ಓಂ

ವೇದಭೂಮಿಯೊಳಿಹ ಕಡುಸಾಹಸದ ನೆಲೆಗೆ ಮಿ
ತಿಯಿಲ್ಲ, ಕೊನೆಯಿಲ್ಲ;  ಪುರುಷ ಸ್ತ್ರೀಯರುವೆಂದು
ನೀತಿಯಲಿ ಧೈರ್ಯದಲಿ ಛಲದಲ್ಲಿ ಧರ್ಮ ಭೂ
ಮಿದುರೊಳೀ ಭೇದವಿಹುದಿಲ್ಲ;  ವಿಶ್ವವಿದನಂ
ತ; ಅನಾದಿಕಾಲದಿಂ ಈ ಕ್ಷೇತ್ರ ಶೌರ್ಯ ಸ-
ದನವದು; ಕಡು ಹೇಡಿಗಳಾ ಬೀಡು ತಾನಲ್ಲ!

ಮೊರೆಯಿಟ್ಟು ಮತಿಗೆಟ್ಟು ಛಲಸಿದ್ಧಿ ದುರ್ಬುದ್ಧಿ
ಯಿಂದ ಈ ಜಗರಂಗದೆಡೆ ಪರದೆಯೊಳು ನಿಂತು
ಶತವರ್ಷ ದುರ್ನಟನಾ ದೃಶ್ಯವನು ತೋರಿದೊ-
ಡಿನ್ನೆಲ್ಲಿ ಶೋಭನವು?  ಭರತ ಶಾಸ್ತ್ರವು ಅಖಿಲ
ಶಸ್ತ್ರ ಸಾಮ್ರಾಜ್ಯಕನ್ವಯಿಸಿ ಕ್ಷಾತ್ರದೀವಿ
ಗೆಯನ್ನು ಕಡೆತನಕ ಬೆಳಗಿಪುದು!  ಕಾಣಿಪುದು!!

ವೇದಗಳೂ ಹಾಡುವುವು ತೃಣಕಾಷ್ಠದಿಹ ಪೌ-
ರುಷವ; ಶ್ರುತಿಗಳಿಹ ಝೇಂಕಾರವಾಚಾರ
ಸಂಪನ್ನವದು; ಸಹಸ್ರಾರು ಶ್ಲೋಕಗಳು ಘರ್ಜಿ
ಪುವು ಹಾಡುಗಳ ಶೂರತನ ಧೀರತನ!  ಗಂಡು
ಸರ ಹೆಂಗುಸರ ಕಂಠಗಳೂ ಶೋಭನವು ಸ್ತುತ್ಯ
ಗಾನಗಳ ಹಾರದಲಿ; ಕಾಣಿಕೆಯ ದಾರದಲಿ.

ಒಮ್ಮರದೊಳಸುರಾಗಿ ಒಂದರಲಿ ಕೆಂಪಾಗಿ
ಒಂದರಲಿ ಬಿಳಿದಾಗಿ ಪುಷ್ಪಗಳ ನಸುನಗೆಯು.
ಒಂದರಸಿ ಕರ್ಮುಡಿಯೊಳಿನ್ನೊಂದು ತಿಪ್ಪೆಯಲಿ
ಕೂಡಿಹುದು; ಜನವೊಂದೆ, ಭಾಳದಕ್ಕರ ರೀತಿ
ಒರಟಾಗಿ ನಯವಾಗಿ ಕೆತ್ತಿಹುದು ಡೊಂಕಾಗಿ.
ಅಂತಂತೆ ಕುಣಿಯಿಪುವು ಬಾಳುವೆಯಲೀ ಜನವ-

ಇತಿಹಾಸವೆಂಬೊಂದು ಪುಣ್ಯಯಾತ್ರೆಯ ಹಾದಿ;
ವೇದಭೂಮಿಯೊಳಿಹ ವಿಶಾಲತೆಯನು ನೋಡಿ ನ
ಡೆವ ಮಾರ್ಗ ತಾನಲ್ಲ, ಮಾನಸಿಕ ನಡೆಯುವಿಕೆ.
ನೋಡುವಿಕೆ, ವೈಭವ ವೈಚಿತ್ರ್‍ಯಗಳ ತಿಳಿಯುವಿಕೆ;
ಗತಕಾಲ ಜೀವಿತದ ಛಾಯೆಯನುಭವ ರೂಪ!-
ಸಮರಗಳ ಸಾಹಸದ ರಾಜ್ಯಗಳ ವ್ಯಾಜ್ಯಗಳ!!

