ಹೊಸ ದೇವರ ಬರವಿಗಾಗಿ

ಓ ಓಸಿರಿಸ್! ನೈಲ್ ನದಿಯೇಕೆ ಉಕ್ಕಲಿಲ್ಲ?
ನಿನ್ನ ಕೊಳೆಯುತ್ತಿರುವ ಮೈಯಿಂದ ಸಸ್ಯಗಳೇಕೆ ಹುಟ್ಟಲಿಲ್ಲ?
ನಿನ್ನೆಲುಬುಗಳ ಹುಡುಕಿ ತಂದು ರಾಸಿ ಹಾಕಿ ಕರೆದರೂ ಕಾದರೂ
ಸತ್ತ ನೀ ಮರಳಿ ಬರಲಿಲ್ಲ!

ಆಶ್ವಯುಜ ಶುದ್ಧ ಮಾರ್ನಮಿ ಬರಲೆಂದು
ಬಾಲಕರು ಬಂದು ಹರಸಿದರೂ
ಮಾಡಿಟ್ಟ ನೈವೇದ್ಯ ಹಳಸಿದರೂ
ಕೂಗಿದರೂ ಓಗೊಲಿಲ್ಲ
ಪಾತಾಳದಿಂದ ಬಲೀಂದ್ರ ಬರಲಿಲ್ಲ ಮತ್ತಿಲ್ಲಿಗೆ

ಸತ್ತರೆ ಅಜೀರ್ಣದಿಂದ ಇಂದ್ರಾಗ್ನಿ ವರುಣರು ಮತ್ತೆ ಹುಟ್ಟಲಿಲ್ಲ
ಈ ಬ್ರಹ್ಮವಿಷ್ಣುರುದ್ರರೂ ವಯೋವೃದ್ಧರಾಗಿ ಮನುಷ್ಯ
ಜನಾಂಗ ಸ್ವರ್ಗ‍ದ ಸಂಪರ್ಕ ಕಳೆದಾಗ
ಸ್ವಂತ ಭೂಖಂಡವೂ ಕತ್ತಲೆಯ ಅಭೇದ್ಯ ಖಂಡ
ಅರ್ಥ ಚ್ಯುತಿಗೊಂಡ ಭಾಷೆ ಬರೇ ಗೊಂದಲಗೇರಿ ಸದ್ದುಗದ್ದಲದ
ಸುತ್ತು ಮುಖಗಳ ಮೇಲೆ ಕಿತ್ತರೂ ಬಾರದಂಥ ಅಂಟುಮೌನ
ಅಂತರ್ಮುಖದೊಳಗೆ ಕೂಡ ಅಪರಿಚಿತತ್ವ ಮುಖಾಮುಖಿಯ
ಈ ಹೆಪ್ಪುಗತ್ತಲೆಯಲ್ಲಿ ಹುಡುಕಿದರೆ

ಕ್ಯೂಬ ಬೊಲೀವಿಯಾ ಶೇಗವೇರಾ ಸಹ ದಾಟಿ
ಮತ್ತೆ ಹಿಪ್ಪಿ ಅತಿಮಾನಸಗಳನ್ನೂ ಅತಿಕ್ರಮಿಸಿ
ಅಂತ್ಯಗಳನ್ನೂ ಸೀಮೆಗಳನ್ನೂ ತಿರಸ್ಕರಿಸಿ
ಬೆಳೆದರೆ ಜೀವವಿಕಾಸವಲ್ಲ ಸಾಕ್ಷಾತ್ ಸ್ವಯಂಭೂ
ಸ್ವಂತ ಸನ್ನಿವೇಶಗಳ ತುರ್ತು ಆಶಯಗಳೇ ಮೈತಳೆದು
ನಮ್ಮ ನಾಭಿಕುಹರಗಳಿಂದ ತೊಡೆಗಳಿಂದ ನರಗಳಿಂದ
ಮೈ ಮನಸ್ಸಿನ ಭಾಗವಾಗಿ ನಮ್ಮೆಲ್ಲರ ಸಮಗ್ರ
ಸಂಕೇತವಾಗಿ ಏಳುತ್ತಾರೆ ಎದ್ದು ಸ್ವರ್ಣಗೋಪುರ ಸ್ಥಾಪನೆಗಳ
ಕೆಡವಿ-ಕೆಡವಿದರೆ ಉಸಿರಾಟ-ಉಸಿರಾಡಿದರೆ
ನಮ್ಮ ಬಿಡುಗಡೆ ಬಿಡುಗಡೆಯಲ್ಲಿ ಹೊಸ ಹುಟ್ಟು ಬೆಳವಣಿಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೂರ
Next post ಸ್ವರ್ಣ ಕಾಲ

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys