Home / ಕವನ / ಕವಿತೆ / ಗ್ರಹಣ

ಗ್ರಹಣ

ಅಂಗಳಕ್ಕಿಳಿದು ತಮ್ಮಟೆ ಬಾರಿಸಿ
ಶಂಖ ಊದಿ
ದೇವರ ಬಲ ಹೆಚ್ಚಲಿ
ಹಾವಿನ ಬಲ ಕುಂದಲಿ ಹರಿಯೋ ಹರಿ
ಎನ್ನುತ್ತಾ ಸುತ್ತಿದರು
ಮುಳುಗಿ ಮಿಂದು ಉಂಡು ಮಲಗಿದರು
ಅಂದಿಗೆ ಧನ್ಯತೆ

ಫ್ಯಾಕ್ಟರಿಗಳ ಚಿಮಿಣಿಗಳ ದಟ್ಟ ನೆರಳುಗಳ
ಹಿರೋಶಿಮಾ ಅಣಬೆಗಳ ಪಾಷಾಣ ಮೋಡಗಳ
ಕೆಳಗೆ ಮಂದಿ ಮೇಲಕ್ಕೆ ನೋಡಿ
ಮಳೆ ಬೆಳೆಯ ಭವಿಷ್ಯ ಗುಣಿಸಿದರು
ಚಂದ್ರ ವರ್ಷಾಧಿಪತಿ ಶನಿ ಮಂತ್ರಾಧಿಪತಿ ಇತ್ಯಾದಿ
ಮತ್ತೆ ಈ ಸಂಕ್ರಾಂತಿ ರಕ್ತವಸ್ತ್ರಾಲಂಕೃತೆ ಶ್ವೇತಾಶ್ವವೇರಿ
ಕಂಚಿನ ಪಾತ್ರೆಯಲ್ಲಿ ಪಾಯಸ ಮೆಲ್ಲುತ್ತ
ದಕ್ಷಿಣಕ್ಕೆ ಹೋಗುತ್ತಾಳೆ.
ಬೆಲೆಗಳು ಏರುವುದುಂಟು
ರೋಗ ರುಜಿನಗಳ ಪೀಡೆಯುಂಟು
ಸರ್ವನಾಶಕ್ಕೆ ಎಡೆಯುಂಟು
ಇವರಿಗೆ ಪರಿಶಾಂತಿ ಮಂತ್ರಗಳಲ್ಲಿ ವಿಶ್ವಾಸವುಂಟು

ಕಾಲೇಜಿನ ಗಂಟೆಯ ಸದ್ದು ಅನುರಣಿಸುತ್ತದೆ
ಮನಸ್ಸಿನ ಅಗಾಧ ಜಗತ್ತಿನಲ್ಲಿ ನೋವು ಚಡಪಡಿಸುತ್ತಿದೆ
ದಿನನಿತ್ಯ ವ್ಯಾಪಾರ ವ್ಯವಹಾರ ಪ್ರವರ್ತನೆ ಆವರ್ತನೆ
ಪಾಠ ಹೇಳುವುದು
ಶಬ್ದಕ್ಕೆ ಶಬ್ದ ಜೋಡಿಸುವುದು
ಉದ್ದೇಶರಹಿತ ಮಾತು ಬೆಳೆಸುವುದು
ಹತ್ತು ಜನರಲ್ಲಿ ಬೆರೆತು ನಗುವುದು
ಗುಂಪಿನಿಂದ ತಲೆಮರೆಸಿ ಅಳುವುದು
ಕ್ಷಣಕ್ಷಣಕ್ಕೂ ಸಾಯುವುದು

ಒಂದೊಂದೇ ನಂಬಿಕೆಗಳು ಕಳೆದು
ಬಂಧಗಳು ತುಂಡಿರಿಸಿಕೊಂಡು ತಿರಸ್ಕರಿಸಿ
ಲಿಮೊಸಿನುಗಳಂತೆ ಹಾದು ಹೋದಾಗ-
ಹೇಳಿದ ಮಾತು, ಕೊಟ್ಟ ಭಾಷೆ, ಬರೆದ ಕವಿತೆ, ಚಿಂತಿಸಿದ ಮನಸ್ಸು,
ಹಿಡಿದ ಕೈ ಬಿಟ್ಟಮೇಲೆ
ಸಾವು ಬದುಕಿನ ನಡುವೆ ಯಾವುದನ್ನೂ ಆರಿಸಲಾರದೆ
ಉಳಿದಿರುವುದು ಇದು ಘೋರ

ಈ ಸಹಿಸಲಾಗದ ಯಾತನೆ ಯಾರಿಗೆ ತಾನೆ ತಲುಪುತ್ತದೆ?
ತಲುಪಿದರೂ ಅದರಿಂದ ತಾನೆ ಏನು?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...