Home / ಕವನ / ಕವಿತೆ / ಮಧ್ಯಂತರ ೧: ಮೈಖೆಲೇಂಜೆಲೊ

ಮಧ್ಯಂತರ ೧: ಮೈಖೆಲೇಂಜೆಲೊ

ಯಾವ ಶಿಲೆಗಳಲ್ಲಿ ಯಾವ ಪ್ರತಿಮೆಗಳು ? –
ಮೈಖೆಲೇಂಜೆಲೊ ಹೇಳು, ಎಲ್ಲ ತಿಳಿದವನು ನೀನು
ಒಂಟಿಯಾಗಿ ಈ ಬೆಟ್ಟ ಸುತ್ತಿದವನು
ಬರಿಗಾಲಲ್ಲಿ ಬಂಡೆಯಿಂದ ಬಂಡೆಗೆ ಜಿಗಿದವನು
ಅವುಗಳ ಮೈಯ ಮುಂಜಾನೆಯ ತಂಪು
ಮಧ್ಯಾಹ್ನದ ಬೇಗೆ ಸಂಜೆಯ ಬಿಸಿ
ಕೈಯಲ್ಲಿ ಸ್ಪರ್ಶಿಸಿದವನು
ಆಹ! ಅದೆಂಥ ಸಂಗೀತ
ಎಲ್ಲರೂ ಮಲಗಿರುವ ಹೊತ್ತು,
ಸಮುದ್ರದೊಳಗಿಂದ ಬೀಸಿದ ಗಾಳಿ
ಹುಲ್ಲು ಹೂವುಗಳ ನಡುನಡುವೆ ಸುಳಿದು
ಎಬ್ಬಿಸುವುದೇನು ಕಚಗುಳಿ
ತಿಂಗಳ ಬೆಳಕು ನೀರಲಿ ಬಿದ್ದು
ತಳತಳಿಸುತಿರುವಾಗ
ಎಚ್ಚರಾದವರೆಷ್ಟು ಎದ್ದು ಕುಳಿತವರೆಷ್ಟು
ಮೈಖೆಲೇಂಜೆಲೊ ಹೇಳು ಎಲ್ಲ ತಿಳಿದವನು ನೀನು

ಶಬ್ದಗಳ ಹುಡುಕುತ್ತ ನಾನು
ಇಷ್ಟು ದೂರವು ಬಂದೆ
ಇನ್ನು ಇಲ್ಲಿಂದ ಮುಂದರಿಯಲಾರೆ–
ಮುಂದರಿಯದಿರಲಾರೆ ಎನ್ನುತ್ತಲೇ
ನಿನ್ನ ಗುರುತನು ಕಂಡೆ
ಶತಮಾನಗಳು ಕಳೆದುದು ನಿಜ
ಬಿಸಿಲು ಮಳೆಗಳು ಬಂದು ಹೋದುದು ನಿಜ
ಈ ಸಮುದ್ರವೂ ಮೊರೆಯಿತು
ಅದಷ್ಟೋ ಬಾರಿ
ಕಾದು ನಿನ್ನ ದಾರಿ-
ನನ್ನ ತೀರಗಳು ಬೇರೆ
ನನ್ನ ಮಳಲಿನ ಬಣ್ಣ ಬೇರೆ
ನನ್ನ ಶಿಲಾರೂಪಗಳು ಬೇರೆ
ಆದರೇನಾಯಿತು
ಮೈಖೆಲೇಂಜೆಲೊ ಹೇಳು, ಎಲ್ಲ ತಿಳಿದವನು ನೀನು
ಕಾಲದಿಂದ ಕಾಲಕ್ಕೆ ದೇಶದಿಂದ ದೇಶಕ್ಕೆ
ಹರ್ಷ ಬದಲಾಗುವುದೆ
ಯಾರಲ್ಲೂ ಹೇಳದಂಥ ಸಂ-
ಘರ್ಷ ಬದಲಾಗುವುದೇ
ಅಹ! ಶಬ್ದಗಳ ಹುಡುಕುತ್ತಲೇ
ಕೇಳಿಸುವುದೇನು ಶಬ್ಧ!
ಅಂಬಿಗನ ಹಾಡೆ
ಕಮ್ಮಾರನ ಹೊಡೆತವೆ
ಅತಿ ನಸುಕಿಗೇ ಎದ್ದ
ಬೆಸ್ತನೊಬ್ಬನ ನಡೆತವೆ
ನನ್ನದೇ ಎದೆ ಬಡಿತದ
ಯಾವ ಶಬ್ದಗಳಲ್ಲಿ ಯಾವ ಅರ್ಥಗಳು
ಮೈಖೆಲೇಂಜೆಲೊ ಹೇಳು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...