Home / ಕವನ / ಕವಿತೆ / ಅವಳ ಬಾಳು!

ಅವಳ ಬಾಳು!

ಬಯಲಲ್ಲಿ ಬಿಸಿಲಲ್ಲಿ ಆ ಬಾ-ಲೆ!
ಹಸಿಹುಲ್ಲು ಕುಯ್ದಾಡುವುದು ಕೇಳ್ದೆ!!  ||ಪಲ್ಲ||

ಹಾಡೊಂದು ತನ್ನಪ್ಪ ಮರೆತಽದೊ,
ಅವಳಮ್ಮ ಹರೆಯದಲಗಲಿಽದೊ!
‘ಕಿವಿನಿಗುರಿ ಕಂಕೆರಳೀ ನಾ ಕೇಳಿ,
ಹೆಣ್ ಬಾಳ ಕಂಡು ಸೋಜಿಗ ತಾಳಿ!  ||ಬಯ||

ತಾನೊರ್ವ ಕೊಡಗೂಸು ಎಂದಽಳು,
ಪುಡಿಕಾಸು ಬಿಸುಡೋದ ತೆಗೆದಽಳು!
ಸೆರಗು ಮೂಲೆಯಲಿಟ್ಟು ಬಿಗಿದಾಗ,
ಕಣ್ಣೀರ ಬಿಸಿಯೆನ್ನ ತಾಗಿಽತೊ!  ||ಬಯ||

ತನ್ನಣ್ಣ ಚಿಕ್ದಾಗೆ ಸತ್ತೋಽದ,
ಮಾಂವಂದಿರಾರಿಲ್ಲ ಒಣಜೀವ!
ಸತಿಯಾಗೆ ಗತಿಯಿಲ್ಲ-ಈ ಹುಲ್ಲು,
ಹುಲ್ನೆಲ ಅವಳೊಂದು ಒಸಿಪಾಲು!  ||ಬಯ||

ಹುಲ್ಲಿರಿವ ಕತ್ತಿಯ ಕೊರಳಿಽಗೆ,
ತಾನಾಗೆ ಮಡುಗ್ವಳು ಸಾಯೋಗೆ;
ತನತನಗೆ ತಾಳುಽವ ಬುದ್ದಿಯೋ
ಕಾಲಮಾನವ ನೂಕೆ ಧೈರ್ಯಽವೊ!  ||ಬಯ||

ಹೂಜೀವ ಸೊಗಸೆಂದು ಹಾಡೋಳು,
ಬೆಂದ ಬಾಳಿನ ತಾಪ ನೆನೆಯೊಽಳು;
ಕಣ್ಣೀರುಮಯಲೋಕ-ಅನ್ನೋಽಳು,
ತನ್ನ ಬಾಳಿನ ಮರುಕ ಮರೆಯೋಳು!  ||ಬಯ||

ಬಯಲ ಬಾನ್ ಸುತ್ತೆಲ್ಲ ಮೌನಽವೊ,
ಈ ಹುಡುಗಿಯ ಹಾಡಿನ ಮೇಳಽವೊ;
ಮಲೆನಾಡ ವಂಶದ ಸವಿಜೀಽವ,
ತಬ್ಬಲಿಯಾದ ಈ ಹೂಬಾಽಳ!  ||ಬಯ||

ಕೆಂಬಕ್ಕಿ ಬಯಲಾಗೆ ಹಾರ್‍ವಾಗ
ಕೊರಳೆತ್ತಿ ಆ ಬಾಲೆ ದಿಟ್ಟಿಽಸಿ;
ತನ್ ತಾಯಿ ಸಾಕಿದ್ದ ಮರಿಕೋಳಿ,
ನೆನೆಯೋಳು ತನ್ನೊಂದು ಮರಿಬೆಽಕ್ಕ!  ||ಬಯ||

ಹಾಡಲ್ಲೆ ಹನಿಯಾಗಿ ಜಿನುಗೋಳು!
ತನ್ನೆಸರು ಭೂರಮೆ-ಅನ್ನೋಳು!
ಗತಿ ತೋರದಲ್ಲಿಯೆ ಒರಗೋಽಳು,
ಏನಿದೀ ತರವಿದೊ ಜನಬಾಽಳು!  ||ಬಯ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...