Home / ಕವನ / ಕವಿತೆ / ಕ್ಷೀರ ಸಾಗರ

ಕ್ಷೀರ ಸಾಗರ

ನೊರೆನೊರೆಯಾದ ಮೋಡಗಳ ಕ್ಷೀರಸಾಗರ
ಥೇಟ್ ಕ್ಯಾಲಂಡರಿನ ಚಿತ್ರದಂತೆಯೇ
ದೇವದಾನವರ ಕಡಲಮಂಥನ ಪನ್ನಗಶಯನ ವಿಲಾಸಿ ವಿಷ್ಣು
ಕಾಲೊತ್ತುವ ಆಭರಣ ಪ್ರಿಯೆ ಲಕ್ಷ್ಮಿ-
ನೋಡಲು ಸುಸ್ತಾಗಿ ಕಲಾಕಾರನನು ಬೈಯ್ದು ಹಿಂದೊರಗಿ ನಿದ್ರಾವಶ.
ವಿಷವುಂಡ ನೀಲಕಂಠನ ತೇಲುಗಣ್ಣು ಮೆಳ್ಳಗಣ್ಣು
ಜೀವನೆತ್ತಿಯ ಮೇಲೆ ಅದರೊಳಗೆ
ಗಂಗೆ ನೋರೂಡಿಸಿ ಬದುಕಿಸಿ ಮುಗುಳ್ನಗೆ-
ಸಪ್ತಹೆಡೆಯ ವಿಷಾನಿಲ ಸುತ್ತೆಲ್ಲ
ಹದಿನಾಲ್ಕು ಕಣ್ಣುಗಳಿಗೆ ರತ್ನ ಪಚ್ಚೆಯ ಸಿಂಗಾರ
ನೂರಿಪ್ಪತ್ತು ಹರಳಿನ ವಜ್ರದೆಳೆ
ಮಣಿಮಾಣಿಕ್ಯದ ಭಾರವಾದ ಎದೆ, ಸೊಕ್ಕಿದ ಮೈ
ಲಕ್ಷ್ಮಿಯ ಮೃದು ಸ್ಪರ್ಶ ವಿಷ್ಣುವಿನ ಐಶಾರಾಮಿ ನಗೆ-
ಮಗಳನ್ನೇ ಕೆಡವಿದ ಬ್ರಹ್ಮ ಪರಾರಿ
ಗುಡಿಗುಂಡಾರ ಮಠಗಳಿಲ್ಲದೆ ಎಲ್ಲಿದ್ದಾನೋ
ಆದರೂ ಇದು ಬ್ರಹ್ಮನ ಸೃಷ್ಟಿ;
ಸರಸ್ವತಿ ಗೋಜಲಿಗೆ ಬಿದ್ದು ವೀಣೆ ಹಿಡಿದು
ತಂತಿ ಮೀಟಿದರೆ ಅಪಸ್ವರ ಮತ್ತೆ ಮತ್ತೆ
ತಂತಿ ಬಿಗಿದು ಲಯಹೊಂದಿಸಲು ಪುಸ್ತಕ ತಡಕಾಡಿ
ವೀಣಾ ಪಾಣಿಗೆ ಕಣ್ಣುತೇವ
ಹೊಯ್ದಾಟ, ಅಲುಗಾಟ, ಕುಲಕಾಟ-
ಅರೆನಿದ್ರೆ-
ಮತ್ತೆ ಕಿಡಕಿ, ಮತ್ತದೇ ಕ್ಷೀರಸಾಗರ
ನೊರೆ ನೊರೆ
ಅರೆರೆ! ವೃಷಭಾವತಿಯಂತಿದೆಯಲ್ಲ, ಕಸಕಡ್ಡಿ ಕಚಡ-
ಕಣ್ಣು ಒರೆಸಿಕೊಂಡಷ್ಟೂ ಕಂಡುಬರುವ
ಫ್ಯಾಕ್ಟರಿಯ ಕೊಳೆಯ ನೊರೆ ಥೂ, ಥೂ
ದಟ್ಟ ಹೊಗೆಯ ಸದ್ದಿಲ್ಲದ ಕಡಲಿಗೆ ರಾಜಕೀಯ ಕಡಗೋಲು
ಒಂದೆಡೆ ರಾಜಕೀಯ ಮತ್ತೊಂದೆಡೆ ನಕ್ಸಲ್ ಭಯೋತ್ಪಾದಕರು
ಮಂಥಿಸಿದಷ್ಟು ಮಂಥಿಸಿದಷ್ಟು ಕೊಳಕೆದ್ದು ಗಬ್ಬುವಾಸನೆ.
ರಕ್ತ ಸಾವು ನೋವುಗಳ ಚೀತ್ಕಾರ
ಹೊಯ್ದಾಟ, ಅಲುಗಾಟ, ಕುಲುಕಾಟ-
ಮತ್ತದೇ ಕಿಡಕಿ ಮತ್ತದೇ ನೊರೆಯ ಕ್ಷೀರಸಾಗರ
ಮೇಲೆ ಇಡಿಯಾಗಿ ಫಳಫಳಿಸುವ ಸೂರ್ಯ.

ಕ್ಯಾಲೆಂಡರಿನ ಆಟೋಟಕೆ ಕಡಿವಾಣ ಹಾಕಿ
ಹೈವಾನಾದದ್ದು; ದುರುಳರಿಗೆ ಮಟ್ಟಹಾಕಲು.
ಎಲ್ಲೆಡೆ ಬಿಸಿವಾತಾವರಣ ಬಿಸಿಯುಸಿರೇರಿಸಿ
ಎದೆಗೊದ್ದು ಕೆಡುವುತ್ತಿರುವುದು
ಮಾಯಾಲೋಕದ ಮಂಥನ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...