ಸಿರಿಯಡುವೆ ಧನಿಗಿಹದಿ ಕಲ್ಲೆಡೆಯೊಳಿಹ ಹೊನ್ನು;
ಕಾರ್ಯಸಫಲತೆಯದುವೆ ಸರ್ವವನು ತೊರೆದ ಹಿ-
ತೈಷಿಯ ಧನವು;  ಧಾರಿಣಿಯ ಭಿಕ್ಷುಕಗೆ ದಿನಕೆ
ಪೈಯೊಂದೆ ಸಂಪತ್ತು;  ದಿನದಿನವು ಹೊರೆದುಂಬ
ಜನಕಿಹದೆ ಹಿಡಿಯನ್ನ ಸಿರಿಯಂತೆ-ಕವಿಗಹುದ
ಪರಂಜಿಯದು ಕಲ್ಲೆದೆಯ ತೊಯಿಪ ವಿಚಾರಗಳು.

ಮಾಮರವನೇರೇರಿ ಮಧುಮಾವನೊಂದು ಕೆಳ
ತಪ್ಪಂತೆ;  ಹಿಮಗಿರಿಯೊಳೆಲ್ಲೆಡೆಯು ನೋಡ್ಯೊಂದು
ವರ ಮೂಲಿಕೆಯನೆಳೆತರುವಂತೆ;  ಇತಿಹಾಸಗ
ಳಗಾಧ ಪಂಕ್ತಿಗಳೆಡೆಯಿಂದ ಸುಭೋಧನೆಯ
ಕಥೆಯೊಂದನೆಳೆತಂದು ಬಣ್ಣವನು ಹರಿಯಿಸಿದೆ.
ಶಬ್ಧಗಳ ಚೆಲ್ಲಾಡಿ ರಸವನೊಸರಿಸಿದೆನಿದಕೆ!

ಕತ್ತಲೆಯ ಕಾಲದಲಿ ಜನರ ಕೆಯ್‌ಗೈಮೆಗಳು
ಕಟ್ಟುಗ್ರದಿಂದೆಸೆದು ಕಟ್ಟಾಳ ಬಾಳಲ್ಲವೊ?
ಇಂದಿಂದಿಗಾರಾರೊ ಎಂತೆಂತೊ ತಿಳುಹುತಾ
ಊಹನೆಯ ಸಾಧನೆಯಿಂದೆಮ್ಮಲ್ಲೆ ಕತ್ತಲೆಯು!
ನೋಡುವೆವು ಬೆಳಕೆಂದು ದಿಟ್ಟಿಯದೊಯ್ಯುವುದು
ಶತಮಾನ ಕೆಲವಕ್ಕೆ!  ಪಿಂಪ್ರಭೆಯದೆಂತಿರ್ದಿತೊ?

ರಾಜ್ಯವನು ಕಟ್ಟಿದರು ನಿಮಿಷದಲಿ ಚೂರಾಗಿ
ಕಾಡಿದರು ಬೇಡಿದರು;  ಪೌರುಷದಿ ಮಡಿದನಿತು
ಮತಗಳನು ಜನಪ್ರೀತಿ ಜನಸೇವೆಯಿಂದಲು
ಹೊರಡಿಸುತ, ಪಲಕಾಲಕಂತದುವೆ ಬೀಳುತಾ
ಪರದೇಶದಿಂ ಸಹಸ್ರಸಾರಿ ಸಾಲಾಗಿ ಜನ
ಕೂಡಿದರು ಬೀಡಿದಕೆ;  ರುದ್ರಭೂಬಯಲಾಗಿ!!

ಹಿಂದಿನದು ಇಂದಕ್ಕೆ, ಇಂದಿನದು ಮುಂದಕ್ಕೆ
ಅಂದಿನದು ವಿಚಿತ್ರ ಇಂದಿನದು ಕುತಂತ್ರ-
ಮಾನವನೆ ಬಲುಮೋಹಿ ಹಿಂದಿನಿಂದಿನದೆಂದು!
ಹೈಂದವ ಮಹಸಾಮ್ರಾಜ್ಯ ಕೀರ್ತಿತೊಟ್ಟಿಲೊಳು
ಪೂರ್ವಾಪರಕತ್ತಿತ್ತ ವಿಲಾಸದ ತೂಗಿನಲಿ
ಮೈಮರೆದು ಕಳೆಗುಂದಿ ಮೊನ್ನೆದಂ ನೆನೆಸುತಿದೆ!

ಆರ್ಯ ನೆತ್ತರ ದಮನಿ ಪಾವನವು ಸ್ಫೂರ್ತಿಮಯ!
ಹೊಸವರ್ಷ ಮಳೆಜೋರು, ಮಣ್ಣುಕ್ಕಿ ನೆರೆಯಿಂದ
ವೆಂಬಂತೆ ಹೊಸಮಕುಟ ಹೊಸರೀತಿ ಶಾಸನವು
ವಿಧವಿಧದೆ ವಾಣಿಜ್ಯ ಮಾರುತದ ತೆರೆಯಂತೆ
ಏಳುವುದು ಬೀಳುವುದು;  ಪೊಂದುತಲಿ ಕಷ್ಟವನು
ದುಃಖವನು, ಜನಗಣವು ದೇಶವೇ ಕೋಟ್ಯಾದಿ!

