Home / ಕವನ / ಕವಿತೆ / ಗ್ರಹಣ

ಗ್ರಹಣ

ಅಂಗಳಕ್ಕಿಳಿದು ತಮ್ಮಟೆ ಬಾರಿಸಿ
ಶಂಖ ಊದಿ
ದೇವರ ಬಲ ಹೆಚ್ಚಲಿ
ಹಾವಿನ ಬಲ ಕುಂದಲಿ ಹರಿಯೋ ಹರಿ
ಎನ್ನುತ್ತಾ ಸುತ್ತಿದರು
ಮುಳುಗಿ ಮಿಂದು ಉಂಡು ಮಲಗಿದರು
ಅಂದಿಗೆ ಧನ್ಯತೆ

ಫ್ಯಾಕ್ಟರಿಗಳ ಚಿಮಿಣಿಗಳ ದಟ್ಟ ನೆರಳುಗಳ
ಹಿರೋಶಿಮಾ ಅಣಬೆಗಳ ಪಾಷಾಣ ಮೋಡಗಳ
ಕೆಳಗೆ ಮಂದಿ ಮೇಲಕ್ಕೆ ನೋಡಿ
ಮಳೆ ಬೆಳೆಯ ಭವಿಷ್ಯ ಗುಣಿಸಿದರು
ಚಂದ್ರ ವರ್ಷಾಧಿಪತಿ ಶನಿ ಮಂತ್ರಾಧಿಪತಿ ಇತ್ಯಾದಿ
ಮತ್ತೆ ಈ ಸಂಕ್ರಾಂತಿ ರಕ್ತವಸ್ತ್ರಾಲಂಕೃತೆ ಶ್ವೇತಾಶ್ವವೇರಿ
ಕಂಚಿನ ಪಾತ್ರೆಯಲ್ಲಿ ಪಾಯಸ ಮೆಲ್ಲುತ್ತ
ದಕ್ಷಿಣಕ್ಕೆ ಹೋಗುತ್ತಾಳೆ.
ಬೆಲೆಗಳು ಏರುವುದುಂಟು
ರೋಗ ರುಜಿನಗಳ ಪೀಡೆಯುಂಟು
ಸರ್ವನಾಶಕ್ಕೆ ಎಡೆಯುಂಟು
ಇವರಿಗೆ ಪರಿಶಾಂತಿ ಮಂತ್ರಗಳಲ್ಲಿ ವಿಶ್ವಾಸವುಂಟು

ಕಾಲೇಜಿನ ಗಂಟೆಯ ಸದ್ದು ಅನುರಣಿಸುತ್ತದೆ
ಮನಸ್ಸಿನ ಅಗಾಧ ಜಗತ್ತಿನಲ್ಲಿ ನೋವು ಚಡಪಡಿಸುತ್ತಿದೆ
ದಿನನಿತ್ಯ ವ್ಯಾಪಾರ ವ್ಯವಹಾರ ಪ್ರವರ್ತನೆ ಆವರ್ತನೆ
ಪಾಠ ಹೇಳುವುದು
ಶಬ್ದಕ್ಕೆ ಶಬ್ದ ಜೋಡಿಸುವುದು
ಉದ್ದೇಶರಹಿತ ಮಾತು ಬೆಳೆಸುವುದು
ಹತ್ತು ಜನರಲ್ಲಿ ಬೆರೆತು ನಗುವುದು
ಗುಂಪಿನಿಂದ ತಲೆಮರೆಸಿ ಅಳುವುದು
ಕ್ಷಣಕ್ಷಣಕ್ಕೂ ಸಾಯುವುದು

ಒಂದೊಂದೇ ನಂಬಿಕೆಗಳು ಕಳೆದು
ಬಂಧಗಳು ತುಂಡಿರಿಸಿಕೊಂಡು ತಿರಸ್ಕರಿಸಿ
ಲಿಮೊಸಿನುಗಳಂತೆ ಹಾದು ಹೋದಾಗ-
ಹೇಳಿದ ಮಾತು, ಕೊಟ್ಟ ಭಾಷೆ, ಬರೆದ ಕವಿತೆ, ಚಿಂತಿಸಿದ ಮನಸ್ಸು,
ಹಿಡಿದ ಕೈ ಬಿಟ್ಟಮೇಲೆ
ಸಾವು ಬದುಕಿನ ನಡುವೆ ಯಾವುದನ್ನೂ ಆರಿಸಲಾರದೆ
ಉಳಿದಿರುವುದು ಇದು ಘೋರ

ಈ ಸಹಿಸಲಾಗದ ಯಾತನೆ ಯಾರಿಗೆ ತಾನೆ ತಲುಪುತ್ತದೆ?
ತಲುಪಿದರೂ ಅದರಿಂದ ತಾನೆ ಏನು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...