Home / ಕವನ / ಕವಿತೆ / ಅಪ್ಪುವಿನ ರೈಲು

ಅಪ್ಪುವಿನ ರೈಲು

ಎಡೆಬಿಡದೆ ಸುತ್ತುವುದು ಅಪ್ಪುವಿನ ರೈಲು
ಹೈದರಾಬಾದಿನ ಬಯಲು
ಫಲಕ್‌ನುಮಾದಿಂದ ಬೋಲಾರಾಮಿಗೆ
ಯಾಕೆ ಏನೆಂಬ ಗೊಡವೆಯಿಲ್ಲದೆ
ಕರೆಯುವುದು ಮಂದಿಯನು ರಾತ್ರಿಹಗಲು
ಮಲಕ್‌ಪೇಟೆ ಕಾಚಿಗುಡ ಸೀತಾಫಲ ಮಂಡಿ
ಎಲ್ಲ ಕಡೆಗೂ ಇದೊಂದೇ ಬಂಡಿ
ಬೆಳಿಗ್ಗೆ ಮಧ್ಯಾಹ್ನ ಸಂಜೆ ಇಳಿಸಂಜೆ
ಕೂತಲ್ಲೆ ಕಣ್ಣಿಗೆ ನಿದ್ದೆ ಹತ್ತುವ ತನಕ
ನಿದ್ದೆಯಲ್ಲಿ ಹೊಸ ಹೊಸ ಕನಸು ಬೀಳುವ ತನಕ
ಯಾವಾಗ ಬಂದರು ಮಂದಿ ಅವರವರ ಮನೆಗೆ
ಒಬ್ಬೊಬ್ಬರ ಕೈಯಲ್ಲೂ ಒಂದೊಂದು ಮೂಟೆ
ಏನದರ ಒಳಗೆ ಎಲ್ಲ ರಹಸ್ಯ!

ಕೆಲವೊಮ್ಮೆ ಮಾತ್ರ ನಿಂತು ಬಿಡುವುದು
ಅಪ್ಪುವಿನ ರೈಲು ಅರ್ಧದಾರಿಯಲ್ಲಿ
ಅದರ ಕೊಳವೆಯಿಂದ ಹೋಗುವುದು ಹೊಗೆ
ಅಕಾಶಕ್ಕೆ ಹೋಗಿ ಆಗುವುದು ಮೋಡ
ಮಳೆಯಾಗಿ ಸುರಿದು ಕಪ್ಪೆಗಳ ಕರೆಯುವುದು
ಜನ ಮಾತ್ರ ಕಾಯುವುದಿಲ್ಲ. ಅವರು
ಎಲ್ಲೆಂದರಲ್ಲಿ–ಸಂಕದಲ್ಲಿ, ಬಯಲಲ್ಲಿ
ಭ್ರಮೆಗೊಂಡ ಇರುವೆಗಳಂತೆ
ಇಳಿದು ಚದರುವರು; ದಾರಿ ಬದಿಯ
ಎಮ್ಮೆಗಳು ಹಳ್ಳಕೊಳ್ಳಗಳಿಂದ ಎದ್ದು
ಇದು ಹೀಗೇಕೆಂದು ನೋಡುವುವು
ಅರ್ಥವಾಗದೆ ಹೊರಟುಹೋಗುವುವು

ಅಷ್ಟೂ ಹೊತ್ತು ನಿಂತಲ್ಲೆ ನಿಂತ ಅಪ್ಪುವಿನ ರೈಲು
ಇನ್ನೇನು ರಾತ್ರಿ ಇಲ್ಲೇ ತೆಗೆಯುವುದು ನಿದ್ದೆ
ಎಂದುಕೊಂಡರೆ ಥಟ್ಪನೆ ಹಾಹಾ ಎಂದು
ಅದರ ಗಾಲಿಗಳಿಗೆ ಜೀವ ಬಂದು
ಹೊರಟುಬಿಡುವುದು-ಅದೋ ಆಗ ಬರುವರು
ಇದು ತನಕ ಎಲ್ಲೂ ಕಾಣಿಸದ ಜನರು
ಎಲ್ಲಿ ಹೋಗಿದ್ದರು ಅವರು? ಮಸೀದಿಗೆ.
ದೇವರ ಗುಡಿಗೆ-ಇದು ಪ್ರಾರ್ಥನೆಯ ಸಮಯ!
ಅಪ್ಪುವಿಗೊ ಕುಳಿತಲ್ಲೆ ತೂಕಡಿಕೆ
ರೆಪ್ಪೆಗಳೆಡೆಯಿಂದ ಕಾಣಿಸುವುದೇನು?
ಓಹೊ ನೂರು ಮೆಟ್ಟಿಲ ಮಹಡಿ-ಅದರೊಳಗೆ
ಕುಣಿಯುವುದು ಒಂದು ಕರಡಿ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...