Home / ಕವನ / ಕವಿತೆ / ಬ್ರಿಟೀಷ್ ಕಡಲ್ಗಾಲುವೆಯಲ್ಲಿ

ಬ್ರಿಟೀಷ್ ಕಡಲ್ಗಾಲುವೆಯಲ್ಲಿ

ಅಲೆ ಅಲೆಗಳು ಎಳೆದು
ಮುದ್ದಿಸುತ ಮುನ್ನುಗ್ಗುವ
ಹಡಗಿನ ಅಂಚಿಗೆ ನಾನೊರಗಿ ನಿಂತಿದ್ದೆ.
ತುಂತುರ ಮಳೆಗೆ
ಹೊಯ್ದಾಟದ ಹಡಗಿನ ಗಮ್ಮತ್ತಿಗೆ
ಮೈಯೆಲ್ಲಾ ಕಚಗುಳಿಯಾಗುತ್ತಿತ್ತು
ದೂರದ ದೀಪಸ್ತಂಭ
ಸರಹದ್ದಿನ ಭವ್ಯ ಮಹಲುಗಳು
ಸರಕು ಹಡಗುಗಳ ಓಡಾಟ
ಮಂಜು ಮೋಡಗಳೊಳಗೆ
ತೂಗಾಡುವ Sea gullಗಳ
ಸಿನೀಕ್ ದೃಶ್ಯದಲ್ಲಿ
ಕಾಲುವೆಯ ತಣ್ಣನೆಯ ನೀರಿನ
ಕೊರೆಯುವ ಚಳಿಯಲ್ಲಿ ತೇಲಾಡುತ್ತಿದ್ದೆ.
ದ್ವೀಪಗಳಗುಂಟ ಹೊರಳುವಾಗ
ಬಾಲ್ಯದ ಚಂದಮಾಮ ಕಥೆಗಳು
ಏಳು ಸಮುದ್ರದಾಟಿ
ರಾಜಕುಮಾರಿ ಕರೆತರುವ
ರಾಜಕುಮಾರನ ಸಾಹಸಗಳಿಗೆ,
ಮೈ ನವಿರೆಬ್ಬಸಿದ ಆ ಬಾಲೀಶಕ್ಕೆ
ಆ ಆನಂದಕ್ಕೆ, ಮೈ ಮನ
ಹಗುರಾಗಿಸಿಕೊಂಡು
ನಗುತ್ತಲೇ ಈಚೆ ಹೊರಳುವಾಗ
ಪಕ್ಕದ ಸ್ಪ್ಯಾನಿಷ್‌ ಗುಂಪು
ಪ್ಲ್ಯಾಶ್ ಮಾಡಿಕೊಳ್ಳುತ್ತದೆ
ಪುಂಖಾನು ಪುಂಖವಾಗಿ ಮೋಡಗಳು
ಆಕಾಶದಲ್ಲಿ ತೇಲುತ್ತಲೇ ಇವೆ.
ಕೊರೆವ ಮಂಜು
ಎದೆ ನಡಗುವ ಕಡಲುಬ್ಬರಗಳಲ್ಲೂ
ಜಲ ಕನ್ಯೆಯಾಗಿ (mermaid)
ದ್ವೀಪಗಳು ಹೊಕ್ಕು
ಸಂಶಯದ- ಕಟ್ಟುಕಥೆಗಳ
ಬಲೆಗಳೆಳೆದು ಎಳೆಯ ಬಾಲೀಷ
ವಿಜ್ಞಾನಗಳಿಗೆ ವಸ್ತುವಾಗಿಸಿ
ಅನಂತಕ್ಕೇರಿಸುವ; ಸಮುದ್ರದಾಳದ
ಕೊಳವೆ ಮಾರ್ಗದಲ್ಲಿ
(ಇಂಗ್ಲೆಂಡು ಪ್ರಾನ್ಸ್‌ಗಳ ನಡುವೆ)
ಓದಾಡುವ ರೈಲು ಕಾರುಗಳಲ್ಲೆಲ್ಲ
ಓಡಾಡಿಸುವ ಯೋಜನೆ.
ಓರಿಯೆಂಟ್ ಫೆರ್ರಿ ಮುನ್ನುಗ್ಗುತ್ತಿದೆ.
ಕಡಲಂಚು ಅಂಚುಗಳಿಗೆ
ಪೂರ್ವ ಸಿದ್ಧತೆಗಳಿಲ್ಲದೆಯೂ
ಮನಸ್ಸು ಅಂಟಿಕೊಳ್ಳುತ್ತದೆ.
ತುಂತುರ ಮಳೆಗೆ
ಸೂರ್ಯನ ಕಿರಣಗಳು ಸ್ಫಟಿಕಗಳಾಗಿ
ತಲೆ ತುಂಬ ಮೆತ್ತಿ
ವಜ್ರ ಮುಕುಟಗಳಾಗುತ್ತವೆ
ಬ್ರಿಟೀಷ್ ಕಡಲ್ಗಾಲುವೆಯ
ರಾಣಿಯಾಗಿ ನನ್ನ
ಕಾಲರ್ ಸರಿಪಡಿಸಿಕೊಳ್ಳುತ್ತ
ಫೆರ್ರಿ ಮೇಲೆ ಗಂಭೀರ ಹೆಜ್ಜಿಯಿಂದ
ಓಡಾಡಿ ವಜ್ರಮುಕುಟಗಳನ್ನು
ಮುಟ್ಟುತ್ತ ಮುದ್ದಿಸುತ್ತ
ಪ್ಯಾರಿ ನಗರ ಪ್ಯಾರಿಸ್ಸಿಗೆ ಹೆಜ್ಜೆ ಊರಿದೆ.
(ಇಂಗ್ಲೆಂಡಿನಿಂದ ಪ್ರಾನ್ಸ್‌ಗೆ ಹೋಗುವಾಗ ಓರಿಯಂಟ್ ಫೆರ್ರಿಯಿಂದ(ಹಡಗು) ನೋಡಿದ ಅನಿಸಿದ ಆನಂದಿಸಿದ ದೃಶ್ಯ)
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...