Home / ಕವನ / ಕವಿತೆ / ಗ್ರಹಣ

ಗ್ರಹಣ

ಅಂಗಳಕ್ಕಿಳಿದು ತಮ್ಮಟೆ ಬಾರಿಸಿ
ಶಂಖ ಊದಿ
ದೇವರ ಬಲ ಹೆಚ್ಚಲಿ
ಹಾವಿನ ಬಲ ಕುಂದಲಿ ಹರಿಯೋ ಹರಿ
ಎನ್ನುತ್ತಾ ಸುತ್ತಿದರು
ಮುಳುಗಿ ಮಿಂದು ಉಂಡು ಮಲಗಿದರು
ಅಂದಿಗೆ ಧನ್ಯತೆ

ಫ್ಯಾಕ್ಟರಿಗಳ ಚಿಮಿಣಿಗಳ ದಟ್ಟ ನೆರಳುಗಳ
ಹಿರೋಶಿಮಾ ಅಣಬೆಗಳ ಪಾಷಾಣ ಮೋಡಗಳ
ಕೆಳಗೆ ಮಂದಿ ಮೇಲಕ್ಕೆ ನೋಡಿ
ಮಳೆ ಬೆಳೆಯ ಭವಿಷ್ಯ ಗುಣಿಸಿದರು
ಚಂದ್ರ ವರ್ಷಾಧಿಪತಿ ಶನಿ ಮಂತ್ರಾಧಿಪತಿ ಇತ್ಯಾದಿ
ಮತ್ತೆ ಈ ಸಂಕ್ರಾಂತಿ ರಕ್ತವಸ್ತ್ರಾಲಂಕೃತೆ ಶ್ವೇತಾಶ್ವವೇರಿ
ಕಂಚಿನ ಪಾತ್ರೆಯಲ್ಲಿ ಪಾಯಸ ಮೆಲ್ಲುತ್ತ
ದಕ್ಷಿಣಕ್ಕೆ ಹೋಗುತ್ತಾಳೆ.
ಬೆಲೆಗಳು ಏರುವುದುಂಟು
ರೋಗ ರುಜಿನಗಳ ಪೀಡೆಯುಂಟು
ಸರ್ವನಾಶಕ್ಕೆ ಎಡೆಯುಂಟು
ಇವರಿಗೆ ಪರಿಶಾಂತಿ ಮಂತ್ರಗಳಲ್ಲಿ ವಿಶ್ವಾಸವುಂಟು

ಕಾಲೇಜಿನ ಗಂಟೆಯ ಸದ್ದು ಅನುರಣಿಸುತ್ತದೆ
ಮನಸ್ಸಿನ ಅಗಾಧ ಜಗತ್ತಿನಲ್ಲಿ ನೋವು ಚಡಪಡಿಸುತ್ತಿದೆ
ದಿನನಿತ್ಯ ವ್ಯಾಪಾರ ವ್ಯವಹಾರ ಪ್ರವರ್ತನೆ ಆವರ್ತನೆ
ಪಾಠ ಹೇಳುವುದು
ಶಬ್ದಕ್ಕೆ ಶಬ್ದ ಜೋಡಿಸುವುದು
ಉದ್ದೇಶರಹಿತ ಮಾತು ಬೆಳೆಸುವುದು
ಹತ್ತು ಜನರಲ್ಲಿ ಬೆರೆತು ನಗುವುದು
ಗುಂಪಿನಿಂದ ತಲೆಮರೆಸಿ ಅಳುವುದು
ಕ್ಷಣಕ್ಷಣಕ್ಕೂ ಸಾಯುವುದು

ಒಂದೊಂದೇ ನಂಬಿಕೆಗಳು ಕಳೆದು
ಬಂಧಗಳು ತುಂಡಿರಿಸಿಕೊಂಡು ತಿರಸ್ಕರಿಸಿ
ಲಿಮೊಸಿನುಗಳಂತೆ ಹಾದು ಹೋದಾಗ-
ಹೇಳಿದ ಮಾತು, ಕೊಟ್ಟ ಭಾಷೆ, ಬರೆದ ಕವಿತೆ, ಚಿಂತಿಸಿದ ಮನಸ್ಸು,
ಹಿಡಿದ ಕೈ ಬಿಟ್ಟಮೇಲೆ
ಸಾವು ಬದುಕಿನ ನಡುವೆ ಯಾವುದನ್ನೂ ಆರಿಸಲಾರದೆ
ಉಳಿದಿರುವುದು ಇದು ಘೋರ

ಈ ಸಹಿಸಲಾಗದ ಯಾತನೆ ಯಾರಿಗೆ ತಾನೆ ತಲುಪುತ್ತದೆ?
ತಲುಪಿದರೂ ಅದರಿಂದ ತಾನೆ ಏನು?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...