Home / ಕವನ / ಕವಿತೆ / ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ನಾಡಿಗೆ
ಅಲ್ಲಿ ಏನೆಲ್ಲ ಇದೆಯಂತೆ
ಅದೊಂದು ಮಾಯಾ ಪೆಟ್ಟಿಗೆಯಂತೆ
ಬೇಕೆಂದದ್ದೂ ಬೇಡವೆಂದದ್ದೂ ಕಾಣುತ್ತದಂತೆ
ಸುಮ್ಮನೆ ಕನಸು ಕಾಣಬಾರದಂತೆ;
ಮೈ ಮನಸುಗಳೆಲ್ಲೆಲ್ಲಾ ಕಚಗುಳಿ ಕುತೂಹಲ
ವಿಚಿತ್ರವಲ್ಲದೇ ಮತ್ತಿನ್ನೇನು-

ಕಣ್ಣಿಗೆ ಎಣ್ಣೆ ಹಾಕಿಕೊಂಡೇ ಕಿಟಕಿಯ ಪಕ್ಕ ಕುಳಿತಿದ್ದೇನೆ.
ಅಕ್ಕಪಕ್ಕ-ಮುಂದಿನ-ಹಿಂದಿನ ಸೀಟುಗಳಲ್ಲೆಲ್ಲಾ
ಘಾಟಿಯೋ, ಹುಳಿಯೊಗರಿನ ಎಣ್ಣೆಯ ವಾಸನೆ.
ಅವರೂ ಚುರುಕಾಗಿರಬೇಕೆಂದೇ ತಾನೆ!
ಕುಬೇರನರಮನೆಗೆ ಹೋಗಲು
ಕಣ್ತುಂಬ ಮನತುಂಬ ಲೂಟಿ ಮಾಡಲು-

ಮೋಡಗಳು ಅದೇಕೋ ಹಿಂದೆ ಹಿಂದೆಯೇ ಉಳಿದವು.
ಸಮುದ್ರ ತೆರೆಗಳಿಗೆ ನಗುವಿಲ್ಲ, ಬಾಯಿಗೆ ಬೀಗ ಹಾಕಿಕೊಂಡವೋ
ಅವುಗಳೊಂದಿಗೆ ಮಾತನಾಡುತ್ತಿದ್ದೆನಲ್ಲಾ!!!
ಕುಬೇರನ ವಿಲಾಸಿ ಬುದಕ ನೋಡ ಹೊರಟಿರುವೆನೆಂದು
ಯಾಕೋ ಮುಖ ಕವುಚಿಕೊಂಡು
ಕೇಳಿಯೂ ಕೇಳಿಸದಂತೆ ಮೆಳ್ಳಗಣ್ಣಲ್ಲಿ
ಮೈಯೊಡಮೂರಿ ಆಚೆ ಹೊರಳಿದವು.

ವೈನ್ ಸುರಿವ ಸುಂದರಿ ಕಿಲಕಿಲಸಿ
‘ಮೊದಲ ಸಲ ಅಮೇರಿಕಾ ಪ್ರವಾಸವೆ?
ಸುರಿಯಲೇ ಮಾಯಾನಗರಿಯ ರಹಸ್ಯ.’
ಆರಡಿ ಹೆಣ್ಣಿನ ಮೂರು ಮಾತುಗಳು
ಹಸಿರು ಕಣ್ಣಿನ ಬೆಕ್ಕಿನ ನೋಟ
ಕಿವಿಯವರೆಗಿನ ಬಾಯಗಲ ನಗು
ಕುಬೇರನರಮನೆಯ ಸ್ವಾಗತ ಕಾರಿಣಿಯ
ಬೆಡಗಿಗೆ ಮೊದಲ ಹಂತದಲ್ಲೇ ಬೆಚ್ಚಿ ಬಿದ್ದೆ.

ಕುತೂಹಲದ ಮೂಟೆಯ ನನ್ನ ಮುಖ
ಹಳಬನೊಬ್ಬ ಕುಬೇರನರಮನೆಯ ಹೊಕ್ಕು
ಚಿತ್ರ ವಿಚಿತ್ರ ಸೆಳೆತದ ಭ್ರಮೆ ಸಂತೋಷಿಸಿ
ನೆಮ್ಮದಿ ಕಳೆದುಕೊಂಡದ್ದಾಗಿ,
ಶಾಂತಿಗಾಗಿ ಯೋಗಾಶ್ರಮಗಳು ಹುಡುಕುತ್ತಾ
ಊರೂರ ಅಲೆಯುತ್ತಿರುವುದಾಗಿ ಉಸಿರಾಡಿದ.
ಕಿಟಕಿಯಾಚೆ ಮೋಡಗಳ ಗಹಗಹಿಸುವಿಕೆ
ದೂರದೂರ ಕೆಳಗೆ ಸಮುದ್ರದಬ್ಬರಿಸುವಿಕೆಯ
ಶಬ್ದ ಶಬ್ದ ಶಬ್ದ
ಅದೇಕೋ ಮತ್ತೊಮ್ಮೆ ನನ್ನ ನೂಕಿ
ತೇಲಾಡಿ ಸುತ್ತಾಡಿ ಹೊರಳಾಡಿ
ಗಕ್ಕೆಂದು ಹಿಂದಿರುಗಿ ಹೊರಟೇ ಹೋದವು.

ಹಾಗಾದರೆ ಕುಬೇರನ ದೇಶ ನೋಡಲೆ?
ಅಥವಾ ನಾಳೆ ಬೆಳಗಾಗುವುದರಲ್ಲೇ
ಮರು ಪ್ರಯಾಣಿಸಿ ಯೋಗಾಶ್ರಮ ಹುಡುಕಲೆ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...