Home / ಕವನ / ಕವಿತೆ / ಕೃಷ್ಣಾಕುಮಾರಿಯ ಆತ್ಮಹತ್ಯೆ

ಕೃಷ್ಣಾಕುಮಾರಿಯ ಆತ್ಮಹತ್ಯೆ

(ಸೂ: ಜೋದಪುರ ಮತ್ತು ಜಯಪುರ ರಾಜವಂಶಗಳು ಕೃಷ್ಣಾಕುಮಾರಿಯ ಪಾಣಿಗ್ರಹಣ ನಿಮಿತ್ತ ಹೊಡೆದಾಡುವುದು.  ಅವಳ ತಂದೆ, ಭೀಸಿಂಹನ ದೆಸೆಯಿಂದ ಕೃಷ್ಣಾಕುಮಾರಿಯು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುವುದು)

ಪೇರಾನೆಗಳೆರಡರ ಕಡು ಕಲಹಕೆ ಮರಿಮಿಗವೆ?
ರಣಹದ್ದುಗಳೊಡೆದಾಟಕೆ ಶುಕಶಿಶುವಿನ ಬಲಿಯೆ?
ಎಳೆಕುವರಿಯು ಎಳೆ ಹರೆಯವು ತಂದೆ ತಾಯಿಗಳವಳ
ನಡುಕೆರೆಯಿಂ ಬರಲಾರದೆ ಬಿಟ್ಟಂತೆಯೆ:- ಅಲ್ಲಾ?
ಸುಖಸೋಗಿನಯೆಡೆಗಿಂತೀ ಬಾಧಕವದು ಆಗೆ
ಚೆಲು ಬಾನನು ಕಾರ್ಮೋಡವದಾವರಿಸಿದ ತೆರನೆ.  ||೧||

ಸಾರಸ್ವತ ಸಮತೆಯು ಈ ಜನತೆಯು ಎಡೆಯೆಲ್ಲಿ?
ಸಹಕಾರದ ಒಲದ್ಮೊಲೆಯು ಕಟುಹೃದಯದೊಳೆಲ್ಲಿ?
ಶ್ರುತಿಶಾಸ್ತ್ರವು ಆಗಮಗಳು ನಡೆವುದೆ ಇದರೆಡೆಗೆ-
ಅಕೊ ನೋಡೆ, ಘಾತುಕತನ ಬೀಡೊಳು ಸುಖವುಂಟೆ?
ವಿಧಿಪೊರೆದೊಡೆ ಬಾಳ್ಸವಿಯದು! ಬಾನ್ಮಂಡಲದಲ್ಲಿ
ಹಾರಾಡುವ ಖಗರಾಶಿಗೆ ಕಂಠಕತನವೆಲ್ಲಿ?  ||೨||

‘ಎಲೆ ರಮಣಿಯೆ, ಏನಿಂತಿದು? ಹೇ ಕುವರಿಯೆ ಕೇಳು-
ವಿಷಪಾನವೆ ಈ ಜನ್ಮಕೆ! ಇಂತಿರ್ಪುದೆ ಬಾಳೂ!!
ನೆಲೆಯಿಲ್ಲವೆ ನಿಯಮಿಲ್ಲವೆ; ನೀತಿಯು ಮೋಹಾಂಧ
ಯಶಃಕಂಠಕರಾಗಿ ಎಸಗಿದ ಕಲಹವೆನಿತೊಂದಂದ!
ಹಾಕುವರಿಯೆ!  ಕರುಳೆನ್ನಯ ಪಿತನಿನ್ನಯ ಎಂತು,
ತಡೆವುದೊ ಇದ!  ಎಂತಿರ್ಪುದೊ ನಿಯತಿಯ ಈ  ತಂತು  ||೩||

ಇಂತೆನ್ನಲು ಥಟ್ಟನೆಮನ ನೆಟ್ಟನೆ ತನುವಿರಿಸಿ
ಅರಳಿದ ನಸುನಗೆಯನು ಬಾಲೆಯು ಅಲ್ಲಿ ಸಲಿಸಿ.
ಇಬ್ಬನಿಯಿಂ ಸಮವರಳುತ ನಸುಚೆಲ್ವನು ಬೀರಿ
ತೋಷವನೆಮಗೀವಂತೆಯೆ ಕೃಷ್ಣಳ ಮುಖ ಬೀರಿ
ಬೇಸರದಾ ಕಡು ಬೇಗೆಯೊಳಿರಿತಾ ಸ್ತ್ರೀವೃಂದ-
ವನು ತಣಿಸುತ ರಾಜಸ್ಥಾನಕೆ ಮುದತೋರಿದಳಂದ!  ||೪||

‘ಹೇ ತಾಯೇ, ಎನ್ಜನನಿಯೆ ಭಾಗ್ಯದ ವರಮಾತೆ,
ಶೋಕಿಪೆಯ?  ಇದರೊಳು ಏನೀಪರಿಯಾ ಕೊರತೆ?
ಮೋಹಾಂಧದ ಬೀಡೊಳು ಚಲಿಸಲು ಬಿಡುವೆಲ್ಲಿ?
ಮಾತ್ಸರ್ಯದ ಗನಿಯಿಂ ಪೊರಮಡುವಾ ತೆರವೆಲ್ಲಿ
ಅನಿವಾರ್ಯವಾದೀ ಪರಿ ಕಾಟವ ಬಿಡಲೆಸಗೆ-
ವಿಷಸೇವಿಪೆ-ಚಿರಶಾಂತಿಯ ಲೋಕದಿ ನಾನೊರಗೆ.  ||೫||

‘ವಂದಿಪೆ ನಾಂ ಈಶನಿಗೂ ಮಾತಾಪಿತರರಿಗೂ!
ವಂದಿಪೆನಿನ್ನೊಮ್ಮೆಯು ನಾ ಸಖಲಾಪ್ತ ಜನಕೂ!!
ಪೋಷಿಸುತಾ ಪಾಲಿಸುತಾ ತಿನ್ನಿಸುತಾ ಎನ್ನ,
ನೋಡಿದಕೂ ಆದರ್ಶದ ಪ್ರೀತಿಯು ಬಿಡದನ್ನ.
ಇಂದಿನ ದಿನ ಈ ನಿಮಿಷಕೆ ತನುವಿದನೆನಗಿತ್ತ
ಹಿರಿಯರನಾ ವಂದಿಪೆನೋ ಇನ್ ತೆರಳುವೆನತ್ತ!!  ||೬||

‘ಸೇವಿಪೆನೀ ಪಾನಕವನು ದೇಶದ ಸುಖಕಾಗಿ-
ಸೇವಿಪೆನೋ ಎನ್ನಡೆದಾ ಜನಕನ ಸುಖಕಾಗಿ-
ಸೇವಿಪೆನಾ ಅಳಿಮನದಾ ದುರ್ಜನರೆದೆಗಾಗಿ-
ಸೇವಿಪೆನೆಂದಳು ಶಾಂತಿಯ ತಾಣದ ವಶಕಾಗಿ-
ಎನ್ನುತ ತಾಯ್ ತಾಂದೆಗೆ ಪ್ರದಕ್ಷಿಣೆಯನು ಮಾಡಿ
ವಂದಿಸಿ ಬಳಿಸೇರಿದ ಜನಸ್ತೋಮಕೆ ಸುತೆನೋಡಿ!  ||೭||

ಕುಡಿದಳು ಹಾ! ಸಾಯ್ವಳೆ ವಿಷ ಸೇವಿಸೆ ಆ ಬಾಲೆ?
ಭೋದಿಪ ತನ್‌ತಾಯಿಗೆ ಹಿತವಾಕ್ಯವನಂತುಸುರೆ!
ಋಣಿಯಾದೆನು ಹೇ ಪಿತನೇ, ಸಾಕಿದೆ ನೀ ವರೆಗೆ
ಮೀಸಲು ಈ ಮರಣದ ಪರಿ! ತಿಳಿದೂ ಹಾ ಕೊರಗೆ?
ಈ ವಿಶ್ವದ ಯಾವೆಡೆಯೊ ನಮ್ಮೆಲ್ಲರ ಸ್ಥಾನ
ನಾವ್ ಕೊರಗುತ ಮತಿಹೀನರಂತಾಗ್ವುದೆ ದುಮ್ಮಾನ!  ||೮||

ಎನ್ನಲು, ಅದೊ ಬಂದಿತು ಗರಳವ ತುಂಬಿಸಿ ಕುಡಿಯೆ,
ಕೊಟ್ಟರು ನೋಡಲ್ಲಿಯೆ ಕೆಡಹಲು ತರುಣಿಯ-ವಿಧಿಯೆ!
ಮುಖಕಾಂತಿಯು ತನುಶೋಭೆಯು ಹೃತ್ಪಠದಾ ಸ್ಥೈರ್ಯ
ಉತ್ಸಾಹವು-ಬೆಡಗೆನಿಸಿತು ಜನವೃಂದಕೆ ಸುತೆಯಾ!
ಕುಡಿದಳು ನೋಡೊಮ್ಮೆಗೆ ಜುಮ್ಮೆನ್ನಿಸುತ ಕ್ಷಣದಿ
ಸಖಲರ ಹಾಹಾಕಾರವು ಕೇಳಿಸಿದವು ನಿಜದಿ  ||೯||

ತರುಲತೆಗಳು ಅಲ್ಲಾಡಿತೆ ಉದ್ಯಾನದಿ ಅಂದು?
ಖಗಮಿಗಗಳೂ ಕುಣಿದಾಡಿತೆ ಸಂತಸದಲಿ ತಿಂದು?
ಜ್ವಲಿಸಿತೆ ರವಿ ಕಿರಣವು ಸಹ-ಕಳೆಗೆಟ್ಟಾ ದಿನವು;
ಪಡುವಣ ತನಿಮಾರುತವದು ಸೋಕಿತೆ ನೋಡಿದುವೂ?
ದಿವಸದ ಗತಿಗಳನರಿಯದೆ ಸೋಜಿಗವದು ಎಲ್ಲ;
ದುಃಖಾಂಬುಧಿಯೊಳು ಈಜುತ ಕಳೆದರು ದಿನವೆಲ್ಲಾ!  ||೧೦||

ಉತ್ಪಾತವಿದಿಂತಾದರು ಉತ್ತೇಜಿತ ಕಾರ್ಯ
ಕೊನೆಗೊಂಡಿತೆ?  ಕೃಷ್ಣಳು ಅದೊ-ನೆಟ್ಟನೆ ಇರೆ-ಶೌರ್ಯ!
ಕ್ಷುದ್ರಾತ್ಮರಲ್ಲಿಂದಲೆ ಅಗಲರು ನೋಡಂತೂ,
ಕುಸುಂಬ’ದಾ ಮೂಲಿಕೆರಸ ಸೇವಿಸೆ ಕೊಡಲನಿತು!
ಒಂದನೆಯೇ ಎರಡನೆಯೇ ಮಗುದೊಮ್ಮೆಗೆ ಎಂದೇ
ನೋಡಲು ಕಡು ಸಾಹಸದಿ ಮಾಡಿತ್ತರು ವಧೆಗೆಂದೆ.  ||೧೧||

ಸೆರಗೊಡ್ಡುತ ಕಾಲೂರುತ ನೆಲಕುರುಳುತ ತಾಯಿ,
ಬೇಡಿದರೂ ಬೇಡೆಂದರು ಕಡೆಗಾಲವು ಸ್ಥಾಯಿ!
ಕಲ್ಮನವದು ಕರಗುವುದೆ?  ಕುಮಾರಿಯು ಮನದಿ
ದೆಸೆಹತ್ತಕೆ, ದೇವತೆ, ಜನಸ್ತೋಮಕೆ ಒಂದಾಗಿ
ವಂದಿಸುತಾ, ಮಾತೆಯ ಆರೋದನವ ತಣಿಸಿ
ವಿನಯದಿ ತಲೆಬಾಗಿಸಿ ಕುಡಿದಳೂ ವಿಷವನು ಮುದದಿ!  ||೧೨||

ಕಣ್ಮುಚ್ಚಿತು, ಅಸುರರ ನಡುವಿರ್ದೀ ಸುಕುಮಾರಿ
ಅಗೊ ಹೋಯಿತು!  ನಾಡಗಲುತ ಸ್ತ್ರೀಮಣಿ ಎಳನಾರಿ!!
ಘೋರಾಂಧತೆ ರಾಜಸ್ಥಾನಕೆ!-ಕವಿಯಿತು ನಿಸ್ತೇಜ,
ರತ್ನವದಾ ಮಣ್ಣೊಕ್ಕಿತು-ನೆಲೆಸಲು ಸರಿ ಸಹಜ!
ಕಾಮಾದಿಗಳೀಜಗವನು ಸುಡುವುದು ನೋಡಿನಿತು,
ಏನ್ ಪೊಂದಿದರೀ ಕಾರ್ಯದೆ ಮೇಲಾಡುತಲಿಂತು?  ||೧೩||

ತಾ ಸಾಯೇ ಜನಕೋಟಿಗೆ ಚಿರಸುಖವಿದೆಯೆನಿಸಿ
ಆನಂದದಿ ಪ್ರಫುಲ್ಲಿತ ವದನದಿ ವಿಷಹೀರಿ;
ನೆನೆದಳು ಸುತೆಕೃಷ್ಣಳು ಆ ನಾರೀ ಮಣಿಗಳನು,
ನೆನೆದಳು ರಾಜಸ್ಥಾನಕೆ ಯಶಃಕಾಯರಾದರನೂ;
ಪದ್ಮಿನಿಯೂ ಸಂಜೋಗಿನಿ ಪನ್ನೆಯು ಮೊದಲಾದ
ಕರ್ಮದೇವಿ ತ್ಯಾಗಿ ಜನನಿಗಳಾನಂದದಿ ನೋಡ.  ||೧೪||

ಕಳೆಯಿತು ದಿನ ಕಳೆದಂತೆಯೆ ನೆನಪೊಂದನು ಉಳಿಸಿ
ಆ ಬಾಲೆಯ ದಿವ್ಯಾತ್ಮ ಸ್ವರ್ಗಲೋಕದಲುಳಿಸಿ,
ಜೀವವನಾ ತ್ಯಾಗದ ಆ ಸ್ಫಟಿಕದ ಎಡೆ ತೋರಿ,
ಸುಖಸಂಪದ ಇಹಜೀವನ ಬಯಕೆಯ ನೆಲೆ ಮೀರಿ;
ನಡೆದಳು ಆ ಸ್ಥಾನದೆ ಬಹು ಧವಳ ಪ್ರಭೆಯಾಗಿ,
ಮಿನುಗುತ ಪ್ರಕಾಶಿಸಿ ಮನಮೋಹಿಸಿ ಮಂಗಳಾಂಗಿ.  ||೧೫||
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...