ಕವಿಯ ಬಯಕೆ

ಕವಿಯಾಗಿ ಸಲ್ಲಿಸುವ ಮಧುರಗಾನದ ಸೊಂಪು
ನುಣ್ದನಿಗಳಿಂಪಿನಿಂ ಬರೆದು ಪೊಗಳುವ ಮಾತು
ಸಾಲುಗಳ ಲೀಲೆಯಲಿ ಬರೆದ ಬಡಗಬ್ಬಿಗನ
ನಾಲ್ಪಂಕ್ತಿ ಕವನವದು ಏನು ಕಲ್ಪಿತ ವಾಣಿ!
ವೇದಗಳು ಶಾಸ್ತ್ರಗಳು ಕವಿಜಿಹ್ವೆ ಉಕ್ತಿಗಳು
ಯಾರ ಹಂಗನು ಕಾಯೆ ಹೇಳಿ ನಲಿವುವೊ ಏನೊ!
ತಮ್ಮ ಹೃದಯದ ಬಯಕೆ ಪದ್ಯ ಸಾಲ್ಗಳ ಮಾಲೆ.
ಕವಿಯು ಮರೆ ಮೋಸವನು ಎತ್ತಿ ತೋರುವ ಇಹದ
ಬಿಚ್ಚು ಮನಸಿನ ಬೇಹುಗಾರನೆಂದರೆ ಏನು?

ಅವನ ಬಯಕೆ ಅದೇನು?  ಜೀವನದ ಸಮರವನು
ಸಾಮರಸ ವಾದದಲಿ ಹಾಡಿತೋರಿಸಿ ನಲಿದು
ಜನದ ಪಾಡಿಗೆ ತಾನು ಪಾಲುಗಾರನು ಆಗಿ
ಕಳ್ಳ ಜೀವದ ತಂತ್ರಗಳ ಬಯಲಿಗೆಳೆ ತಂದು
ಜ್ಞಾನಿಗಳ ನಿಷ್ಪಕ್ಷ ತಲೆಗಳನು ತೂಗಿಸುತ
ತಾನು ಹಾಡಿದ ಗಾನ ಯಾರು ಪೊಗಳುವರೆಂದು
ತನ್ನ ವಾದಕೆ ಯಾರು ಮನ್ನಣೆಯ ಸಲಿಸುವರು
ಎಂದು ನೋಡುವ ತಾನು ಬರೆದ ಹಾಡ್ಗಳನೆಲ್ಲ
ಕ್ರಮವಾಂತು ಹೇಳಯವುದೆ ಅವನ ಜೀವದ ಬಯಕೆ!

ಮಧುರವಾದಾ ಕೀರ್ತಿ ಕವಿವರನೆ ಬಯಸುವನು
ತಾನು ಲೋಕಕೆ ಅಂದ ವಿಶ್ವರಹಸ್ಯದ ಸೊಲ್ಲು
ಪಾಪಿಯಾದವನೊಬ್ಬ ಹೇಳಿ ನಲಿದೊಡೆ ಕವಿಯು
ಹಿಗ್ಗುವನು, ಎಲ್ಲರಂತೆಯೆ ಪೇಳಲಿಚ್ಚಿಪನು!
ಆದಿ ಕವಿಯನು ಮೀರ್ವ ಬಯಕೆ ಅವನಲ್ಲಿಲ್ಲ!
ತನ್ನ ಒಣ ಮಾತುಗಳು ಮನ್ನಣೆಯ ದೃಷ್ಟಿಯಲಿ
ಹೊರಳಿದರೆ, ತನ್ನ ಸೇವೆಯು ರಸಿಕ ವೃಂದವದು
ಗಣಿಸಿದರೆ, ತನ್ನ ಬಿರುನುಡಿ ಜನಕೆ ನೀತಿಯನು
ಕಲಿಸಿದರೆ, ಅದೆ ಜಗದ ಕವಿ ಪ್ರಯತ್ನದ ಫಲವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೩೧
Next post ನನ್ನ ಸಾಮರ್ಥ್ಯ

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…