Home / ಕವನ / ಕವಿತೆ / ಪಂಚ ಕನ್ಯೆಯರು

ಪಂಚ ಕನ್ಯೆಯರು

ಬ್ರಿಟೀಷ್ ಏರ್‌ವೇಸ್ ಪಯಣ
ಒಳಗಡೆ ಬಿಳಿಯ ಐದೂ ಹುಡುಗಿಯರ ಕಲವರ;
ಇವರು ಪಂಚಕನ್ಯೆಯರೆ…..
ಹಾಗೆಂದೇ ಕರೆಯುತ್ತಿದ್ದಾರೆ ಸಹ
ಭಾರತೀಯ ಪಯಣಿಗರು. ಜೊತೆಗೆ
ಹಸಿರು ಕಣ್ಣಿನ ಕೆಂಪು ತುಟಿಯ
ಈಗಷ್ಟೇ ಅರಳಿದಂತಿರುವ ಗುಲಾಬಿ ಸಖಿಯರು.

ತೂಗುಬಿಟ್ಟ ಗೊಂಡೆಜಡೆ, ಎತ್ತಿ ಕಟ್ಟಿದ
ಕೂದಲಗಂಟು ಸುತ್ತಲೂ ಮಲ್ಲಿಗೆ ಮಾಲೆ
ಶಂಕಚಕ್ರ ಚಿಪ್ಪು ಮಣಿ ಹವಳ
ರುದ್ರಾಕ್ಷಿ ತಾಯಿತ ಕರಿಮಣಿಗಳ ಸರಗಳು
ಕತ್ತಿಗೆ ಭಾರವಾದರೂ ಸಂತೋಷಿಸುವ ರೀತಿ

ಕೊಲ್ಹಾಪೂರಿ ಚಪ್ಪಲಿ, ಬಣ್ಣಬಣ್ಣದ
ಹಾವು ಚೇಳಿನ ಅಂದದ ಕುಂಕುಮ ಬಿಂದಿಗಳು
ಕೈತುಂಬಾ ಗಾಜಿನ ಬಳೆ, ಕಾಲಿಗೆ ಗೆಜ್ಜೆ, ಮೂಗಿಗೆ ನತ್ತು
ಚೂಡಿದಾರ್‍, ಗಾಗರಾಚೋಲಿ, ಮಿಂಚು ಮಿಂಚಿನ
ಟೀಶರ್ಟ್, ಲಾಲ್ ದುಪ್ಪಟ್ಟಾ
ಹತ್ತಾರು ಹಿಂದಿ ಮಾತು ಕಥೆ ಹಾಡು
(ಹವಾಮೆ ಉಡತೆ ಜಾಯೆ ಮೇರೆ ಲಾಲದುಪಟ್ಟಾ
ಮಲ್ ಮಲ್ ಜಿಹೋ ಜೀ….)

ಇತಿಹಾಸ ಓದಿ ಕೇಳಿ ಬಂದ
ಇಂಗ್ಲೆಂಡ್ ಹುಡುಗಿಯರ ಭಾರತ ಪ್ರವಾಸ
ಕಂಡದ್ದೆಲ್ಲಾ ಕೊಂಡು ನೋಡಿದ ಪ್ರೀತಿ

ಇಡೀ ದೇಶಸುತ್ತಿ ಮೋಜು ಮಜ
ಮಾಡಿದಿರಾ? ಕುಟುಕಿದ್ದಕ್ಕೆ
ಸಂಶೋಧನಾ ವಿದ್ಯಾರ್ಥಿನಿಯರ
“ಸಂಸ್ಕೃತಿ ಅಧ್ಯಯನ” ಪರಿ ಬಿಡಿಬಿಡಿಸಿ
ಹೇಳಿದಂತೆ
ಕುತೂಹಲದ ಬಿಳಿಯ ಬ್ರಿಟೀಷರು
ಸುತ್ತಿ ಸುತ್ತಿ ಕಪ್ಪಾಗಿ ಮುಖತುಂಬ ಬೊಬ್ಬೆದ್ದ
ಪಂಚಕನ್ಯೆಯರನು ತಬ್ಬಿ
“ನಮ್ಮ ಹುಡುಗಿಯರ ಸಾಧನೆ” ಎಂದಾಗ
ಪೆಚ್ಚಾದ ಭಾರತೀಯ ಪಯಣಿಗರ ಮುಖ
ಮಂಗನಂತಾಗಿದ್ದೊಂದು ಬಗೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...