Home / ಕವನ / ಕವಿತೆ / ಕವಿಯ ಬಯಕೆ

ಕವಿಯ ಬಯಕೆ

ಕವಿಯಾಗಿ ಸಲ್ಲಿಸುವ ಮಧುರಗಾನದ ಸೊಂಪು
ನುಣ್ದನಿಗಳಿಂಪಿನಿಂ ಬರೆದು ಪೊಗಳುವ ಮಾತು
ಸಾಲುಗಳ ಲೀಲೆಯಲಿ ಬರೆದ ಬಡಗಬ್ಬಿಗನ
ನಾಲ್ಪಂಕ್ತಿ ಕವನವದು ಏನು ಕಲ್ಪಿತ ವಾಣಿ!
ವೇದಗಳು ಶಾಸ್ತ್ರಗಳು ಕವಿಜಿಹ್ವೆ ಉಕ್ತಿಗಳು
ಯಾರ ಹಂಗನು ಕಾಯೆ ಹೇಳಿ ನಲಿವುವೊ ಏನೊ!
ತಮ್ಮ ಹೃದಯದ ಬಯಕೆ ಪದ್ಯ ಸಾಲ್ಗಳ ಮಾಲೆ.
ಕವಿಯು ಮರೆ ಮೋಸವನು ಎತ್ತಿ ತೋರುವ ಇಹದ
ಬಿಚ್ಚು ಮನಸಿನ ಬೇಹುಗಾರನೆಂದರೆ ಏನು?

ಅವನ ಬಯಕೆ ಅದೇನು?  ಜೀವನದ ಸಮರವನು
ಸಾಮರಸ ವಾದದಲಿ ಹಾಡಿತೋರಿಸಿ ನಲಿದು
ಜನದ ಪಾಡಿಗೆ ತಾನು ಪಾಲುಗಾರನು ಆಗಿ
ಕಳ್ಳ ಜೀವದ ತಂತ್ರಗಳ ಬಯಲಿಗೆಳೆ ತಂದು
ಜ್ಞಾನಿಗಳ ನಿಷ್ಪಕ್ಷ ತಲೆಗಳನು ತೂಗಿಸುತ
ತಾನು ಹಾಡಿದ ಗಾನ ಯಾರು ಪೊಗಳುವರೆಂದು
ತನ್ನ ವಾದಕೆ ಯಾರು ಮನ್ನಣೆಯ ಸಲಿಸುವರು
ಎಂದು ನೋಡುವ ತಾನು ಬರೆದ ಹಾಡ್ಗಳನೆಲ್ಲ
ಕ್ರಮವಾಂತು ಹೇಳಯವುದೆ ಅವನ ಜೀವದ ಬಯಕೆ!

ಮಧುರವಾದಾ ಕೀರ್ತಿ ಕವಿವರನೆ ಬಯಸುವನು
ತಾನು ಲೋಕಕೆ ಅಂದ ವಿಶ್ವರಹಸ್ಯದ ಸೊಲ್ಲು
ಪಾಪಿಯಾದವನೊಬ್ಬ ಹೇಳಿ ನಲಿದೊಡೆ ಕವಿಯು
ಹಿಗ್ಗುವನು, ಎಲ್ಲರಂತೆಯೆ ಪೇಳಲಿಚ್ಚಿಪನು!
ಆದಿ ಕವಿಯನು ಮೀರ್ವ ಬಯಕೆ ಅವನಲ್ಲಿಲ್ಲ!
ತನ್ನ ಒಣ ಮಾತುಗಳು ಮನ್ನಣೆಯ ದೃಷ್ಟಿಯಲಿ
ಹೊರಳಿದರೆ, ತನ್ನ ಸೇವೆಯು ರಸಿಕ ವೃಂದವದು
ಗಣಿಸಿದರೆ, ತನ್ನ ಬಿರುನುಡಿ ಜನಕೆ ನೀತಿಯನು
ಕಲಿಸಿದರೆ, ಅದೆ ಜಗದ ಕವಿ ಪ್ರಯತ್ನದ ಫಲವು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...