗಳ
ಕೆಡವಿ-ಕೆಡವಿದರೆ ಉಸಿರಾಟ-ಉಸಿರಾಡಿದರೆ
ನಮ್ಮ ಬಿಡುಗಡೆ ಬಿಡುಗಡೆಯಲ್ಲಿ ಹೊಸ ಹುಟ್ಟು ಬೆಳವಣಿಗೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...