Home / ಕವನ / ಕವಿತೆ / ಇಲಿ ಬೇಟೆ

ಇಲಿ ಬೇಟೆ

ತಿಮ್ಮ ಬೋರ ನಂಜ ಕೂಡಿ
ರಾಗಿ ಹಿಟ್ಟು ಕಲಸುವಾಗ
ಬಾಯ್ಗೆ ಬಾಯಿ ಮಾತು ಎದ್ದು
ಅವರನ್ನವರು ಮರೆತು ಕುಡಿದು
ನಂಜ ಕುಪ್ಪಿ ಎತ್ತಿದ-
ಬೋರ ಪಾಲು ಕೇಳಿದ!

ಹಿಂದಿನಿರುಳು ಬೇಟೆಯಲ್ಲಿ
ಕೊಚ್ಚೆ ಹಾರ್ದ ಮೊಲದ ಕಾಲ
ಹಿಡಿದು ತಿಮ್ಮ ಅಂತೆ ತಂದು
ಮಾಂಸ ತುಂಡು ಮಾಡಿ ಕಡೆಗೆ
ಸುಟ್ಟು ಕೂತ ಮಾಂಸವ;
ಸೇಂದಿ ಜತೆಗೆ ರಸವಲ!

ನಂಜ ಒದರಿ ಪಾಲು ಕೇಳೆ
ಹರಕು ಜೇಬು ಮೂಲೆಯಿಂದ,
ಇಲಿಯು ಒಂದು ಬೆನ್ನುಹತ್ತಿ
ಹಾಗೆ ಕೂತು ಹೆಗಲ ಮೇಲೆ
ನೋಡಿ ಆಚೆ ಈಚೆಗೆ;
ಬಿತ್ತು ಹಿಟ್ಟು ಪಾತ್ರಕೆ!

ರಾಗಿ ಮುದ್ದೆ ಇಲಿಯ ಗಾತ್ರ,
ಹಿಟ್ಟೊ ಇಲಿಯೊ ಎಂದು ಬೋರ
ಬೆಪ್ಪು ಹಿಡಿದು ನೋಡುತಿರಲು,
ಹಿಟ್ಟು ಓಡುತ್ತದೆಯೆ-ಎಂದು
ಸಿಡಿದು ಹಾರ್ದ ಇಲಿಯನು
ಓಡಿ ಕಾಡಿ ಕೊಲ್ಲಲು!

ಇಲಿಯು ಹೆಕ್ಕಿ ಮುದ್ದೆಯೊಂದ
ನಂಜನ್ ಕಾಲ ಮಧ್ಯಕ್ಕಾಗಿ
ಓಡೆ-ಅವನು ಬೋರನೆಗಲ
ಹತ್ತಿ ಕೂತು ಗಾಬ್ರಿಯಿಂದ,
ಅಯ್ಯೊ ಇಲಿಯು ಅಂದನು.
ಹಿಟ್ಟು ಹೋಯ್ತೆಂದತ್ತನು!

ತಿಮ್ಮ ಓಡಿ ಓಡಿ ಇಲಿಯ
ಬೆರಸಲಿತ್ತ ಬೋರ ಬಂದು
ಅಲ್ಲೆ ಇದ್ದ ಗುಂಡುಕಲ್ಲ
ಎತ್ತಿ ಓಡ್ದ ಇಲಿಯನಟ್ಟಿ
ಕೊಲ್ವೆನಿಲಿಯನೆನ್ನುತ
ಬಡಿವೆ ತಲೆಗೆಂದೇಳುತ!

ಇತ್ತ ಅತ್ತ ಇಲಿಯ ಸುತ್ತ
ಓಡಿ ದಣಿಯೆ ಬೋರ ತಿಮ್ಮ
ನಂಜ ಅತ್ತ ಕಾಡು ಸುತ್ತಿ
ಆಯ್ದು ತಂದು ದೊಣ್ಣೆ ಒಂದು-
ಇಲಿಯ ತಲೆಗೆ ಬಡಿಯಲು
ಮುದ್ದೆ ಸೇಡು ತೀರ್‍ಸಲು!

ಇಲಿಗೆ ಎಂದು ಬಡಿದ ಪೆಟ್ಟು
ಪಾತ್ರೆ ತಾಗೆ ಹಿಟ್ಟು ಚದರಿ-
ಕುಪ್ಪಿ ಚೂರು ಸಿಡಿದು ಹಾರಿ-
ಹೋಯ್ತೊ ಕಣ್ಣು-ಎಂದು ತಿಮ್ಮ
ಬೊಬ್ಬೆಹಾಕೆ ಇಲಿಯದೊ
ಬಿಲವ ಸರ್‍ರನ್ಹೊಕ್ಕಿತ್ತೊ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...