Home / ಕವನ / ಕವಿತೆ / ಧನ್ಯತೆಯ ಕನಸಿಗೆ

ಧನ್ಯತೆಯ ಕನಸಿಗೆ

ಋಷಿ ಮುನಿಗಳ ಪುಣ್ಯಧಾಮಗಳಲಿ ಸುತ್ತಿ
ಗಂಗಾ ಯಮುನಾ ಸರಸ್ವತಿಯರ ಪಾವಣಿಗಳಲಿ ಮುಳುಗಿ
ಗಳಿಸಿದ ಲಾಭಗಳೇನೇನು ಗೆಳತಿ “ಭಾರತಿ”?
ಹೊರಟಿಹೆ ಗಬ್ಬೆದ್ದ ದೇಹ ಮನಸು
ಶುಚಿಗೊಳಿಸಲು ನಿಮ್ಮ ಗಿರಿ ಧಾಮಗಳಿಗೆ-
ಬಿಳಿಯಳ ಪ್ರಶ್ನೆಗೆ ತಬ್ಬಿಬ್ಬು.
ಪಾಪ ಪ್ರಜ್ಞೆ ಕಾಡಿ ಪ್ರಾಯಶ್ಚಿತ ಬಯಸಿ
ಹೊರಟಿರುವ ಜೋಲು ಮುಖದ
ಕ್ಯಾಮಲೀನಾ ಮೌನಿ
ಮನದೊಳಗೆ ನೂರಾರು ಪ್ರಶ್ನೆಗಳ ಮೂಕಿ.

ಗಂಗೆಯ ಪಾದಕೆ ತಲೆಬಾಗಿಸಿ
ಪುಣ್ಯಭೂಮಿಯ ಮಣ್ಣು ಸ್ಪರ್ಶಿಸಿ
ಧನ್ಯತೆಯ ಭಾವ ಬಯಕೆಯ ಕನಸಿಗೆ
ಸಮಾಧಾನದ ನಾಲ್ಕು ಮಾತು ಮುತ್ತಾಯಿತವಳಿಗೆ
ಕಣ್ತುಂಬಿದ ನೀರು
ಆತ್ಮಶುದ್ದೀಕರಣದ ಮೊದಲು ಮೆಟ್ಟಿಲು

ಒಳಗೊಳಗೇ ವ್ಯಥೆ
ಆ ರಾಡಿಮಣ್ಣು ಈ ನೀರಿನಲಿ ತೊಳೆಸುವದಾ?
ಅಪವಿತ್ರ ಪವಿತ್ರ
ಪವಿತ್ರ ಅಪವಿತ್ರ-ಪವಿತ್ರ.

ಸುಳಿಸುಳಿಯೊಳಗೆ ಹರಿದಾಡಿ ಹೊರಳಾಡಿ
ಅಪ್ಪಿ ಸ್ಪರ್ಶಿಸಿ ಬಂದವರಿಗೆ
ರಮಿಸಿ ಕೈಹಿಡಿವ ಪಾವಣಿ ದಯಾಮಯಿ

ದಿಲ್ಲಿ ನೆಲಕ್ಕಿಳಿದು ಬಿಳ್ಕೊಂಡ
ಕ್ಯಾಮಿಲಾಳ ಬಿಗಿಯಪ್ಪುಗೆ
ಮನದೊಳಗೆ ಆರ್ಧ್ರತೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...