Home / ಕವನ / ಕವಿತೆ / ಕವಿಯ ಬಯಕೆ

ಕವಿಯ ಬಯಕೆ

ಕವಿಯಾಗಿ ಸಲ್ಲಿಸುವ ಮಧುರಗಾನದ ಸೊಂಪು
ನುಣ್ದನಿಗಳಿಂಪಿನಿಂ ಬರೆದು ಪೊಗಳುವ ಮಾತು
ಸಾಲುಗಳ ಲೀಲೆಯಲಿ ಬರೆದ ಬಡಗಬ್ಬಿಗನ
ನಾಲ್ಪಂಕ್ತಿ ಕವನವದು ಏನು ಕಲ್ಪಿತ ವಾಣಿ!
ವೇದಗಳು ಶಾಸ್ತ್ರಗಳು ಕವಿಜಿಹ್ವೆ ಉಕ್ತಿಗಳು
ಯಾರ ಹಂಗನು ಕಾಯೆ ಹೇಳಿ ನಲಿವುವೊ ಏನೊ!
ತಮ್ಮ ಹೃದಯದ ಬಯಕೆ ಪದ್ಯ ಸಾಲ್ಗಳ ಮಾಲೆ.
ಕವಿಯು ಮರೆ ಮೋಸವನು ಎತ್ತಿ ತೋರುವ ಇಹದ
ಬಿಚ್ಚು ಮನಸಿನ ಬೇಹುಗಾರನೆಂದರೆ ಏನು?

ಅವನ ಬಯಕೆ ಅದೇನು?  ಜೀವನದ ಸಮರವನು
ಸಾಮರಸ ವಾದದಲಿ ಹಾಡಿತೋರಿಸಿ ನಲಿದು
ಜನದ ಪಾಡಿಗೆ ತಾನು ಪಾಲುಗಾರನು ಆಗಿ
ಕಳ್ಳ ಜೀವದ ತಂತ್ರಗಳ ಬಯಲಿಗೆಳೆ ತಂದು
ಜ್ಞಾನಿಗಳ ನಿಷ್ಪಕ್ಷ ತಲೆಗಳನು ತೂಗಿಸುತ
ತಾನು ಹಾಡಿದ ಗಾನ ಯಾರು ಪೊಗಳುವರೆಂದು
ತನ್ನ ವಾದಕೆ ಯಾರು ಮನ್ನಣೆಯ ಸಲಿಸುವರು
ಎಂದು ನೋಡುವ ತಾನು ಬರೆದ ಹಾಡ್ಗಳನೆಲ್ಲ
ಕ್ರಮವಾಂತು ಹೇಳಯವುದೆ ಅವನ ಜೀವದ ಬಯಕೆ!

ಮಧುರವಾದಾ ಕೀರ್ತಿ ಕವಿವರನೆ ಬಯಸುವನು
ತಾನು ಲೋಕಕೆ ಅಂದ ವಿಶ್ವರಹಸ್ಯದ ಸೊಲ್ಲು
ಪಾಪಿಯಾದವನೊಬ್ಬ ಹೇಳಿ ನಲಿದೊಡೆ ಕವಿಯು
ಹಿಗ್ಗುವನು, ಎಲ್ಲರಂತೆಯೆ ಪೇಳಲಿಚ್ಚಿಪನು!
ಆದಿ ಕವಿಯನು ಮೀರ್ವ ಬಯಕೆ ಅವನಲ್ಲಿಲ್ಲ!
ತನ್ನ ಒಣ ಮಾತುಗಳು ಮನ್ನಣೆಯ ದೃಷ್ಟಿಯಲಿ
ಹೊರಳಿದರೆ, ತನ್ನ ಸೇವೆಯು ರಸಿಕ ವೃಂದವದು
ಗಣಿಸಿದರೆ, ತನ್ನ ಬಿರುನುಡಿ ಜನಕೆ ನೀತಿಯನು
ಕಲಿಸಿದರೆ, ಅದೆ ಜಗದ ಕವಿ ಪ್ರಯತ್ನದ ಫಲವು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...