ಗ್ರಹಣ

ಅಂಗಳಕ್ಕಿಳಿದು ತಮ್ಮಟೆ ಬಾರಿಸಿ
ಶಂಖ ಊದಿ
ದೇವರ ಬಲ ಹೆಚ್ಚಲಿ
ಹಾವಿನ ಬಲ ಕುಂದಲಿ ಹರಿಯೋ ಹರಿ
ಎನ್ನುತ್ತಾ ಸುತ್ತಿದರು
ಮುಳುಗಿ ಮಿಂದು ಉಂಡು ಮಲಗಿದರು
ಅಂದಿಗೆ ಧನ್ಯತೆ

ಫ್ಯಾಕ್ಟರಿಗಳ ಚಿಮಿಣಿಗಳ ದಟ್ಟ ನೆರಳುಗಳ
ಹಿರೋಶಿಮಾ ಅಣಬೆಗಳ ಪಾಷಾಣ ಮೋಡಗಳ
ಕೆಳಗೆ ಮಂದಿ ಮೇಲಕ್ಕೆ ನೋಡಿ
ಮಳೆ ಬೆಳೆಯ ಭವಿಷ್ಯ ಗುಣಿಸಿದರು
ಚಂದ್ರ ವರ್ಷಾಧಿಪತಿ ಶನಿ ಮಂತ್ರಾಧಿಪತಿ ಇತ್ಯಾದಿ
ಮತ್ತೆ ಈ ಸಂಕ್ರಾಂತಿ ರಕ್ತವಸ್ತ್ರಾಲಂಕೃತೆ ಶ್ವೇತಾಶ್ವವೇರಿ
ಕಂಚಿನ ಪಾತ್ರೆಯಲ್ಲಿ ಪಾಯಸ ಮೆಲ್ಲುತ್ತ
ದಕ್ಷಿಣಕ್ಕೆ ಹೋಗುತ್ತಾಳೆ.
ಬೆಲೆಗಳು ಏರುವುದುಂಟು
ರೋಗ ರುಜಿನಗಳ ಪೀಡೆಯುಂಟು
ಸರ್ವನಾಶಕ್ಕೆ ಎಡೆಯುಂಟು
ಇವರಿಗೆ ಪರಿಶಾಂತಿ ಮಂತ್ರಗಳಲ್ಲಿ ವಿಶ್ವಾಸವುಂಟು

ಕಾಲೇಜಿನ ಗಂಟೆಯ ಸದ್ದು ಅನುರಣಿಸುತ್ತದೆ
ಮನಸ್ಸಿನ ಅಗಾಧ ಜಗತ್ತಿನಲ್ಲಿ ನೋವು ಚಡಪಡಿಸುತ್ತಿದೆ
ದಿನನಿತ್ಯ ವ್ಯಾಪಾರ ವ್ಯವಹಾರ ಪ್ರವರ್ತನೆ ಆವರ್ತನೆ
ಪಾಠ ಹೇಳುವುದು
ಶಬ್ದಕ್ಕೆ ಶಬ್ದ ಜೋಡಿಸುವುದು
ಉದ್ದೇಶರಹಿತ ಮಾತು ಬೆಳೆಸುವುದು
ಹತ್ತು ಜನರಲ್ಲಿ ಬೆರೆತು ನಗುವುದು
ಗುಂಪಿನಿಂದ ತಲೆಮರೆಸಿ ಅಳುವುದು
ಕ್ಷಣಕ್ಷಣಕ್ಕೂ ಸಾಯುವುದು

ಒಂದೊಂದೇ ನಂಬಿಕೆಗಳು ಕಳೆದು
ಬಂಧಗಳು ತುಂಡಿರಿಸಿಕೊಂಡು ತಿರಸ್ಕರಿಸಿ
ಲಿಮೊಸಿನುಗಳಂತೆ ಹಾದು ಹೋದಾಗ-
ಹೇಳಿದ ಮಾತು, ಕೊಟ್ಟ ಭಾಷೆ, ಬರೆದ ಕವಿತೆ, ಚಿಂತಿಸಿದ ಮನಸ್ಸು,
ಹಿಡಿದ ಕೈ ಬಿಟ್ಟಮೇಲೆ
ಸಾವು ಬದುಕಿನ ನಡುವೆ ಯಾವುದನ್ನೂ ಆರಿಸಲಾರದೆ
ಉಳಿದಿರುವುದು ಇದು ಘೋರ

ಈ ಸಹಿಸಲಾಗದ ಯಾತನೆ ಯಾರಿಗೆ ತಾನೆ ತಲುಪುತ್ತದೆ?
ತಲುಪಿದರೂ ಅದರಿಂದ ತಾನೆ ಏನು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈಡಿಪಸ್‌ಗೊಂದು ಪ್ರಶ್ನೆ
Next post ಮಂಗಳಾರುತಿ

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

cheap jordans|wholesale air max|wholesale jordans|wholesale jewelry|wholesale jerseys