Home / ಕವನ / ಕವಿತೆ / ನಿಶ್ಶಬ್ಧ ಮೌನ

ನಿಶ್ಶಬ್ಧ ಮೌನ

ರಾತ್ರಿಯ ಆರೆಂಟು ತಾಸಿನ ವಿಮಾನ ಪ್ರಯಾಣ
ಕಿಟಕಿಯಾಚೆ ನೋಡಲೇನಿದ್ದಿತು!
ಯಾವಾಗಲೋ ಅಲ್ಲೊಂದು ಇಲ್ಲೊಂದು ಕಾಣುವ
ಸಮುದ್ರದ ಹಡಗಿನ ದೀಪಗಳು,
ಮರುಭೂಮಿಯಲಿ ಹೊತ್ತಿ ಉರಿಯುವ ಕಚ್ಚಾತೈಲ ಬೆಳಕು
ದೊಡ್ಡ ನಗರಗಳಾಗಿದ್ದರೆ ಒಂದಷ್ಟು ರಸ್ತೆ ದೀಪಗಳೋ ಏನೋ!
ನಿದ್ದೆ ಸಮಯ ಬೇರೆ ಗಡದ್ದಾದ ನಿದ್ದೆ-
ನಿದ್ದೆ ನಿದ್ದೆ ನಿದ್ದೆ

ಕೈ ಕುಲುಕಿ ಭುಜ ಅಲುಗಾಡಿಸಿ ಏನೋ ಕೇಳಿದಂತೆ….
ಎಚ್ಚರ, ಕಣ್ಮುಚ್ಚಿ ಕಣ್ಣು ಬಿಟ್ಟರೆ
ಮಬ್ಬು ಬೆಳಕಿನಲ್ಲಿ ನಿಶ್ಶಬ್ದ ಮೌನ
ಹೊದಿಕೆಯೊಳಗೆ ಪಯಣಿಗರ ನಿದ್ರೆ
ಬೆನ್ನು ತಿರುಗಿಸಿ ಕಪ್ಪು ಕೋಟಿನ ಆಕೆ ಸರಕ್ಕನೆ ಸರಿದಳು.
ಗಗನಸಖಿ ಅಲ್ಲದೆ ಮತ್ಯಾರಿದ್ದಾರು!

ಹಿಂದೊರಗಿ ಕಣ್ಣು ಮುಚ್ಚಲು ಪ್ರಯತ್ನಿಸಿದೆ
ಕಾಲಿಗೆ ಜಡ ವಸ್ತು ತಗುಲಿ ಮತ್ತೆ ಎಚ್ಚರ
ಹ್ಯಾಂಡ್ ಬ್ಯಾಗ್ ಅಲ್ಲದೇ ಮತ್ತಿನ್ನೇನು?
ಸಮಾಧಾನಿಸಿಕೊಳ್ಳುವಿಕೆ-

ವಿಮಾನ ಕೆಳಮನೆಯ ಸ್ಟೋರೇಜ್
ಕಾರ್ಗೋ ಕಂಟೈನರ್‌ಗಳ ಬಿಡಿಬಿಡಿಯಾದ ದೃಶ್ಯ.
ನೂರಾರು ಸೂಟ್‌ಕೇಸ ಬ್ಯಾಗುಗಳ ಗುಡ್ಡೆ
ಇರಲಿ ಅದಕ್ಕೇನಂತೆ!
ಅದರೊಳಗಡೆ ಅದೆಷ್ಟೋ ಪ್ರೀತಿ ಪ್ರೇಮದ ಪತ್ರಗಳು

ರಾಜಕೀಯ ವ್ಯವಹಾರಗಳ ಕಾಗದಗಳು
ಡಾಲರ್‍ಸ್, ಚೆಕ್, ಡ್ರಾಫ್ಟ್‌ಗಳ ರಾಶಿ
ಚಿನ್ನ ಬೆಳ್ಳಿ ಗಾಂಜಾ ಅಫೀಮುಗಳ ಬಚ್ಚಿಟ್ಟ ಸ್ಥಳ.
ಅದೇ ಅದೇ ಜಾಗತೀಕರಣದ ಪೇಟೆ ಪೇಟೆ….
ಇರಲಿ ಅದಕ್ಕೇನಂತೆ!

ಈ ಕಡೆಗೆ ಶೀತಾಗಾರ ಒಂದರ ಮೇಲೊಂದು ಶೆಲ್ಫ್‌ಗಳು
ಅದರೊಳಗೆ ಹೆಣಗಳ ಪೆಟ್ಟಿಗೆಗಳು
ವಿದೇಶಗಳೊಳಗೆ ಹೆಣವಾದವರು
ಮರಳಿ ಮಣ್ಣಿಗೆ ಮಣ್ಣಾಗಲು ಬರುತ್ತಿದ್ದಾರೆ.
ದಡಕ್ಕನೇ ಎದೆಬಡಿತ ಜೋರಾದದ್ದು.
ನನ್ನ ಕಾಲ ಕೆಳಗಿನ ಮನೆಯಲ್ಲೇ
ಅನಾಥ ಹೆಣಗಳಿದ್ದು ಕೂತಿರಬಹುದೆ
ಹೊರಟಾಗ ಇದೇ ಸೀಟಿನಲ್ಲಿ ಕುಳಿತು
ಈಗ ಇದೇ ಸೀಟಿನ ಕೆಳಗೆ ಏಕಾಂಗಿಯಾಗಿ
ರೋಧಿಸುತ್ತಿರಬಹುದೆ!

ಕೆಳಗೆ ನಿರ್ಜೀವಿಗಳ ಸ್ಮಶಾನ
ಮೇಲೆ ರಾಜನರಮನೆ ಟಚ್
ಕ್ಷಣಾರ್ಧದಲ್ಲಿ ಎದೆಯೊಡೆದು ಭೀತಿ ಮೂಡಿ
ಮೈತುಂಬ ಸಣ್ಣಗೆ ಬೆವರು ನಡುಕ-
ಈ ವಿಮಾನದೊಳಗೆ ಇದೆಲ್ಲ ಇರದಿರಲಿ ದೇವರೆ-
ನನ್ನ ಸೀಟಿನ ಎಲ್ಲ ಲೈಟು ಬಟನ್‌ಗಳು ಶುರುಮಾಡಿ ಕಣ್ಮುಚ್ಚಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...