Home / ಕವನ / ಕವಿತೆ / ಬೇಕಾಗಿತ್ತೆ ಈ ದೂರದ ಹಾದಿ

ಬೇಕಾಗಿತ್ತೆ ಈ ದೂರದ ಹಾದಿ

ಬೆಲ್ಟ್ ಕಟ್ಟಿಕೊಂಡೇ ಗಡದ್ದಾಗಿ ಕುಳಿತದ್ದು
ಹೀಗೇ ಮಂಪರಕ್ಕೆ ಸ್ವಲ್ಪ ಒರಗಿರಬೇಕಷ್ಟೆ
ಎಲ್ಲೋ ಬುಲ್‌ಡೋಜರ್‌ದ ಸದ್ದು
ಜಾಲಾಡಿಸಿದ ಅನುಭವ
ಬಿಟ್ಟೂಬಿಡದೆ ಏನೇನೋ ಪೈಲಟ್‌ನ ಮಾತುಗಳು
ಗಗನಸಖಿಯ ಒಂದೇ ಸಮನದ ಉಲಿತ
“ನಿಮ್ಮ ಖುರ್ಚಿಯ ಪಟ್ಟಿ ಕಟ್ಟಿಕೊಳ್ಳಿ”

ಕಣ್ಣು ಬಿಟ್ಟದ್ದಷ್ಟೇ, ಉಸಿರು ನೆತ್ತಿಗೆ ಏರಿ
ಸಾವಿನಂಚಿಗೆ ಕರೆಯುವ ಎದೆ ಬಡಿತ
ಕಿಡಕಿಯಾಚೆ ಆನೆ ಐರಾವತ ಕರಿಮೋಡಗಳ
ಘರ್ಜನೆ ದಟೈಸಿದ ಕಪ್ಪು ಛಾಯೆ
ಉಸಿರುಗಟ್ಟಿ ಕಿತ್ತೋಡುವ
ನೊರೆನೊರೆಯ ಬಿಳಿಮೋಡ ಮೊಲಗಳು
ಬಿಟ್ಟೂಬಿಡದೆ ಎಗ್ಗರಿಸಿ
ಹೆದರಿಸುವ ಡೈನಾಸೋರುಗಳು

ಸಾವಿರಾರು ಮೈಲು ಹಿಂದೆ ಬಿಟ್ಟು ಬಂದ
ಮಕ್ಕಳ ಮುಗ್ಧ ಮುಖ; ಮುಂದೆ
ಸಾವಿರಾರು ಮೈಲಿನಲಿ ಕಾತರಿಸಿ ಕಾಯುತಿರುವ
ಜೀವದ ಜೀವ
ಒಬ್ಬೊಂಟಿ ಪಯಣಿಗಳು ಕಣ್ತುಂಬ ನೀರು.

ಮತ್ತೆ ಮತ್ತೆ ಅದೇ ಉಲಿತ
(ಏಳದಿರಿ ಸೀಟುಬಿಟ್ಟು, ನಡೆದಾಡದಿರಿ,
ಹೊರಗಡೆ ಭಾರಿ ಮೋಡಗಳು, ಗುಡುಗುಮಿಂಚು
ಬಿಗಿಯಾಗಿರಲಿ ಸೊಂಟಪಟ್ಟಿ ಎದೆಗುಂದದಿರಿ)

ಅಜ್ಜಿಯ ಪ್ರೀತಿ ಅಮ್ಮ ಅಪ್ಪನ ಬಾಳದೋಣಿ
ಸಾಧನೆಯ ಕನಸಿಗೆ ಕಾಲುಹಾದಿಯಲಿ
ಓಡಾಡಿ ದಕ್ಕಿಸಿಕೊಂಡ ಹೆಮ್ಮೆ
ಈತ ಒಮ್ಮೊಮ್ಮೆ ಸೂರ್ಯ ಚಂದ್ರ
ಎಲ್ಲರ ಮುಖಗಳು ಕಣ್ಣಿಗೆ ಕಟ್ಟುತ್ತವೆ
ದುಗುಡಿನ ಸವಾರಿಗರು
ಕಾಣದ ದೇವರಿಗೆ ಹರಕೆ ಹೊರುವ ಸಮಯ

ಬೇಕಾಗಿತ್ತೆ ಈ ದೂರದ ಹಾದಿ,
ಹಣದ ಬೆನ್ನೇರಿಕೆಗೇನಾದರು ಒಳಸಂಚೆ…..
ಕನವರಿಕೆ ಕಳವಳ ತಳಮಳ
ಬಿಕ್ಕಳಿಕೆ ಅಸಹಾಯಕತೆ
ಕಿಡಕಿಯಾಚೆ ಆನೆಗಳ ಗುದ್ದಾಟ
ಸೀಳಿ ಹೊರಟಿರುವ ಈ ಜಂಬೋಸವಾರಿ…..
ಸಾವಿಗೆ ಕ್ಷಣ ಗಣನೆ ಇದ್ದೀತೆ?
ಅಯ್ಯೋ ದೇವರೆ ಬೇಕಾಗಿತ್ತೆ…..
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...