Home / ಕವನ / ಕವಿತೆ / ಇಲಿ ಬೇಟೆ

ಇಲಿ ಬೇಟೆ

ತಿಮ್ಮ ಬೋರ ನಂಜ ಕೂಡಿ
ರಾಗಿ ಹಿಟ್ಟು ಕಲಸುವಾಗ
ಬಾಯ್ಗೆ ಬಾಯಿ ಮಾತು ಎದ್ದು
ಅವರನ್ನವರು ಮರೆತು ಕುಡಿದು
ನಂಜ ಕುಪ್ಪಿ ಎತ್ತಿದ-
ಬೋರ ಪಾಲು ಕೇಳಿದ!

ಹಿಂದಿನಿರುಳು ಬೇಟೆಯಲ್ಲಿ
ಕೊಚ್ಚೆ ಹಾರ್ದ ಮೊಲದ ಕಾಲ
ಹಿಡಿದು ತಿಮ್ಮ ಅಂತೆ ತಂದು
ಮಾಂಸ ತುಂಡು ಮಾಡಿ ಕಡೆಗೆ
ಸುಟ್ಟು ಕೂತ ಮಾಂಸವ;
ಸೇಂದಿ ಜತೆಗೆ ರಸವಲ!

ನಂಜ ಒದರಿ ಪಾಲು ಕೇಳೆ
ಹರಕು ಜೇಬು ಮೂಲೆಯಿಂದ,
ಇಲಿಯು ಒಂದು ಬೆನ್ನುಹತ್ತಿ
ಹಾಗೆ ಕೂತು ಹೆಗಲ ಮೇಲೆ
ನೋಡಿ ಆಚೆ ಈಚೆಗೆ;
ಬಿತ್ತು ಹಿಟ್ಟು ಪಾತ್ರಕೆ!

ರಾಗಿ ಮುದ್ದೆ ಇಲಿಯ ಗಾತ್ರ,
ಹಿಟ್ಟೊ ಇಲಿಯೊ ಎಂದು ಬೋರ
ಬೆಪ್ಪು ಹಿಡಿದು ನೋಡುತಿರಲು,
ಹಿಟ್ಟು ಓಡುತ್ತದೆಯೆ-ಎಂದು
ಸಿಡಿದು ಹಾರ್ದ ಇಲಿಯನು
ಓಡಿ ಕಾಡಿ ಕೊಲ್ಲಲು!

ಇಲಿಯು ಹೆಕ್ಕಿ ಮುದ್ದೆಯೊಂದ
ನಂಜನ್ ಕಾಲ ಮಧ್ಯಕ್ಕಾಗಿ
ಓಡೆ-ಅವನು ಬೋರನೆಗಲ
ಹತ್ತಿ ಕೂತು ಗಾಬ್ರಿಯಿಂದ,
ಅಯ್ಯೊ ಇಲಿಯು ಅಂದನು.
ಹಿಟ್ಟು ಹೋಯ್ತೆಂದತ್ತನು!

ತಿಮ್ಮ ಓಡಿ ಓಡಿ ಇಲಿಯ
ಬೆರಸಲಿತ್ತ ಬೋರ ಬಂದು
ಅಲ್ಲೆ ಇದ್ದ ಗುಂಡುಕಲ್ಲ
ಎತ್ತಿ ಓಡ್ದ ಇಲಿಯನಟ್ಟಿ
ಕೊಲ್ವೆನಿಲಿಯನೆನ್ನುತ
ಬಡಿವೆ ತಲೆಗೆಂದೇಳುತ!

ಇತ್ತ ಅತ್ತ ಇಲಿಯ ಸುತ್ತ
ಓಡಿ ದಣಿಯೆ ಬೋರ ತಿಮ್ಮ
ನಂಜ ಅತ್ತ ಕಾಡು ಸುತ್ತಿ
ಆಯ್ದು ತಂದು ದೊಣ್ಣೆ ಒಂದು-
ಇಲಿಯ ತಲೆಗೆ ಬಡಿಯಲು
ಮುದ್ದೆ ಸೇಡು ತೀರ್‍ಸಲು!

ಇಲಿಗೆ ಎಂದು ಬಡಿದ ಪೆಟ್ಟು
ಪಾತ್ರೆ ತಾಗೆ ಹಿಟ್ಟು ಚದರಿ-
ಕುಪ್ಪಿ ಚೂರು ಸಿಡಿದು ಹಾರಿ-
ಹೋಯ್ತೊ ಕಣ್ಣು-ಎಂದು ತಿಮ್ಮ
ಬೊಬ್ಬೆಹಾಕೆ ಇಲಿಯದೊ
ಬಿಲವ ಸರ್‍ರನ್ಹೊಕ್ಕಿತ್ತೊ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...