ಹೆಣ್ಣೊಂದು ಹೊನ್ನೊಂದು ಮಣ್ಣೊಂದು ಎಂಬಂತೆ
ಮಾನವನ ಹೃದಯ ಮೂಲವಂ ಕೊರೆಯುವುದು
ಋಷಿವರ್ಯ ಪಂಡಿತರು ಜ್ಞಾನಿಗಳುಮೆಲ್ಲ ಸಾ
ಲಾಗಿ ಎದೆದುಂಬಿ ಸಂತೈಸಿಹರತ್ಯಾಶೆ ಮೂಲ
ವಂ ಕಿತ್ತೊಗೆಯಲು!  ಮಳೆಯನಿಳೆಯಿಂ ತಡೆದು ನಿಲಿ-
ಸಲಂಭುಧಿಯ ಜಲಿವಾರಿಸೆ ತೊಡಗಿ ಸಾಧಿಪರೆ?

ಜಡಿಮಳೆಯು ಜರಜರನೆ ದಿನಹಲವು ಹೊಡೆಯಲಿ
ಒಣಗಿಸದೆ ತಂಭೂಮಿಯನು ದಿನಕೆ ರವಿಬಂದು?
ಚೆಂಜೇನ ಕೂಡಿಸಲಿ ತಾಸುಮಾಸಗಳೆಲ್ಲ
ನಿಮಿಷೊಂದೆ ನಿರ್ಘೃಣನ ಕೈಹಿಡಿತವಾಗದೇ?
ಕ್ರಿಮಿಯೆಂಬ ದಯವುಂಟೆ?  ಜನವೆಂಬ ಮತಿಯುಂಟೆ?
ಧರ್ಮದಾಸ್ಥಾನಕೆ ಬಹುಮಾನದೊಂದಿರವುಂಟೆ?

ಆರ್ಯ ಮೂರ್ತಿಗಳದೃಶ್ಯ ಜಗವೀರ ಸಿಕಂದ
ರನಾಗಮನ; ಸನಾತನ ಧರ್ಮದಲಶ್ರದ್ಧೆ ಆ
ವಿಶ್ವಗುರು ಗೌತಮನ ಮೂರ್ತಿಯೂ, ಅನಾಯಕ
ತೆ ಬರೂರಿ ರಾಜ್ಯದಲ್ಲೋಲಕತೆ ಅಡಗಿಸಿದ
ಪಾವನ ವರಮೂರ್ತಿ ಪ್ರಿಯದರ್ಶಿ; ಗಣ್ಯ ಮೂ
ರ್ತಿಗಳಂತು ಭಾರತವು ಸ್ತುತ್ಯವಿಂದಂತೂ.

ಪುಷ್ಯಮಿತ್ರ ಗುಪ್ತಾದಿ ಮಿತ್ರರೂ, ಹರ್ಷಕ್ಬ
ರಾದಿ ಸುಚರಿತ್ರರೂ, ಪ್ರಥಪ ಶಿವಜಿ ಪ್ರ
ತಾಪರೂ, ಮೇಲ್ಮೇಲೆ ನೆನಹು ಭಿತ್ತಿಯನುತ
ಟ್ಟುವರು, ಭಾರತವು ಧನ್ಯಸಲೆ!  ಅನ್ನೆಯದ ಪ್ರ
ತಿರೂಪ ನೀಲಾಂಬುಧಿ ಮಧ್ಯವಿಹ ನಕ್ರತಿಮಿಂ
ಗಿಲದಂತೆ ಅಲ್ಲಲ್ಲಿ ಶೋಭನೆಯ ತಡೆಯದೆ?

ಯಾರಾರು ಎಂತೆಂತು ಬಾಳಿಲ್ಲ ಬದುಕಿಲ್ಲ?
ಕವಿತಾನು ಹಾಡಾಡಿ ಕೊಚ್ಚೆನೀರನು ಬೊಗಸೆ
ಯೊಳುವಿಟ್ಟು ತೀರ್ಥವಿದಪ್ಪಯ್ಯ ಎಂದಂದು ನೀ
ಡಿತಾ ಮರಳುಗೊಳಿಸುವುದೆ?  ನಾತಿಂದ ಬೇವಿನೆ
ಲೆಯಂ ತುತಿಸಿ ಪೊಗಳೀದರೇಂ ಗ್ರಹಿಪರೆಂದು ನಾ
ನೋಡುವೆನೆ?  ಬಾಯ್ದಣಿಯ ಇನಿದೆಂದು ಪಾಡುವೆನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೩೪
Next post ಚಂದ್ರನ ವಿವರಣೆ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

cheap jordans|wholesale air max|wholesale jordans|wholesale jewelry|wholesale jerseys